ಕೋರೊನಾ ಸೋಂಕಿತರ ಜತೆ ವೈದ್ಯರ ಬ್ಯಾಡ್ಮಿಂಟನ್

Tuesday, July 21st, 2020
badminton

ಹುಬ್ಬಳ್ಳಿ: ಕೊರೊನಾ ವೈರಸ್ ರೋಗಿಗಳನ್ನು ಕೊವಿಡ್ ಕೇಂದ್ರಗಳಲ್ಲಿ ಹಾಗೂ ಆಸ್ಪತ್ರೆಗಳಲ್ಲಿ ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂಬ ಅನೇಕ ಘಟನೆಗಳು ನಡೆದಿವೆ. ಇಂತಹದ ನಡುವೆ ಕೊವಿಡ್ ರೋಗಿಗಳನ್ನು ಬಹಳ ಚೆನ್ನಾಗಿ ನೋಡಿಕೊಳ್ಳುತ್ತಿರುವ ವೈದ್ಯರು ಹಾಗೂ ಆಸ್ಪತ್ರೆಗಳ ಸಹ ಗಮನ ಸೆಳೆಯುತ್ತಿದೆ. ಹುಬ್ಬಳ್ಳಿಯ ಕೊರೊನಾ ಆಸ್ಪತ್ರೆಯಲ್ಲಿ ಕೊವಿಡ್ ರೋಗಿಗಳ ಜೊತೆ ಸ್ವತಃ ವೈದ್ಯರು ಬ್ಯಾಡ್ಮಿಂಟನ್ ಆಟ ಆಡುತ್ತಿದ್ದಾರೆ. ಕೊವಿಡ್ ರೋಗಿಗಳು ಮತ್ತು ವೈದ್ಯರು ಬ್ಯಾಡ್ಮಿಂಟನ್ ಆಡುತ್ತಿರುವ ಫೋಟೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇತ್ತೀಚಿಗಷ್ಟೆ ಕೊವಿಡ್ […]

ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆ

Wednesday, January 29th, 2020
saina

ನವದೆಹಲಿ : ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ ಸೈನಾ ನೆಹ್ವಾಲ್ ಅವರಿಗೆ ಬಿಜೆಪಿಗೆ ಶಾಲನ್ನು ಹಾಕುವ ಮೂಲಕ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ 29 ವರ್ಷದ ಸೈನಾ, ನಾನು ನರೇಂದ್ರ ಮೋದಿ ಅವರಿಂದ ಪ್ರೇರಣೆಗೊಂಡು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ಎಂದು ತಿಳಿಸಿದರು. ನಾನು ದೇಶಕ್ಕಾಗಿ ಹಲವು ಪದಕಗಳನ್ನು ಗೆದ್ದುಕೊಂಡಿದ್ದೇನೆ. ನಾನು ಕಠಿಣ ಪರಿಶ್ರಮ ಪಡುವ ವ್ಯಕ್ತಿಯಾಗಿದ್ದು, ಕಠಿಣ ಪರಿಶ್ರಮ ಪಡುವ ವ್ಯಕ್ತಿಗಳನ್ನು ನಾನು ಇಷ್ಟ ಪಡುತ್ತೇನೆ. ಪ್ರಧಾನಿ ನರೇಂದ್ರ […]

ಹೊಸ ಹುಮ್ಮಸ್ಸಿನಲ್ಲಿ ಪಿವಿ ಸಿಂಧು, ಸೈನಾ ನೆಹ್ವಾಲ್

Tuesday, January 7th, 2020
sindhu-and-saina

ಕೌಲಾಲಂಪುರ : ಹೊಸ ವರ್ಷದ ಮೊದಲ ಸವಾಲಿಗೆ ಸಜ್ಜಾಗಿರುವ ಹಾಲಿ ವಿಶ್ವ ಚಾಂಪಿಯನ್ ಪಿವಿ ಸಿಂಧು, ಅನುಭವಿ ಷಟ್ಲರ್ ಸೈನಾ ನೆಹ್ವಾಲ್ ಶುಭಾರಂಭದ ನಿರೀಕ್ಷೆಯೊಂದಿಗೆ ಮಂಗಳವಾರ ದಿಂದ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ವರ್ಷ ಸ್ವಿಜರ್ಲೆಂಡ್ನ ಬಸೆಲ್ ನಲ್ಲಿ ವಿಶ್ವ ಚಾಂಪಿಯನ್ ಪಟ್ಟಕ್ಕೇರಿ ಐತಿಹಾಸಿಕ ಸಾಧನೆ ಮೆರೆದರೂ ಬಳಿಕ ಸತತ ಸೋಲುಗಳಿಂದ ಕಂಗೆಟ್ಟಿರುವ ಸಿಂಧು ಗೆಲುವಿನ ಹಾದಿಗೆ ಮರಳುವ ಹಂಬಲದಲ್ಲಿದ್ದಾರೆ. ಗಾಯದ ಸಮಸ್ಯೆ ಯಿಂದಾಗಿ ಕಳೆದ ನವೆಂಬರ್ನಲ್ಲಿ ಸಯ್ಯದ್ ಮೋದಿ ಇಂಟರ್ನ್ಯಾಷನಲ್ […]

ಕಾರ್ಕಳ : ಬ್ಯಾಡ್ಮಿಂಟನ್ ಪಂದ್ಯದಲ್ಲಿ ಇಬ್ಬರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ

Monday, October 21st, 2019
badmitan

ಕಾರ್ಕಳ: ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರು ಈಚೆಗೆ ಕಲಬುರ್ಗಿಯಲ್ಲಿ ನಡೆದ ರಾಜ್ಯ ಮಟ್ಟದ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ್ದು, ಅವರಲ್ಲಿ ಇಬ್ಬರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಾದ ಭಕ್ತಿ ಶೇರ್ವೆಗಾರ್ ಮತ್ತು ಶ್ವೇತಾ ಶೆಣೈ ಇವರು ಆಂಧ್ರ ಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಪದವಿ ಪೂರ್ವ ಕಾಲೇಜು ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶ್ರೀ ಭುವನೇಂದ್ರ ಪದವಿ ಕಾಲೇಜಿನ ಪ್ರಾಂಶುಪಾಲ ರಮೇಶ್ ಎಸ್.ಸಿ. ತಿಳಿಸಿದ್ದಾರೆ. ವಿದ್ಯಾರ್ಥಿನಿಯರ ಅಭೂತ ಪೂರ್ವ ಸಾಧನೆಗೆ ಕಾಲೇಜಿನ ಆಡಳಿತ […]