ಒಂದೂವರೆ ತಿಂಗಳ ಹೆಣ್ಣು ಮಗು ವನ್ನು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ತಾಯಿ

Tuesday, September 12th, 2023
infant killed

ಕಾಸರಗೋಡು : ಹೆಣ್ಣು ಮಗು ವನ್ನು ತಾಯಿಯೊಬ್ಬಳು ಕೆಸರು ನೀರಿನಲ್ಲಿ ಮುಳುಗಿಸಿ ಹತ್ಯೆಗೈದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳ ಪಚ್ಲಂಪಾರೆ ಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿ ಯ ಒಂದೂವರೆ ತಿಂಗಳ ಮಗು ಮೃತ ಪಟ್ಟವಳು. ತಾಯಿ ಮತ್ತು ಮಗು ನಾಪತ್ತೆ ಯಾದುದರಿಂದ ಮನೆ ಯವರು ಶೋಧ ನಡೆಸಿದಾಗ ತಾಯಿ ಯನ್ನು ಮನೆಯ ಅಲ್ಪ ದೂರದಿಂದ ಪತ್ತೆ ಹಚ್ಚಲಾಗಿದ್ದು, ಮಗು ನಾಪತ್ತೆಯಾಗಿತ್ತು. ವಿಚಾರಿಸಿದಾಗ ಮಗುವನ್ನು ಸಮೀಪದ ಬಯಲಿನಲ್ಲಿ ಕೆಸರು ನೀರಿನಲ್ಲಿ […]

ಕಾಸರಗೋಡು ಮತ್ತು ಮಂಜೇಶ್ವರದಲ್ಲಿ ಗ್ರಾಮಗಳ ಹೆಸರುಗಳ ಬದಲಾವಣೆ : ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಮುಖ್ಯಮಂತ್ರಿ ಪತ್ರ  

Monday, June 28th, 2021
Kerala Names

ಬೆಂಗಳೂರು : ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ.ಸೋಮಶೇಖರ ರವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗೃಹ ಕಛೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಈ ವಿಷಯವು ತಮ್ಮ ಗಮನಕ್ಕೆ ಈಗಾಗಲೇ ಬಂದಿದ್ದು, ಕೂಡಲೇ ಕೇರಳ ಸರ್ಕಾರದ ಮುಖ್ಯಮಂತ್ರಿಗಳ ಗಮನಕ್ಕೆ […]

ಕೇರಳದಲ್ಲಿ ಕನ್ನಡ ಸಂಪೂರ್ಣ ನಿರ್ನಾಮ, ಮಂಜೇಶ್ವರದ ಗ್ರಾಮಗಳ ಕನ್ನಡದ ಹೆಸರುಗಳ ಮಲಯಾಳೀಕರಣ

Saturday, June 26th, 2021
Kerala-Kannada

ಮಂಜೇಶ್ವರ : ಕೇರಳದಲ್ಲಿ ಕನ್ನಡವನ್ನು ಸಂಪೂರ್ಣ ನಿರ್ನಾಮ ಮಾಡ ಹೊರಟಿರುವ ಪಿಣರಾಯಿ ಸರಕಾರ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಹಾಗೂ ಅಲ್ಲಿನ ಕೆಲವು ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲಯಾಳಂ ಭಾಷೆಗೆ ಬದಲಾಯಿಸಿ ನಾಮಫಲಕಗಳನ್ನು ಅಳವಡಿಸುತ್ತಿದೆ. ಕೇರಳ ಸರ್ಕಾರದ ಈ ನಡೆಯನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಖಂಡಿಸಿದೆ. `ಮಧೂರು-ಮಧುರಮ್, ಮಲ್ಲ-ಮಲ್ಲಮ್, ಕಾರಡ್ಕ-ಕಡಗಮ್, ಬೇದಡ್ಕ-ಬೆಡಗಮ್, ಪಿಲಿಕುಂಜೆ-ಪಿಲಿಕುನ್ನು, ಆನೆಬಾಗಿಲು-ಆನೆವಾಗಿಲ್, ಮಂಜೇಶ್ವರ-ಮಂಜೇಶ್ವರಮ್, ಹೊಸದುರ್ಗ-ಪುದಿಯಕೋಟ, ಕುಂಬಳೆ-ಕುಂಬ್ಳಾ, ಸಸಿಹಿತ್ಲು-ಶೈವಲಪ್, ನೆಲ್ಲಿಕುಂಜ-ನೆಲ್ಲಿಕುನ್ನಿ’ ಇವುಗಳ ಮೂಲ ಹೆಸರನ್ನೆ  ಬದಲಾಯಿಸಿ ಕನ್ನಡದ ಕುರುಹು ಕೂಡ ಇರಬಾರದು ಎನ್ನುವುದು ಪಿಣರಾಯಿ ಸರಕಾರದ ನಡೆಯಾಗಿದೆ ಎಂದು […]

