ಮಂತ್ರಾಲಯದಲ್ಲಿ– ಮಾರ್ಚ್ 15ಕ್ಕೆ ರಾಯರ 400ನೇ ಪಟ್ಟಾಭಿಷೇಕ ಮಹೋತ್ಸವ

Sunday, March 14th, 2021
Raghavendra

ರಾಯಚೂರು : ಮಾರ್ಚ್ 14 ರಿಂದ 20ರವರೆಗೆ ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಗುರುವೈಭವೋತ್ಸವ ಹಿನ್ನೆಲೆ ಸಪ್ತರಾತ್ರೋತ್ಸವ ಸಂಭ್ರಮ ನಡೆಯಲಿದೆ. ಶ್ರೀ ಗುರು ರಾಘವೇಂದ್ರ ಸ್ವಾಮಿ ಗುರುವೈಭವೋತ್ಸವ ಹಿನ್ನೆಲೆ 7 ದಿನ ಕಾಲ ಶ್ರೀಮಠದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 15ಕ್ಕೆ ಶ್ರೀ ಗುರು ರಾಘವೇಂದ್ರ ಸ್ವಾಮೀಜಿಗಳ 400ನೇ ಪಟ್ಟಾಭಿಷೇಕ ಮಹೋತ್ಸವ ವಿಜೃಂಭಣೆಯಿಂದ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಾರ್ಚ್ 20 ರಂದು ರಾಯರ ವರ್ಧಂತಿ ಉತ್ಸವ ನಡೆಯಲಿದೆ. ಇಂದು ಅಭಯ ಆಂಜನೇಯ ಸ್ವಾಮಿ […]

ಮಂಗಳೂರು – ಮಂತ್ರಾಲಯ ಸ್ಲೀಪರ್ ಕ್ಲಾಸ್ ಬಸ್ ಸೇವೆಗೆ ಶಾಸಕ ಡಿ.ವೇದವ್ಯಾಸ ಕಾಮತ್‌ ಚಾಲನೆ

Thursday, January 14th, 2021
Mantralaya Bus

ಮಂಗಳೂರು: ಮಂಗಳೂರಿನಿಂದ ವಿವಿಧ ಮಾರ್ಗಗಳಿಗೆ ನೂತನವಾಗಿ ಬಸ್‌ ಕಾರ್ಯಾಚರಣೆ ಆರಂಭಗೊಂಡಿದ್ದು, ಮಂಗಳೂರಿನಿಂದ ರಾತ್ರಿ 8.50ಕ್ಕೆ ಹೊರಟು ಹಾಸನ ಬೆಂಗಳೂರು ಮಾರ್ಗವಾಗಿ ತಿರುಪತಿಗೆ ಕ್ಲಬ್‌ ಕ್ಲಾಸ್‌ ವೋಲ್ವೋ, ಮಂಗಳೂರಿನಿಂದ ರಾತ್ರಿ 9 ಗಂಟೆಗೆ ದೇರಳಕಟ್ಟೆ, ಕಾಸರಗೋಡು, ಕೋಜಿಕೋಡ್‌ ಮಾರ್ಗವಾಗಿ ಎರ್ನಾಕುಲಂಗೆ ಕ್ಲಬ್‌ ಕ್ಲಾಸ್‌ ವೋಲ್ವೋ, ಮಂಗಳೂರಿನಿಂದ ರಾತ್ರಿ 8.01ಕ್ಕೆ ಕುಂದಾಪುರ, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ನಾನ್‌ ಎಸಿ ಸ್ಲೀಪರ್‌, ಮಂಗಳೂರು ಬಸ್‌ ನಿಲ್ದಾಣದಿಂದ ರಾತ್ರಿ 8.01ಕ್ಕೆ ಕುಂದಾಪುರ, ತೀರ್ಥಹಳ್ಳಿ, ಶಿವಮೊಗ್ಗ ಮಾರ್ಗವಾಗಿ ರಾಯಚೂರಿಗೆ ನಾನ್‌ ಎಸಿ ಸ್ಲೀಪರ್‌, ಮಂಗಳೂರಿನಿಂದ […]