ಒಂಬತ್ತನೇ ಮಹಡಿಯಿಂದ ಬಿದ್ದ ಭದ್ರತಾ ಸಿಬ್ಬಂದಿ ಮೃತ್ಯು

Monday, November 23rd, 2020
mutturaj

ಮಂಗಳೂರು : ಒಂಬತ್ತನೇ ಮಹಡಿಯಿಂದ  ಕಾಲು ಜಾರಿ ಕೆಳಗೆ ಬಿದ್ದ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಠಾಣಾ ವ್ಯಾಪ್ತಿಯ ನಗರಸಭೆ ಕಚೇರಿ ಬಳಿ ಇರುವ ಇನ್‌ಪಾಲ ಬಹುಮಹಡಿ ಕಟ್ಟಡದಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ(55) ಎಂದು ಗುರುತಿಸಲಾಗಿದೆ. ಕಟ್ಟಡದ 9ನೆ ಮಹಡಿಗೆ ತೆರಳಿದ್ದ ಅವರು, ಟ್ಯಾಂಕ್ ನಲ್ಲಿ ನೀರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಅಕಸ್ಮಾತ್ ಕಾಲುಜಾರಿ ಕೆಳಗೆ ಬಿದ್ದಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.

ನಕ್ಸಲ್ ರಕ್ತದೋಕುಳಿ 20 ಯೋಧರ ಹತ್ಯೆ

Wednesday, March 12th, 2014
Naxal

ನವದೆಹಲಿ: ಛತ್ತೀಸ್‌ಗಡದಲ್ಲಿ ನಕ್ಸಲೀಯರು ಮತ್ತೆ ರಕ್ತದೋಕುಳಿ ಹರಿಸಿದ್ದಾರೆ. ಕೆಂಪು ಉಗ್ರರು ನಡೆಸಿದ ದಾಳಿಗೆ 20 ಮಂದಿ ಭದ್ರತಾ ಸಿಬ್ಬಂದಿ ಬಲಿಯಾಗಿದ್ದಾರೆ. ಛತ್ತೀಸ್‌ಗಡದ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ.  ಬೆಳಗ್ಗೆ 10.30ರ ವೇಳೆಗೆ ನಕ್ಸಲರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 15 ಮಂದಿ ಸಿಆರ್‌ಪಿಎಫ್ ಯೋಧರು ಹಾಗೂ 5 ಮಂದಿ ಪೊಲೀಸರು ಸಾವಿಗೀಡಾಗಿದ್ದಾರೆ. ಕೆಲವು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಕ್ಸಲರ ಪ್ರಾಣಹಾನಿ ಬಗ್ಗೆ ಯಾವುದೇ […]