ಮೂರು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣವನ್ನು ಭೇದಿಸಿದ ಮಂಗಳೂರು ಸಿಸಿಬಿ ಪೊಲೀಸರು

Wednesday, January 4th, 2017
jewellery-worth

ಮಂಗಳೂರು: ಮೂರು ವರ್ಷಗಳ ಹಿಂದೆ ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧಿಸಿರುವ ಪೊಲೀಸರು, 3 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ. 2013ರ ಡಿಸೆಂಬರ್ 12ರಂದು ಬೆಳುವಾಯಿ ಗ್ರಾಮದ ಮೂಡಾಯಿಕಾಡು ನಿವಾಸಿ ಶ್ರೀವಲೇರಿಯನ್ ಅರನ್ನಾ ಎಂಬುವರ ಮನೆಯ ಹಿಂಭಾಗದ ಬಾಗಿಲನ್ನು ಮುರಿದು ದರೋಡೆ ಮಾಡಲಾಗಿತ್ತು. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಇಂದು ಪೊಲೀಸರು […]

ಗಾಂಜಾ ಸಾಗಾಟ ಮಾಡುತ್ತಿದ್ದವನ ಬಂಧನ: ಗಾಂಜಾ ಸಹಿತ ವಶಕ್ಕೆ

Tuesday, November 29th, 2016
Ganja

ಮಂಗಳೂರು: ಜಿಲ್ಲೆ ಹಾಗೂ ನಗರಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದವನನ್ನು ಗಾಂಜಾ ಸಹಿತ ವಶಕ್ಕೆ ಪಡೆದುಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಾಸರಗೋಡು ಕುಂಬಳೆಯ ಇಬ್ರಾಹಿಂ (38) ಎಂದು ಗುರುತಿಸಲಾಗಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣದ ಬಳಿಯಿಂದ ಬೃಹತ್ ಪ್ರಮಾಣದಲ್ಲಿ ಮಂಗಳೂರು ನಗರಕ್ಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಪಂಪ್ವೆಲ್ ವೃತ್ತದ ಬಳಿಯಿರುವ ಹೊಟೇಲ್ ಪದ್ಮಶ್ರೀ ಮುಂಭಾಗದಲ್ಲಿ ಗಾಂಜಾವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪುತ್ತೂರು, ಸುಳ್ಯ […]

ಅರ್ಚಕ ವಾಸುದೇವ ಅವರ ಮನೆಯಿಂದ ಚಿನ್ನಾಭರಣ-ನಗದು ದೋಚಿದ ನಾಲ್ವರು ಪ್ರಮುಖ ಆರೋಪಿಗಳ ಬಂಧನ

Wednesday, November 2nd, 2016
kateelu

ಮಂಗಳೂರು: ಕಟೀಲು ದೇವಳದ ಅರ್ಚಕ ವಾಸುದೇವ ಅವರ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ-ನಗದು ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ನಾಲ್ವರು ಪ್ರಮುಖ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕಾರ್ಕಳ ಭಂಡಾರಿಬೆಟ್ಟು ಬೈಲು ಮನೆ ನಿವಾಸಿ ಭರತ್ ಶೆಟ್ಟಿ (30), ಮೆಲ್ಕಾರ್ ನಿವಾಸಿ ಮುಹಮ್ಮದ್ ಅಲಿ (35), ಹಳೆಯಂಗಡಿ ಪಾವಂಜೆ ನಿವಾಸಿ ಪುರುಷೋತ್ತಮ (44) ಮತ್ತು ಸೋಮೇಶ್ವರ ಸಂಕೊಲಿಗೆ ನಿವಾಸಿ ಹರೀಶ್ ಗಟ್ಟಿ (41) ಬಂಧಿತರು. ಬಂಧಿತರಿಂದ 450 ಗ್ರಾಂ ಚಿನ್ನಾಭರಣ, ರಿವಾಲ್ವರ್, ಸಜೀವ ಗುಂಡುಗಳು, […]