ಮೊಬೈಲ್ ಅತಿಯಾಗಿ ಬಳಸಬಾರದು ಎಂದಿದ್ದಕ್ಕೆ ಮಗಳು ನಾಪತ್ತೆ

Tuesday, June 8th, 2021
Deekshitha

ಮಂಗಳೂರು  : ಮೊಬೈಲ್ ಬಳಸಬಾರದು ಎಂದು ಪೋಷಕರು ಬುದ್ದಿ ಮಾತು ಹೇಳಿದ್ದಕ್ಕೆ ಆಕ್ರೋಶಗೊಂಡ ಯುವತಿಯೊಬ್ಬಳು ಮನೆ ಬಿಟ್ಟು ಪರಾರಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದ ಕುಕ್ಕದಕಟ್ಟೆ ಸೈಟ್ ಮನೆಯ ನಿವಾಸಿಯಾದ ದೀಕ್ಷಿತಾ ಜೂನ್ 6 ರಂದು ಕಾಣೆಯಾಗಿದ ಯುವತಿ. ಕಾಣೆಯಾದ ಯುವತಿಗೆ 18 ವರ್ಷ ವಯಸ್ಸಾಗಿದೆ. ಆಕೆಯ ತಾಯಿ ಅತಿಯಾಗಿ ಫೋನಿನಲ್ಲಿ ಮಾತನಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ ಆಕ್ರೋಶಗೊಂಡು ಮನೆಯಲ್ಲಿ ಯಾವುದೇ ವಿಚಾರ ಹೇಳದೆ ನಾಪತ್ತೆಯಾಗಿದ್ದಾಳೆ. ಬಾಲಕಿಯ ತಾಯಿ ಜೂನ್ […]

ಹೆಂಡತಿ ಹಾಗೂ ಎರಡು ವರ್ಷದ ಮಗಳಿಗೆ ವಿಷ ನೀಡಿ ಆತ್ಮಹತ್ಯೆಗೆ ಶರಣಾದ ಉದ್ಯೋಗಿ

Saturday, July 25th, 2020
Mounesh Pattara

ಧಾರವಾಡ: ಶನಿವಾರ ಬೆಳ್ಳಂಬೆಳಿಗ್ಗೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಧಾರವಾಡದ ಮೆಹಬೂಬ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೀಡಾದವರನ್ನು ಟಾಟಾ ಮಾರ್ಕೋಪೋಲೋ ಕಂಪನಿಯ ಉದ್ಯೋಗಿ ಮೌನೇಶ್ ವೀರಪ್ಪ ಪತ್ತಾರ ( 36 ) ಎಂದು ಗುರುತಿಸಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ರೋಣ ತಾಲೂಕಿನ ಅಸೂಟಿ ಗ್ರಾಮದವರು. ಟಾಟಾ ಮಾರ್ಕೋಪೋಲೋ ಕಂಪೆನಿಯ ಉದ್ಯೋಗಿಯಾಗಿದ್ದರಿಂದ ಧಾರವಾಡದಲ್ಲಿ ನೆಲೆಸಿದ್ದರು. ಕಂಪನಿಯ 50ಕ್ಕೂ ಹೆಚ್ಚು ನೌಕರರಿಗೆ ಕೊರೊನಾ ಪಾಸಿಟಿವ್ ಬಂದಿದ್ದರಿಂದ ಆತಂಕಗೊಂಡಿದ್ದ ಈ ನೌಕರ, ಎಲ್ಲಿ ತಮ್ಮ ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ […]