ಕಾವ್ಯಾ ಮರಣೋತ್ತರ ಪರೀಕ್ಷೆಯ ವರದಿ ಕೂಲಂಕಷ ಪರಿಶೀಲನೆ

Monday, July 31st, 2017
Kavyashree

ಮಂಗಳೂರು :  ರಾಷ್ಟ್ರ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಆಟಗಾರ್ತಿ, ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಕಾವ್ಯಾ ಅವರ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸ್ ಕೈ ಸೇರಿದೆ ಪ್ರಕರಣದ ತನಿಖೆಯ ನೇತೃತ್ವ ವಹಿಸಿರುವ ಎಸಿಪಿ ರಾಜೇಂದ್ರ ಡಿ.ಎಸ್. ನೇತೃತ್ವದ ತಂಡದ ಕೈ ಸೇರಿರುವ ಈ ವರದಿಯಲ್ಲಿ ಕಾವ್ಯಾಳದ್ದು ಆತ್ಮಹತ್ಯೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ. ಈ ನಡುವೆ ಮರಣೋತ್ತರ ಪರೀಕ್ಷೆಯ ವರದಿಯ ಬಗ್ಗೆ ಎಸಿಪಿ ನೇತೃತ್ವದ ತನಿಖಾ ತಂಡವು ಕೂಲಂಕಷ ಪರಿಶೀಲನೆ ನಡೆಸುತ್ತಿದೆ. ಕಟೀಲು ಸಮೀಪದ ಎಕ್ಕಾರು […]

ನ್ಯಾಯಾಧೀಶ ಉಣ್ಣಿಕೃಷ್ಣನ್ ದೇಹದಲ್ಲಿ ಲಾಠಿಯಲ್ಲಿ ಹೊಡೆದ, ಬೂಟಿನಿಂದ ತುಳಿದ ಗುರುತು ಪತ್ತೆ: ಸುಳ್ಯ ಪೊಲೀಸರ ವಿರುದ್ದ ಪ್ರಕರಣ ದಾಖಲು

Monday, November 14th, 2016
Unnikrishnan

ಕಾಸರಗೋಡು: ಕಾಸರಗೋಡು ಪ್ರಥಮ ದರ್ಜೆ ನ್ಯಾಯಾಧೀಶ ವಿ ಕೆ ಉಣ್ಣಿಕೃಷ್ಣನ್ (45) ಸಾವು ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾನಗರ ಪೊಲೀಸರು ತನಿಖೆಯನ್ನು ಇನ್ನಷ್ಟು ತೀವೃಗೊಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಲಭಿಸಿದ ವರದಿಯಲ್ಲಿ ಲಾಠಿಯಲ್ಲಿ ಹೊಡೆದ ಹಾಗು ಬೂಟಿನಿಂದ ತುಳಿದ ಹಲವು ಗುರುತುಗಳು ಪತ್ತೆಯಾಗಿರುವುದಾಗಿ ತಿಳಿಸಲಾಗಿದೆ. ತಾನು ಸುಳ್ಯಕ್ಕೆ ಹೋಗಿದ್ದ ವೇಳೆ ಅಲ್ಲಿ ಕೆಲವರು ನನಗೆ ಹಲ್ಲೆ ನಡೆಸಿದ್ದು, ಈ ಮಧ್ಯೆ ತನ್ನನ್ನು ಸುಳ್ಯ ಠಾಣೆಗೆ ಕೊಂಡೊಯ್ದಾಗ ಅಲ್ಲಿಯ ಪೊಲೀಸರು ಮಾರಣಾಂತಿಕ ಹಲ್ಲೆ ನಡೆಸಿರುವುದಾಗಿಯೂ ನಗರದ ಸಿ ಐ ಗೂ […]

ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆ

Saturday, November 5th, 2016
Bunder murder

ಮಂಗಳೂರು: ಕೊಲೆಗೈದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಹಳೆ ಬಂದರಿನ ರೈಲ್ವೆ ಸಿಮೆಂಟ್ ಗೋದಾಮಿನಲ್ಲಿ ಪತ್ತೆಯಾಗಿದೆ. ಕೊಲೆಗೀಡಾದ ವ್ಯಕ್ತಿ ಕೂಲಿ ಕಾರ್ಮಿಕ ಎನ್ನಲಾಗಿದ್ದು, ಮುಖ ಜಜ್ಜಿ ಹೋಗಿದ್ದು, ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ಕಳೆದ ತಡರಾತ್ರಿ ಕೊಲೆ ನಡೆದಿರಬಹುದು ಎನ್ನಲಾಗಿದೆ. ಎಸಿಪಿ ಶ್ರುತಿ ಎನ್. ಎಸ್., ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್‍ಲಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾವಿಯಲ್ಲಿ ಇಬ್ಬರು ಸಹೋದರರ ಮೃತ ದೇಹಗಳು ಪತ್ತೆ

Saturday, October 8th, 2016
kasargod

ಕಾಸರಗೋಡು: ಕಳೆದ ಒಂದು ದಿನದಿಂದ ನಾಪತ್ತೆಯಾಗಿದ್ದ ಚೆರ್ವತ್ತೂರು ಚೀಮೇನಿ ಚೆಲುವಕ್ಕೋಡ್ ನ ಸತೀಶ್ (40) ಮತ್ತು ಸಹೋದರ ಸಜಿತ್ (36) ಮೃತದೇಹಗಳು ಗುರುವಾರ ರಾತ್ರಿ ಬಾವಿಯಲ್ಲಿ ಪತ್ತೆಯಾಗಿವೆ. ಚೆರ್ವತ್ತೂರು ಚೀಮೇನಿ ಚೆಲುವಕ್ಕೋಡ್ ಮೂಲದ ಸತೀಶ್ ಬಸ್ ಚಾಲನೆ ಮಾಡುತ್ತಿದ್ದು. ಸಜಿತ್ ಲಾರಿ ಚಾಲಕನಾಗಿದ್ದ. ಇವರಿಬ್ಬರು ಕಳೆದು ಒಂದು ದಿನದಿಂದ ಕಾಣೆಯಾಗಿದ್ದರು. ಮನೆಯವರ ಹುಡುಕಾಟದಲ್ಲಿ ದಾರಿ ಮಧ್ಯೆ ಇರುವ ಬಾವಿಯಲ್ಲಿ ಇಬ್ಬರ ಮೃತ ದೇಹಗಳು ಪತ್ತೆಯಾಗಿದ್ದು. ಇವರ ಸಾವಿಗೆ ನಿಖರವಾದ ಕಾರಣಗಳು ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ […]

ತಲಪಾಡಿ ನದಿ ತಟದಲ್ಲಿ ಮಗುವಿನ ಮೃತ ದೇಹ ಪತ್ತೆ

Thursday, July 11th, 2013
Talapady Infant Killed

ಮಂಗಳೂರು : ಕೆಲವೇ ದಿನಗಳ ಹಿಂದಷ್ಟೇ ಜನಿಸಿರಬಹುದಾದ ಪುಟ್ಟ ಮಗುವೊಂದು ತಲಪಾಡಿ ನದಿಯಲ್ಲಿ ಸತ್ತುಬಿದ್ದಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಸ್ಥಳೀಯರು ಇಂದು ಬೆಳಿಗ್ಗೆ  ನದಿ ತಟದಲ್ಲಿ ಮೃತ ಮಗುವನ್ನು ಪತ್ತೆ ಹಚ್ಚಿದರು. ಬಳಿಕ ಪಂಚಾಯತ್ ಸದಸ್ಯರು ಪೊಲೀಸರಿಗೆ ದೂರು ನೀಡಿದ್ದಾರೆ. ಮಗು ಗಂಡಾಗಿದ್ದು,  ಮಗುವಿನ ದೇಹದ ಮೇಲೆ ಕೆಲವು ಗಾಯದ ಗುರುತುಗಳಿದ್ದು ಅದು ಸಾವಿನ ನಂತರ ಉಂಟಾಗಿರಬಹುದೆಂದು ಪೊಲೀಸರು ಊಹಿಸಿದ್ದಾರೆ. ಇದೀಗ ಮಗುವಿನ ಶವವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದೆ, ಮೃತ ಮಗುವಿನ ಹೆತ್ತವರ ಬಗ್ಗೆ ಯಾವುದೇ ಸುಳಿವಿಲ್ಲ. ಈ […]