ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಕೃಷ್ಣೈಕ್ಯ

Sunday, September 6th, 2020
keshavananda Bharati

ಕಾಸರಗೋಡು: ಎಡನೀರು ಮಠಾಧೀಶ ಜಗದ್ಗುರು ಶಂಕರಾಚಾರ್ಯ ಸಂಸ್ಥಾನಂ  ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರು (79) ರಾತ್ರಿ 12.45ರ ಸುಮಾರಿಗೆ ಕೃಷ್ಣೈಕ್ಯರಾದರು.. ಸೆ.2ರಂದು ಚಾತುರ್ಮಾಸ್ಯವನ್ನು ಪೂರೈಸಿದ್ದ ಶ್ರೀಗಳು ಕಳೆದ ಕೆಲವು ದಿನಗಳಿಂದ ಅಲ್ಪ ಅಸೌಖ್ಯದಲ್ಲಿದ್ದರು. ಶನಿವಾರ ರಾತ್ರಿ ಪೂಜೆ ಮುಗಿಸಿ ಫಲಾಹಾರ ಸ್ವೀಕರಿಸಿದ್ದ ಶ್ರೀಗಳು ಮಧ್ಯರಾತ್ರಿಯ ವೇಳೆ ಅಸ್ತಂಗತರಾಗಿದ್ದಾರೆ. 1960, ನ.14ರಿಂದ ಎಡನೀರು ಮಠಾಧಿಶರಾಗಿ ಕಾರ್ಯನಿರ್ವಹಿಸಲು ಆರಂಭಿಸಿದ್ದ ಶ್ರೀಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ, ಸಂಗೀತ, ಯಕ್ಷಗಾನ, ಶಿಕ್ಷಣ, ಪ್ರವಾಸೋದ್ಯಮ ಸಹಿತ ಧಾರ್ಮಿಕ ಕ್ಷೇತ್ರಗಳಲ್ಲಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ  ಅಪಾರ […]