ಮಧುಕರ್ ಶೆಟ್ಟಿ ನಿಧನ ಆಘಾತ ತಂದಿದೆ.. ಸಾವಿನ ಬಗ್ಗೆ ತನಿಖೆ ಅಗತ್ಯವಿದೆ: ಡಿ.ಕೆ. ಶಿವಕುಮಾರ್

Saturday, December 29th, 2018
congress

ಬೆಂಗಳೂರು: ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ ಆಘಾತ ತಂದಿದೆ. ಸಾವಿನ ಬಗ್ಗೆ ತನಿಖೆ ಅಗತ್ಯವಿದೆ. ಯಾಕೆ, ಏನಾಯ್ತು ಅನ್ನೋದು ತಿಳಿಯಬೇಕು ಎಂದು ಸಚಿವ ಡಿ.ಕೆ. ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ, ಅವರು ನನಗೆ ಬಹಳ ಹತ್ತಿರದಿಂದ ಪರಿಚಯ. ರಾತ್ರಿ ಸುದ್ದಿ ಕೇಳಿ ದುಖಃವಾಯ್ತು. ಅವರು ನಮ್ಮ ಪೊಲೀಸ್ ಇಲಾಖೆಗೆ ದೊಡ್ಡ ಆಸ್ತಿ. ಸಾವಿನ ತನಿಖೆಯಿಂದ ಸಾಕಷ್ಟು ಸತ್ಯಗಳು ಹೊರಬರಬಹುದು ಎಂದು ಹೇಳಿದ್ದಾರೆ. ಸಚಿವ ಸ್ಥಾನ, ನಿಗಮ ಮಂಡಳಿಯಲ್ಲಿ ಅವಕಾಶ ಸಿಗಲಿಲ್ಲವೆಂದು ಅಸಮಾಧಾನಗೊಂಡಿರುವವರ ಬಗ್ಗೆ ಮಾತನಾಡಿ, […]

ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನ: ಕಂಬನಿ‌ ಮಿಡಿದ ಡಿಸಿಪಿ ಅಣ್ಣಾಮಲೈ

Saturday, December 29th, 2018
annamalai

ಬೆಂಗಳೂರು: ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ ಅಣ್ಣಾಮಲೈ ಕಂಬನಿ ಮಿಡಿದಿದ್ದಾರೆ. ಮಧುಕರ್ ಶೆಟ್ಟಿ ನಿಧನ ನನಗೆ ಅಘಾತ ತಂದಿದೆ. ಅವ್ರ ಕುಟುಂಬಕ್ಕೆ ಶಾಂತಿ ಸಿಗಲಿ. ಒಬ್ಬ ದಕ್ಷ ಅಧಿಕಾರಿ ಈ ರೀತಿ ಸಿಗಲು ಸಾಧ್ಯವಿಲ್ಲ. ಅವರು ಚಿಕ್ಕಮಗಳೂರಿನಲ್ಲಿ ನೀಡಿದ ಸೇವೆ ಅಭೂತಪೂರ್ವ. ನನಗೆ ಈಗಲೂ ನೆನಪಿದೆ. ಚಿಕ್ಕಮಗಳೂರಿನಲ್ಲಿ ಭೂ ಒತ್ತುವರಿಯಾದಾಗ ಮಧುಕರ್ ಶೆಟ್ಟಿ ಒಂದು ಒಳ್ಳೆ ನಿರ್ಧಾರ ತೆಗೆದುಕೊಂಡಿದ್ದರು. ಅಲ್ಲದೆ ತಮ್ಮ ಜೊತೆ ಕೆಲಸ ಮಾಡುವ ಅಧಿಕಾರಿಗಳನ್ನು ಕೆಲವೊಮ್ಮೆ ತಮ್ಮ […]

ಅನಾರೋಗ್ಯದಿಂದ ಬಳಲುತ್ತಿದ್ದ ಮಧುಕರ್ ಶೆಟ್ಟಿ ವಿಧಿವಶ

Saturday, December 29th, 2018
madhukar

ಬೆಂಗಳೂರು: ತೀವ್ರ ಅನಾರೋಗ್ಯ, ಎಚ್1 ಎನ್ 1 ಸೋಂಕಿನಿಂದ ಬಳಲುತ್ತಿದ್ದ ರಾಜ್ಯದ ಐಪಿಎಸ್ ಅಧಿಕಾರಿ ಡಿಐಜಿ ಮಧುಕರ್ ಶೆಟ್ಟಿ ಶುಕ್ರವಾರ ರಾತ್ರಿ ಹೈದರಾಬಾದ್‌ನ ಕಾಂಟಿನೆಂಟಲ್‌ ಆಸ್ಪತ್ರೆಯಲ್ಲಿ ನಿಧನರಾದರು. ಈ ವಿಚಾರವನ್ನು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸ್ ಮಹಾ ನಿರ್ದೇಶಕ ಕಮಲ್ ಪಂತ್ ಖಚಿತಪಡಿಸಿದ್ದಾರೆ. ರಾತ್ರಿ 8. 15ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಡಿಐಜಿ ಮಧುಕರ್ ಶೆಟ್ಟಿ ಕೊನೆಯುಸಿರು ಎಳೆದಿದ್ದಾರೆ. ಅವರಿಗೆ 47 ವರ್ಷವಾಗಿದ್ದು, 1999ನೇ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾಗಿರುವ ಮಧುಕರ್‌ ಶೆಟ್ಟಿ ಕಳೆದ ಹಲವು ದಿನಗಳಿಂದ […]

ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಆರೋಗ್ಯ ಗಂಭೀರ

Thursday, December 27th, 2018
police-officer

ಬೆಂಗಳೂರು: ಹೆಚ್1 ಎನ್1 ಸೋಂಕಿನಿಂದ ಬಳಲುತ್ತಿರುವ ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅವರು ಹೈದರಾಬಾದ್ನ ಕಾಂಟಿನೆಂಟಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಉಡುಪಿ ಮೂಲದ ಮಧುಕರ್ ಶೆಟ್ಟಿ ಸದ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ನ್ಯಾಷನಲ್ ಪೋಲೀಸ್ ಅಕಾಡೆಮಿಯ ಉಪನಿರ್ದೇಶಕರಾಗಿ ಕಾರ್ಯ‌ನಿರ್ವಹಿಸುತ್ತಿದ್ದರು. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು‌ ಆಸ್ಪತ್ರೆಯ ಮೂಲಗಳು ತಿಳಿಸಿವೆ. ಮಧುಕರ್ ಶ್ವಾಸಕೋಶ ಹಾಗೂ ಜೀರ್ಣಾಂಗ ಸಮಸ್ಯೆಯಿಂದ ಬಳಲುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. 1999ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಮಧುಕರ್ […]