ಆ್ಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದೆ ಸತಾಯಿಸಿದ ಕಾರು ಚಾಲಕನ ಬಂಧನ

Thursday, January 20th, 2022
Monish

ಮಂಗಳೂರು : ನಗರದಿಂದ ಭಟ್ಕಳಕ್ಕೆ ಗಂಭೀರ ಸ್ಥಿತಿಯಲ್ಲಿದ್ದ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಗೆ ದಾರಿಬಿಟ್ಟು ಕೊಡದೆ ಅಡ್ಡಾದಿಡ್ಡಿಯಾಗಿ ಕಾರು ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಮೋನಿಶ್ ಎಂದು ಗುರುತಿಸಲಾಗಿದೆ. ಮಂಗಳೂರು ಉತ್ತರ ಸಂಚಾರಿ ಠಾಣೆಯಲ್ಲಿ ಯು ಎಸ್ 279 ಐಪಿಸಿ ಮತ್ತು 184 ಐಎಂವಿ ಆಕ್ಟ್ ಪ್ರಕಾರ ಪ್ರಕರಣ ದಾಖಲಾಗಿದೆ. ಇದೇ ಕಾರಿನ ಚಾಲಕನು ಉಡುಪಿಯಿಂದ ಮಂಗಳೂರಿಗೆ ಬರುತ್ತಿದ್ದ ಆ್ಯಂಬುಲೆನ್ಸ್‌ಗೆಕಿರುಕುಳ ನೀಡಿದ್ದಾನೆ ಎಂಬ ಆರೋಪವೂ ವ್ಯಕ್ತವಾಗಿದೆ. ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ರೋಗಿಯನ್ನು ಬುಧವಾರ […]

ಭಟ್ಕಳದಲ್ಲಿ 8 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನಿ ಮಹಿಳೆಯ ಬಂಧನ

Thursday, June 10th, 2021
Kathija-Meharin

ಭಟ್ಕಳ : ಕಳೆದ 8 ವರ್ಷಗಳಿಂದ ಭಟ್ಕಳದಲ್ಲಿ ಅಕ್ರಮವಾಗಿ ವಾಸವಾಗಿರುವ ಪಾಕ್ ಮೂಲದ ಮಹಿಳೆ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದ್ದು, ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಪಾಕಿಸ್ತಾನ ಪೌರತ್ವ ಹೊಂದಿದ್ದ ಖತೀಜಾ ಮೆಹರಿನ್ ಬಂಧಿತ ಮಹಿಳೆಯಾಗಿದ್ದಾಳೆ. ಭಟ್ಕಳ ತಾಲೂಕಿನ ನವಾಯತ್ ಕಾಲನಿಯಲ್ಲಿ ಮಹಿಳೆ ಅಕ್ರಮವಾಗಿ ನೆಲೆಸಿದ್ದು ಈ ಬಗ್ಗೆ ಜೂನ್ 8 ರಂದು ಮಾಹಿತಿ ಲಭಿಸಿತ್ತು. ಆಕೆಯನ್ನು ಬಂಧಿಸುವ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡು ಆಕೆಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಪಾಕಿಸ್ತಾನ ಪೌರತ್ವ ಹೊಂದಿದ್ದ ಖತೀಜಾ ಮೆಹರಿನ್ ಭಾರತಕ್ಕೆ […]

ಭಟ್ಕಳದ ವ್ಯಕ್ತಿಯಿಂದ ರೂ. 13,17,860 ಮೌಲ್ಯದ ಅಕ್ರಮ ಚಿನ್ನ ವಶಪಡಿಸಿಕೊಂಡ ಕಸ್ಟಮ್ ಅಧಿಕಾರಿಗಳು

