ಮಠದಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕ ಮೃತ್ಯು

Monday, November 9th, 2020
Matadakere

ಮಂಗಳೂರು : ಬೆಳುವಾಯಿ ಗ್ರಾಪಂ ವ್ಯಾಪ್ತಿಯ ಮಠದಕೆರೆಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋದ ಯುವಕನೊಬ್ಬ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಸುರತ್ಕಲ್ ಸಮೀಪದ ಕಾಟಿಪಳ್ಳ ನಿವಾಸಿ ನಿಹಾಲ್ ಶಾ ( 20 ) ಮೃತಪಟ್ಟ ಯುವಕ. ನಿಹಾಲ್ ಶಾ ತನ್ನ ಏಳು ಮಂದಿ ಸ್ನೇಹಿತರೊಡನೆ ಭಾನುವಾರ ಸಾಯಂಕಾಲ ಮಠದಕೆರೆಗೆ ಈಜಲು ಬಂದಿದ್ದ. ಈಜುವಾಗ ಏಕಾಏಕಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬೆಳುವಾಯಿಯ ಅಂಥೋಣಿ ಎಂಬುವರು ನಿಹಾಲ್ ಶಾ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ. ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ […]