ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ..ಸ್ಕೂಟರ್ ಸವಾರ ಸಾವು!

Monday, June 18th, 2018
accident

ಮಂಗಳೂರು: ಇಲ್ಲಿನ ತೊಕ್ಕೊಟ್ಟು ಬಳಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಇತ್ತೀಚೆಗಷ್ಟೇ ವಿದೇಶದಿಂದ ಆಗಮಿಸಿದ್ದ ಸ್ಕೂಟರ್ ಸವಾರ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ತಲಪಾಡಿ ತಚ್ಚಣಿ ನಿವಾಸಿ ಮನೋಹರ್ ಬೆಳ್ಚಡ ( 50 ) ಸಾವನ್ನಪ್ಪಿರುವ ವ್ಯಕ್ತಿ. ಮನೋಹರ್ ಬೆಳ್ಚಡ ಇತ್ತೀಚೆಗಷ್ಟೇ ವಿದೇಶದಿಂದ ಬಂದು ಎರಡು ದಿನಗಳ ಹಿಂದೆ ಹೊಸ ಮನೆ ಗೃಹಪ್ರವೇಶ ಮಾಡಿದ್ದರು. ಘಟನೆ ಸಂಭಂದ ಮಂಗಳೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.