ಗುಳ್ಳಾಡಿ : ತಾನೇ ಸಾಕಿದ ಎತ್ತು ತಿವಿದು ರೈತ ಸಾವು

Saturday, October 19th, 2019
yetthu

ಉಡುಪಿ : ಉಡುಪಿ ಜಿಲ್ಲೆಯ ಬೇಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಳ್ಳಾಡಿಯಲ್ಲಿ ಶುಕ್ರವಾರ ಸಾಕಿದ ಎತ್ತು ತಿವಿದು ಸಾವಯವ ರೈತ ಪದ್ಮನಾಭ ಭಟ್(70)ಸ್ಥಳದಲ್ಲೇ ಕುಸಿದು ಬಿದ್ದರು. ಸ್ಥಳೀಯರು ಅವರನ್ನು ತಕ್ಷಣ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟರು. ಕೃಷಿ ಮತ್ತು ಹೈನುಗಾರಿಕೆಯಲ್ಲಿ ಅಪಾರ ಆಸಕ್ತಿ ಹೊಂದಿದ್ದ ಇವರು ಎತ್ತನ್ನು ಸಾಕಿದ್ದರು. ಆ ಎತ್ತು ಮದವೇರಿ ಸಾಕಿದ ಯಜಮಾನನಿಗೆ ತಿವಿದಿದೆ. ಮೃತರು ಪುತ್ರ, ಪುತ್ರಿಯನ್ನು ಅಗಲಿದ್ದಾರೆ.    

ಗಾಂಜಾ ಸೇವಿಸಿದ ನಾಲ್ವರು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

Saturday, September 22nd, 2018
Manipal-police

ಮಣಿಪಾಲ : ಗಾಂಜಾ ಸೇವಿಸಿದ್ದ ಮಣಿಪಾಲದ ನಾಲ್ವರು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಸೆ.19ರಂದು ಸಂಜೆ ವೇಳೆ ಹೆರ್ಗಾ ಗ್ರಾಮದ ಸರಳಬೆಟ್ಟು ಸಮೀಪ ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಾದ ರಿಷಿವೀರ್(20), ಪ್ರೀತಂ ಗುಪ್ತ(19), ಜಿ.ಪ್ರತೀಕಣ (20) ಹಾಗೂ ಸಾಯಿ ಚರಣ್(20) ಎಂಬವರನ್ನು ವಶಕ್ಕೆ ಪಡೆದ ಪೊಲೀಸರು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಿದರು. ಇವರನ್ನು ಪರೀಕ್ಷಿಸಿದ ವೈದ್ಯರು ಈ ನಾಲ್ವರು ಕೂಡ ಗಾಂಜಾ ಸೇವಿಸಿರುವುದಾಗಿ ದೃಢ ಪತ್ರ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.