Friday, May 28th, 2021
gold

ಮಂಗಳೂರು : ಕಸ್ಟಮ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಶುಕ್ರವಾರ ಮೇ 26 ರಂದು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಸಿದ್ದಿಕ್ ಮಿಕ್ದಿಮ್ ಹುಸೈನ್ ಎಂಬಾತ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕ. ಆತ ದುಬೈನಿಂದ ಏರ್ ಇಂಡಿಯಾ ವಿಮಾನ IX 384 ಮೂಲಕ ಆಗಮಿಸಿದ್ದ. ಈತನ ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈತನಿಂದ 24 ಕ್ಯಾರೆಟ್ ಪರಿಶುದ್ಧತೆಯ 262 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಇದರ […]

ಕುಂದಾಪುರ : ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಮೂವರ ಬಂಧನ; 1.633 ಕೆಜಿ ಚಿನ್ನಾಭರಣ ವಶ

Wednesday, December 18th, 2019
kundapura

ಕುಂದಾಪುರ : ಎರಡು ಜಿಲ್ಲೆಗಳ ಪೊಲೀಸ್‌ ಅಧಿಕಾರಿಗಳಾದ ಕುಂದಾಪುರ ಹಾಗೂ ಭಟ್ಕಳ ಎಎಸ್ಪಿಗಳ ತಂಡ ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಚಿನ್ನ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮೂವರನ್ನು ಮಂಗಳವಾರ ಬಂಧಿಸಿ 61.47 ಲಕ್ಷ ರೂ. ಮೌಲ್ಯದ 1.633 ಕೆಜಿ ತೂಕದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಎರ್ನಾಕುಲಂ ಕಡೆಯಿಂದ ಅಕ್ರಮವಾಗಿ ರೈಲಿನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವ ಮಾಹಿತಿ ಪಡೆದ ಕುಂದಾಪುರ ಎಎಸ್ಪಿ ಹರಿರಾಮ್‌ ಶಂಕರ್‌ ಅವರು ಆರೋಪಿಗಳ ಬೇಟೆಗಾಗಿ ತಂಡ ರಚಿಸಿ ಕುಂದಾಪುರ, ಬೈಂದೂರು, ಭಟ್ಕಳ ರೈಲು ನಿಲ್ದಾಣ ಗಳಲ್ಲಿ ಕಾದು […]

ಭಟ್ಕಳ : ರೈಲಿನಲ್ಲಿ ಕಳ್ಳತನ ಮಾಡುತಿದ್ದ ಇಬ್ಬರು ಆರೋಪಿಗಳು ರೈಲ್ವೇ ಪೋಲಿಸರ ವಶಕ್ಕೆ

Saturday, November 2nd, 2019
Bhatkal

ಭಟ್ಕಳ : ರೈಲಿನಲ್ಲಿ ಕಳ್ಳತನ ಮಾಡುತಿದ್ದ ಉಪ್ಪಿನಂಗಡಿಯ ಅಬ್ದುಲ್ ರಶೀದ್(22) ಹಾಗೂ ಬಂಟ್ವಾಳದ ಇಸಾಕ್ (19) ಇವರಿಬ್ಬರನ್ನು ರೈಲ್ವೇ ಪೋಲಿಸರು ಶುಕ್ರವಾರ ಬಂಧಿಸಿದ್ದಾರೆ. ಭಟ್ಕಳದಲ್ಲಿ ನಿಧಾನವಾಗಿ ಚಲಿಸುತ್ತಿದ್ದ ನೇತ್ರಾವತಿ ಎಕ್ಸ್ ಪ್ರೆಸ್ ನಿಂದ ಕೆಳಗಿಳಿದು ಶಿರೂರು ಕಡೆ ಓಡುತ್ತಿದ್ದ ಮಾಹಿತಿ ಪಡೆದು ಬೆನ್ನಟ್ಟಿದ ಪೊಲೀಸರು ಅಂಡರ್ ಬ್ರಿಡ್ಜ್ ಅಡಿಯಲ್ಲಿ ಅಡಗಿ ಕುಳಿತ್ತಿದ್ದ ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಬೈಂದೂರಿನಲ್ಲಿ ರೈಲು ಏರಿ ಮಹಿಳೆಯ ಬ್ಯಾಗ್ ಕಳ್ಳತನ ಮಾಡಿದ್ದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆ. ಕಳ್ಳರ ಕೈಯಲ್ಲಿದ್ದ ಬ್ಯಾಗನ್ನು ವಶಪಡಿಸಿ ಶೋಧಿಸಿದಾಗ […]

ಭಟ್ಕಳ : ಆಟೋ ರಿಕ್ಷಾದಲ್ಲಿ ಸಿಕ್ಕ ಒಡವೆ ಬ್ಯಾಗ್ ಹಿಂತಿರುಗಿಸಿದ ಆಟೋ ಚಾಲಕ

Tuesday, October 15th, 2019
auto-riksha

ಭಟ್ಕಳ : ತನ್ನ ಆಟೋ ರಿಕ್ಷಾದಲ್ಲಿ ಸಿಕ್ಕ ಮಹಿಳೆಯೋರ್ವರ ಪರ್ಸನ್ನು ಠಾಣೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕನನ್ನು ಭಟ್ಕಳ ಉಪ ವಿಭಾಗದ ಎಎಸ್‍ಪಿ ನಿಖಿಲ ಬಿ. ಸನ್ಮಾನಿಸಿ ಚಾಲಕನ‌ ಕಾರ್ಯವನ್ನು ಶ್ಲಾಘಿಸಿದರು. ಇತ್ತೀಚಿನ ದಿನಗಳಲ್ಲಿ ಆಟೋ ಚಾಲಕರೆಂದರೆ ಮೂಗು ಮುರಿಯುವ ಸಾರ್ವಜನಿಕರಿಗೆ ಇಲ್ಲೊಬ್ಬ ಆಟೋ ಚಾಲಕ ಸಾರ್ವಜನಿಕರಿಂದಲೇ ಶಹಬ್ಬಾಸ್ಗಿರಿ ಪಡೆದುಕೊಂಡಿದ್ದಾನೆ. ಆಟೋ ಚಾಲಕ ಅಣ್ಣಪ್ಪ ಗೊಂಡ ಎಂಬಾತ ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಇಲ್ಲಿನ ನಿಶಾತ ಆಸ್ಪತ್ರೆಯಿಂದ ಇಬ್ಬರು ಮಹಿಳೆಯರು, ಒಬ್ಬ ಪುರುಷನನ್ನು ಇಲ್ಲಿನ […]

ಭಟ್ಕಳ : ಯಾಂತ್ರಿಕ ದೋಣಿ ಮುಳುಗಡೆ : ಐದು ಮಂದಿ ಮೀನುಗಾರರ ರಕ್ಷಣೆ

Monday, September 16th, 2019
bhatkala

ಭಟ್ಕಳ : ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳಗಡೆಗೊಂಡಿದ್ದು ಐದು ಮಂದಿ ಮೀನುಗಾರರನ್ನು ರಕ್ಷಿಸಿದ ಘಟನೆ ಭಟ್ಕಳ ಸಮೀಪದ ಅರಬ್ಬಿ ಸಮುದ್ರದಲ್ಲಿ ಭಾನುವಾರ ಸಂಭವಿಸಿದೆ. ಶ್ರೀ ಲಕ್ಷ್ಮೀವೆಂಕಟೇಶ ಹೆಸರಿನ ಈ ದೋಣಿ ರಾಘವೇಂದ್ರ ಖಾರ್ವಿ ಎಂಬುವವರಿಗೆ ಸೇರಿದ್ದು. ರಾಘವೇಂದ್ರ, ಚೇತನ, ಉದಯಕುಮಾರ, ಶನಿಯಾರ, ಸುಬ್ರಹ್ಮಣ್ಯ ಎಂಬವರನ್ನು ಅಪಾಯದಿಂದ ರಕ್ಷಿಸಲಾಗಿದೆ. ಭಾನುವಾರ ಬೆಳಿಗ್ಗೆ ತಾಲೂಕಿನ ಕರಿಕಾಲ್ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ, ಬುಡದಿಂದ ನೀರು ತುಂಬಿಕೊಂಡ ಪರಿಣಾಮ ಈ ದುರ್ಘಟನೆ […]

