ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಮಗ ಸಾವು

Wednesday, June 2nd, 2021
Shailesh

ಪುತ್ತೂರು : ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದ ಆಸ್ಟ್ರೇಲಿಯಾ ಉದ್ಯೋಗಿ, ಕೊರೋನದಿಂದ ಮೃತಪಟ್ಟ ತಂದೆಯ ಅಂತ್ಯ ಸಂಸ್ಕಾರದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿರುವ  ಘಟನೆ ಬುಧವಾರ ನಡೆದಿದೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ಎಂಬಲ್ಲಿ ಈ ಘಟನೆ ನಡೆದಿದೆ. ಪುಣಚ ಬೈಲುಗುತ್ತು ಕೊಪ್ಪಳ ನಿವಾಸಿ ಕೆಪಿಟಿ ನಿವೃತ್ತ ಪ್ರೊಫೆಸರ್ ಭುಜಂಗ ಶೆಟ್ಟಿ(85) ಅವರು ಕೋವಿಡ್‌ನಿಂದ ಮಂಗಳವಾರ ರಾತ್ರಿ ಮೃತಪಟ್ಟಿದ್ದರು. ಅವರ ಅಂತಿಮ ಸಂಸ್ಕಾರವು ಬುಧವಾರ ಬೈಲುಗುತ್ತು ಕೊಪ್ಪಳ ನಿವಾಸದಲ್ಲಿ ಕೋವಿಡ್ ನಿಯಮಾವಳಿ ಯೊಂದಿಗೆ ನಡೆಸಲಾಯಿತು. […]

ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆ, ಸ್ಥಳೀಯರಲ್ಲಿ ಆತಂಕ

Friday, March 12th, 2021
Monkey death

ಬೆಳ್ತಂಗಡಿ : ಕಾಯರ್ತೋಡಿ ಸಮೀಪವಿರುವ ಸೀಟ್ ರಕ್ಷಿತಾರಣ್ಯದಲ್ಲಿ ಇಂದು ಬೆಳಗ್ಗೆ ರಸ್ತೆಬದಿ 5 ಮಂಗಗಳ ಕಳೇಬರಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಮುಂಡಾಜೆ ಗ್ರಾಮದಲ್ಲಿ ನಡೆದ  ಘಟನೆಯ  ಕುರಿತು ಸ್ಥಳೀಯರು ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯತ್ ಗೆ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಇಲಾಖಾ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುತ್ತಿಗೆಯಿಂದ ಹೊಡೆದು ತಂದೆಯನ್ನು ಸಾಯಿಸಿದ ಮಗ

Monday, January 18th, 2021
sridhar

ಬೆಳ್ತಂಗಡಿ : ಮಗನೊಬ್ಬ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ ಘಟನೆ ಬೆಳ್ತಂಗಡಿತಾಲ್ಲೂಕಿನ ಗರ್ದಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಜನವರಿ 18 ರ ಸೋಮವಾರ ನಡೆದಿದೆ. ಮೃತರನ್ನು ಶ್ರೀಧರ್ ಎಂದು ಗುರುತಿಸಲಾಗಿದೆ, ಅವರ ಮಗ ಹರೀಶ್ ಈ ಕೊಲೆ ಮಾಡಿದ ಆರೋಪಿ.ಮೃತ ರಿಗೆ ಇಬ್ಬರು ಗಂಡು ಮತ್ತು ಒಬ್ಬರು ಮಗಳು ಇದ್ದಾರೆ. ಕೌಟುಂಬಿಕ ವಿವಾದವೇ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ತಂದೆ – ಮಗನ ನಡುವೆ ಕಾಳಗ, ಆಸ್ಪತ್ರೆ ದಾರಿಯಲ್ಲಿ ತಂದೆ ಮೃತ್ಯು

Monday, August 17th, 2020
quarrel

ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ತಂದೆ ಮತ್ತು ಮಗನ ನಡುವೆ ಜಗಳ ನಡೆದು ಗಂಭೀರ ಗಾಯಗೊಂಡ ತಂದೆ ಆಸ್ಪತ್ರೆ ದಾರಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಕೆದಂಬಾಡಿ ಗ್ರಾಮದ ತಿಂಗಳಾಡಿ ಬಾಲಯ ಬಳಿ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಸೋಮವಾರ ರಾತ್ರಿ ಗಂಗಾಧರ್ ನಾಯ್ಕ್ ಹಾಗೂ ಅವರ ಪುತ್ರ ಶಶಿಧರ್ ನಡುವೆ ಯಾವುದೋ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಘರ್ಷಣೆ ಸಂಭವಿಸಿದೆ. ಈ ಸಂದರ್ಭದಲ್ಲಿ ಗಂಗಾಧರ್ ನಾಯ್ಕ್ ಗಂಭೀರವಾಗಿ ಗಾಯಗೊಂಡರು. ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೃತಪಟ್ಟರು […]