ಏಲಕ್ಕಿ ನಾಡು ಹಾವೇರಿಯಲ್ಲಿ ಸಾಹಿತ್ಯ ಜಾತ್ರೆ ಫೆ.26, 27 ಮತ್ತು 28, 2021

Wednesday, November 25th, 2020
Haveri

ಹಾವೇರಿ:  ಏಲಕ್ಕಿ ನಾಡು ಹಾವೇರಿಯಲ್ಲಿಎಂಬತ್ತಾರನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ 2021ರ ಫೆ.26, 27 ಮತ್ತು 28ರಂದು ಮೂರು ದಿನಗಳ ಕಾಲ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿದೆ. ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀಧಿರ್ಮಾನ ಕೈಗೊಳ್ಳಲಾಗಿದೆ. ಬಳಿಗಾರ್‌ ಆಡಳಿತಾವಧಿಯಲ್ಲಿ ನಡೆಯುತ್ತಿರುವ ಐದನೇ ಸಮ್ಮೇಳನ ಇದು.  ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೃಷಿ ಸಚಿವ […]

ಧರ್ಮಸ್ಥಳದಲ್ಲಿ ಸಾಹಿತ್ಯ ಸಮ್ಮೇಳನದ 84ನೇ ಅಧಿವೇಶನ

Tuesday, November 29th, 2016
lakshadeepotsava-1

ಬೆಳ್ತಂಗಡಿ : ಜಾನಪದ ಕಲೆಗಳು ಮತ್ತು ಸಂಸ್ಕೃತಿ ಇಂದು ವಿನಾಶದಂಚಿನಲ್ಲಿದ್ದು ಅವುಗಳ ಸಂರಕ್ಷಣೆಯಾಗಬೇಕು. ಮುಂದಿನ ಪೀಳಿಗೆಗೆ ಈ ಬಗ್ಗೆ ಅರಿವು ಜಾಗೃತಿ ಮೂಡಿಸಬೇಕು. ಈ ದಿಸೆಯಲ್ಲಿ ಸರ್ಕಾರ, ಅಕಾಡೆಮಿಗಳು ಮತ್ತು ಮಠ-ಮಂದಿರಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಹೇಳಿದರು. ಅವರು ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂದರ್ಭದಲ್ಲಿ ಸೋಮವಾರ ಆಯೋಜಿಸಲಾದ ಸಾಹಿತ್ಯ ಸಮ್ಮೇಳನದ 84ನೇ ಅಧಿವೇಶನವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿಗೂ ಸಾಮಾಜಿಕ ಹೊಣೆಗಾರಿಕೆ ಇರಬೇಕು. ಸಮಾಜ ಸುಧಾರಣೆಯ ಜವಾಬ್ದಾರಿ ಆತನಿಗೆ ಇದೆ. […]