ಲಾರಿ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ : ಹೊತ್ತಿ ಉರಿದ ಲಾರಿ

Friday, August 30th, 2019
bhatkala

ಭಟ್ಕಳ : ಲಾರಿ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಡೀಸೆಲ್ ಟ್ಯಾಂಕಿಗೆ ಬೆಂಕಿ ತಗುಲಿ ರಸ್ತೆ ಮಧ್ಯೆದಲ್ಲಿಯೇ ಟ್ಯಾಂಕರ್ ಮತ್ತು ಲಾರಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೈಲೂರು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಕೇರಳ ಹಾಗೂ ಕರ್ನಾಟಕದ ಬಿಜಾಪುರ ಮೂಲದ ಲಾರಿ ಮತ್ತು ಟ್ಯಾಂಕರ್’ಗಳ ನಡುವೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಡೀಸೆಲ್ ಟ್ಯಾಂಕರ್ ಮತ್ತು ಲಾರಿಗೆ ಬೆಂಕಿ ತಗುಲಿ ಹೊತ್ತಿ ಉರಿದು ಸಂಪೂರ್ಣ ಭಸ್ಮವಾಗಿದೆ. […]

ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ: 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Friday, September 21st, 2018
byndoor

ಉಡುಪಿ: ಎರಡು ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸುಮಾರು 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ತ್ರಾಸಿ ಕಡಲ ತೀರದ ಬಳಿ ನಡೆದಿದೆ. ಸಾಗರದಿಂದ ಭಟ್ಕಳ ಮೂಲಕ ಕುಂದಾಪುರಕ್ಕೆ ಬರುತ್ತಿದ್ದ ಬಸ್ಸು ಮತ್ತು ಹುಬ್ಬಳ್ಳಿಯತ್ತ ಸಾಗುತ್ತಿದ್ದ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಎರಡು ಬಸ್ಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಗಾಯಾಳು ಪ್ರಯಾಣಿಕರನ್ನು ಕುಂದಾಪುರ ಹಾಗೂ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗಂಗೊಳ್ಳಿ ಪೊಲೀಸ್ […]

ಭಟ್ಕಳ ಸಮೀಪದ ಮುಗ್ಳಿಹೊಂಡದಲ್ಲಿ ಭೀಕರ ಅಪಘಾತ ಬೈಕ್ ಸವಾರರಿಬ್ಬರ ಸಾವು

Wednesday, March 13th, 2013
Bhatkal bike accsident

ಕುಂದಾಪುರ : ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಶಿರೂರಿನ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಬೈಕ್ ಸವಾರರಿಬ್ಬರು ಭಟ್ಕಳ ಸಮೀಪದ ಮುಗ್ಳಿಹೊಂಡ ಎಂಬಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಬೈಂದೂರು ಸಮೀಪದ ಶಿರೂರಿನ ಮಾರ್ಕೆಟ್ ರಸ್ತೆ ನಿವಾಸಿಗಳಾದ ಹುರೈಸ್(೧೮) ಹಾಗೂ ತನೀರ್ ಅಧಮ್(೧೮) ಮೃತ ಬೈಕ್ ಸವಾರರಾಗಿದ್ದಾರೆ. ಹುರೈಸ್ ಹಾಗೂ ತನೀರ್ ಅಧಮ್ ಭಟ್ಕಳದ ಹೊಟೇಲ್ ವೊಂದರಲ್ಲಿ ಪಾರ್ಟಿ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮುಗ್ಳಿಹೊಂಡ ಎಂಬಲ್ಲಿ ಎದುರಿನಿಂದ […]