ಕನ್ನಡದಲ್ಲಿ ಪ್ರಮಾಣ ಸ್ವೀಕರಿಸಿದ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ

Monday, May 24th, 2021
Manjeshwara MLA Asraf

ಮಂಜೇಶ್ವರ: ಕೇರಳ ವಿಧಾನಸಭೆಗೆ ಆಯ್ಕೆಯಾದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು (ಸೋಮವಾರ) ನಡೆಯಿತು. ಈ ಸಂದರ್ಭದಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎ.ಕೆ.ಎಂ ಅಶ್ರಫ್ ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡತನ ಮೆರೆದಿದ್ದಾರೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಬಹುಪಾಲು ಮಂದಿ ಕನ್ನಡಿಗರಿದ್ದಾರೆ. ಈ ಜಿಲ್ಲೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿ ಕೊಂಡಿರುವುದರಿಂದ ಕನ್ನಡ ಭಾಷೆಯ ಪ್ರಭಾವ ಇಲ್ಲಿ ಹೆಚ್ಚು. ಭೌಗೋಳಿಕವಾಗಿ ಕೇರಳಕ್ಕೆ ಸೇರಿದ್ದರೂ ಕೂಡ […]

ವಿಧಾನಸಭಾ ಚುನಾವಣೆ : ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 38 ಅಭ್ಯರ್ಥಿಗಳು ಸ್ಪರ್ಧೆಗೆ

Tuesday, March 23rd, 2021
Surendran

ಕಾಸರಗೋಡು : ಕೇರಳ ವಿಧಾನಸಭಾ ಚುನಾವಣೆ ಎಪ್ರಿಲ್ 6 ರಂದು ನಡೆಯಲಿದ್ದು ಕಾಸರಗೋಡು ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 38 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಜೇಶ್ವರದಲ್ಲಿ ಆರು, ಕಾಸರಗೋಡು ಏಳು, ಉದುಮ ಆರು, ಕಾಞಂಗಾಡ್ 11, ತೃಕ್ಕರಿಪುರ ಕ್ಷೇತ್ರದಲ್ಲಿ ಎಂಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಂಜೇಶ್ವರ: ಎ. ಕೆ ಎಂ ಅಶ್ರಫ್ (ಮುಸ್ಲಿಂ ಲೀಗ್), ವಿ.ವಿ ರಮೇಶನ್ (ಸಿ ಪಿ ಐ ಎಂ), ಕೆ. ಸುರೇಂದ್ರನ್ (ಬಿಜೆಪಿ), ಪ್ರವೀಣ್ ಕುಮಾರ್ (ಅಣ್ಣಾ ಡೆಮೊಕ್ರಟಿಕ್ ಹ್ಯೂ ಮನ್ ರೈಟ್ಸ್ ಆಫ್ ಇಂಡಿಯಾ), ಜೋನ್ ಡಿಸೋಜ […]

ಕೇರಳ ವಿಧಾನಸಭಾ ಚುನಾವಣೆ : ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಮಂಜೇಶ್ವರ ಹಾಗೂ ಕೊನ್ನಿ ಕ್ಷೇತ್ರದಿಂದ ಕಣಕ್ಕೆ

Sunday, March 14th, 2021
K Surendran

ಕಾಸರಗೋಡು : ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ರವಿವಾರ 112 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ರನ್ನು ಮಂಜೇಶ್ವರ ಹಾಗೂ ಕೊನ್ನಿ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಮೆಟ್ರೋಮ್ಯಾನ್ ಖ್ಯಾತಿಯ ಇ.ಶ್ರೀಧರನ್ ಪಾಲಕ್ಕಾಡ್ ನಿಂದ ಸ್ಪರ್ಧಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್, ಕೇರಳ ಬಿಜೆಪಿ 115 ಸೀಟುಗಳಲ್ಲಿ ಸ್ಪರ್ಧಿಸಲಿದೆ. ಉಳಿದ 25 ಸ್ಥಾನಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಟ್ಟಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಕಾಸರಗೋಡಿನ ಮಂಜೇಶ್ವರ ಹಾಗೂ ಪಟ್ಟಣಂತಿಟ್ಟದ ಕೊನ್ನಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು […]

ಸಾಮಾನ್ಯ ಯುವತಿಯೊಬ್ಬಳು ಪಂಚಾಯತ್ ಅಧ್ಯಕ್ಷೆಯಾದಾಗ..

Friday, January 1st, 2021
Bharati

ಬಂಟ್ವಾಳ : ಪುರುಷ ಪ್ರಧಾನ ವ್ಯವಸ್ಥೆಯೊಳಗಡೆ ಮಹಿಳಾ ಸಬಲೀಕರಣವೆಂಬುದು ಸಾಮಾನ್ಯ ವಿಷಯವಲ್ಲ. ಮಹಿಳೆ ಅಬಲೆಯಲ್ಲ,ಸಬಲೆ ಎಂದು ಎಷ್ಟೇ ಬೀಗಿದರೂ ಅವರಿಗೆ ಸಿಗಬೇಕಾದ ಅವಕಾಶಗಳನ್ನು ಸರಿಯಾಗಿ ನೀಡಿದರೆ ಮಾತ್ರ ಎಂತಹ ಕ್ಷೇತ್ರದಲ್ಲೂ ಮಿಂಚಬಲ್ಲರು ಎಂಬುದಕ್ಕೆ ಕೇರಳದ ತಾಜಾ ಉದಾಹರಣೆಗಳು ನಮ್ಮ ಮುಂದಿದೆ.ಈಗಾಗಲೇ ಎಳೆಯ ಪ್ರಾಯದ ಯುವತಿಯರು ಕೇರಳದ ರಾಜದಾನಿಯ ಮೇಯರ್ ಹುದ್ದೆಯಿಂದ ಹಿಡಿದು ಪಂಚಾಯತ್ ಅಧ್ಯಕ್ಷೆಯವರೆಗೆ ಹಲವಾರು ಮಂದಿ ಆಯ್ಕೆಯಾಗಿರುವುದು ಮಹಿಳಾ ಸಮುದಾಯಕ್ಕೆ ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ. ಅದರಂತೆ ಗಡಿನಾಡ ಪ್ರದೇಶವಾದ ಮಂಜೇಶ್ವರದ ವರ್ಕಾಡಿ ಯಲ್ಲೂ ಅಂತಹ ಘಟನೆ […]

ಮಂಜೇಶ್ವರ ಮೀನುಗಾರಿಕಾ ಬಂದರು ಲೋಕಾರ್ಪಣೆ

Thursday, October 1st, 2020
Fishries harbor

ಕಾಸರಗೋಡು : ಮಂಜೇಶ್ವರ ಮೀನುಗಾರಿಕಾ ಬಂದರುನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಿಡಿಯೋ ಕಾನ್ಫರೆನ್ಸ್ ಮೂಲಕ  ಉದ್ಘಾಟಿಸಿದರು. ಜೊತೆಗೆ ಕೊಯಿಲಾಂಡಿಯ ಬಂದರನ್ನೂ ಅವರು ಉದ್ಘಾಟಿಸಿದರು. ಮಂಜೇಶ್ವರ ಬಂದರು ಒಟ್ಟು 48.80 ಕೋಟಿ ರೂ.ಗಳ ಯೋಜನೆಯಾಗಿದ್ದು, ಇದರಲ್ಲಿ ಶೇ.75 ಕೇಂದ್ರ ಸರಕಾರದ ಪಾಲು, ಶೇ.25 ರಾಜ್ಯ ಸರಕಾರದ ಪಾಲು ಇರುವುದು. ಯೋಜನೆಗಾಗಿ ಈಗಾಗಲೇ 45.71 ಕೋಟಿ ರೂ. ವೆಚ್ಚ  ಮಾಡಲಾಗಿದೆ. ಬೆಸ್ತರು ನಿಜವಾಗಿಯೂ ಕರಾವಳಿಯ ರಕ್ಷಕರು. ಯಾವುದೇ ದುರಂತ ಸಂದರ್ಭದಲ್ಲಿ ಸೈನಿಕರಂತೆ ಸೇವೆ ಸಲ್ಲಿಸುತ್ತಿರುವ ಬೆಸ್ತರ ಬಗ್ಗೆ ಸರಕಾರ ಕಾಳಜಿ ಹೊಂದಿದೆ. […]

ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಸಿ ಖಮರುದ್ದೀನ್ ಹಣ ಪಡೆದು ವಿರುದ್ಧ ವಂಚನೆ

Saturday, August 29th, 2020
Kamaruddin

ಮಂಜೇಶ್ವರ : ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ಇತ್ತೀಚಿಗೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾಗಿದ್ದ ಯುಡಿಎಫ್ ಶಾಸಕ ಎಂ. ಸಿ ಖಮರುದ್ದೀನ್ ಠೇವಣಿದಾರರಿಂದ ಹಣ ಪಡೆದು ವಂಚನೆ ನಡೆಸಿರುವುದಾಗಿ ಚಂದೇರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಫ್ಯಾಶನ್ ಗೋಲ್ಡ್ ಜುವೆಲ್ಲರಿ ಅಧ್ಯಕ್ಷರಾಗಿರುವ ಎಂ. ಸಿ ಖಮರುದ್ದೀನ್ ಜುವೆಲ್ಲರಿಗೆ ಠೇವಣಿ ಇರಿಸಿದ ಆರಿಫ್, ಅಬ್ದುಲ್ ಶುಕೂರ್ ಹಾಗೂ ಝುಹರಾ ಎಂಬವರು ನೀಡಿದ ದೂರಿನಂತೆ ಪೊಲೀಸರು ಮೊಕದ್ದಮೆ ದಾಖಲಿಸಿದ್ದಾರೆ. ಚೆರ್ವತ್ತೂರು ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಫ್ಯಾಶನ್ ಗೋಲ್ಡ್ ಪಯ್ಯನ್ನೂರು, ಚೆರ್ವತ್ತೂರು ಹಾಗೂ ಕಾಸರಗೋಡಿನಲ್ಲಿರುವ […]

ಹೊಡೆದಾಟದ ವೇಳೆ ಇರಿತಕ್ಕೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು

Thursday, August 27th, 2020
Kripakar

ಮಂಜೇಶ್ವರ  : ಎರಡು ತಂಡಗಳ ನಡುವೆ ನಡೆದ ಹೊಡೆದಾಟದಲ್ಲಿಇರಿತಕ್ಕೊಳಗಾಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಮಂಜೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಯಪದವಿನಲ್ಲಿ ಆಗಸ್ಟ್ 26ರ ಬುಧವಾರ ರಾತ್ರಿ  ನಡೆದಿದೆ. ಮೃತರನ್ನು ಬೇರಿಕೆ ನಿವಾಸಿ ಕೃಪಾಕರ್‌ (28) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ  ನಡೆದ ಹೊಡೆದಾಟದ ಸಂದರ್ಭ ಇರಿತಕ್ಕೊಳಗಾದ ಕೃಪಾಕರ್‌ ಅವರನ್ನು ಕಾಸರಗೋಡು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಯಿತ್ತಾದರೂ, ಅವರು ಮೃತಪಟ್ಟಿದ್ದಾರೆ. ಇದಲ್ಲದೇ, ಘಟನೆಯಲ್ಲಿ ಗಾಯಗೊಂಡಿದ್ದ ಜಿತೇಶ್‌ ಹಾಗೂ ವಿಜೇಶ್‌‌ ಎನ್ನುವವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರಿಗೆ ದೊರೆತ ಮಾಹಿತಿಯ ಪ್ರಕಾರ, ಕ್ಷುಲ್ಲಕ ಕಾರಣಕ್ಕೆ  ಹೊಡೆದಾಟದ […]