ತೊಕ್ಕೊಟ್ಟುವಿನಲ್ಲಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಮರಳು ಸಾಗಾಟದ ಲಾರಿ ಢಿಕ್ಕಿ ಹೊಡೆದು ಮೃತ್ಯು

Sunday, January 24th, 2021
Tipper Lorry

ಉಳ್ಳಾಲ :  ರಾಷ್ಟ್ರೀಯ ಹೆದ್ದಾರಿ 66ರ ತೊಕ್ಕೊಟ್ಟುವಿನಲ್ಲಿ ರಸ್ತೆ  ದಾಟುತ್ತಿದ್ದ ವ್ಯಕ್ತಿಯೊಬ್ಬರು ಮರಳು ಸಾಗಾಟದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತರನ್ನು ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಹಮ್ಮಬ್ಬ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಮ್ಮಬ್ಬ ತೊಕ್ಕೊಟ್ಟು ಬಳಿಯ ಕಲ್ಲಾಪುವಿನಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ನಾಗುರಿ ಸಂಚಾರಿ ಠಾಣಾ ಪೊಲೀಸರು […]

ಉಳ್ಳಾಲ : ಮರಳು ಸಾಗಾಟ ಲಾರಿ – ಖಾಸಗಿ ಬಸ್ ಮುಖಾಮುಖಿ ಢಿಕ್ಕಿ

Thursday, September 19th, 2019
lorry

ಉಳ್ಳಾಲ : ಮರಳು ಸಾಗಾಟದ ಲಾರಿ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಕಲ್ಕಟ್ಟ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ‌ . ಘಟನೆಯಲ್ಲಿ ಬಸ್ ನಲ್ಲಿದ್ದವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಕೆಲಕಾಲ ರಸ್ತೆ ಸಂಚಾರ ಅಡ್ಡಿಯಾಗಿದೆ. ತೌಡುಗೋಳಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಗೆ ವಿರುದ್ದ ದಿಕ್ಕಿನಿಂದ ಹರೇಕಳ ಕಡೆಯಿಂದ ಕೇರಳ ಕಡೆಗೆ ಮರಳು ಸಾಗಾಟ ನಡೆಸುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬೆಳಗ್ಗಿನ ಸಮಯವಾದ್ದರಿಂದ ಬಸ್ಸಿನಲ್ಲಿ ಪ್ರಯಾಣಿಕರು ಹೆಚ್ಚಿದ್ದು, ವಿದ್ಯಾರ್ಥಿಗಳು […]

ವ್ಯಾಪಕ ಮರಳು ಸಾಗಾಟ: 7 ವಾಹನ ವಶ

Wednesday, September 28th, 2016
sand-mafia

ಮಂಜೇಶ್ವರ: ಅನಧಿಕೃತ ಮರಳು ಸಾಗಾಟ ವ್ಯಾಪಕಗೊಂಡ ಹಿನ್ನೆಲೆಯಲ್ಲಿ ಮಂಜೇಶ್ವರ ಪೊಲೀಸರು ಸೋಮವಾರ ರಾತ್ರಿ ಹಾಗೂ ಮಂಗಳವಾರ ಮುಂಜಾನೆ ನಡೆಸಿದ ಕಾರ್ಯಾಚರಣೆಯಲ್ಲಿ 2 ಲಾರಿ ಹಾಗೂ 1 ಪಿಕ್‌ಅಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ 7 ಮಂದಿಯನ್ನು ಸೆರೆಹಿಡಿಯಲಾಗಿದೆ. ತಲಪಾಡಿ ಭಾಗದಿಂದ ಕಾಸರಗೋಡು ಕಡೆಗೆ ಸಾಗಿಸುತ್ತಿದ್ದ ಮರಳು ತುಂಬಿದ ಪಿಕ್‌ಅಪ್‌ನ್ನು ಸೋಮವಾರ ವಶಪಡಿಸಿದ್ದು ಚಾಲಕ ಕಡಂಬಾರ್ ನಿವಾಸಿ ಜಯರಾಜ್ (28) ಎಂಬಾತನನ್ನು ಬಂಧಿಸಲಾಗಿದೆ. ಪಿಕ್‌ಅಪ್‌ನಲ್ಲಿ ಸುಮಾರು 30 ಚೀಲ ಮರಳು ತುಂಬಿಸಿಡಲಾಗಿತ್ತು. ಇದೇವೇಳೆ ಇನ್ನೊಂದು ಮರಳು ಲಾರಿಯನ್ನು ವಶಪಡಿಸಿ ಚಾಲಕ ಮಂಗಳೂರು ನಿವಾಸಿ ಅಬ್ದುಲ್ […]

ಮರಳು ಸಾಗಾಟ ಲಂಚಕ್ಕಾಗಿ ಕೈಯೊಡ್ಡಿದ ಪೊಲೀಸ್, ಸ್ಪಂದನ ಚಾನೆಲ್ ವರದಿಗಾರನ ಮೇಲೆ ಹಲ್ಲೆ

Thursday, October 30th, 2014
spandana

ಉಡುಪಿ : ಜಿಲ್ಲೆಯ ಬ್ರಹ್ಮಾವರ ಠಾಣೆಯಲ್ಲಿ ಮರಳು ಸಾಗಾಟಕ್ಕಾಗಿ ಲಂಚಕ್ಕಾಗಿ ಕೈಯೊಡ್ಡುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಸ್ಪಂದನ ಚಾನೆಲ್ ಇತ್ತೀಚೆಗೆ ರಹಸ್ಯ ಕಾರ್ಯಾಚರಣೆ ಯನ್ನು ಮಾಡಿತ್ತು. ಈ ಕಾರ್ಯಚರಣೆಯ ಮುಂದುವರಿದ ಭಾಗವಾಗಿ ಚಾನೆಲ್ ನ ವಿಶೇಷ ವರದಿಗಾರ ಬ್ರಹ್ಮಾವರ ಠಾಣೆಗೆ ಹೋಗಿದ್ದಾಗ ರಹಸ್ಯ ಕಾರ್ಯಚರಣೆ ಮಾಡುತ್ತಿರುವುದು ಪೊಲೀಸರ ಅರಿವಿಗೆ ಬಂದು ವರದಿಗಾರರ ಮೇಲೆ ಹಲ್ಲೆ ಮಾಡಲಾಗಿತ್ತು ಮತ್ತು ರಹಸ್ಯ ಕಾರ್ಯಚರಣೆಯ ಕ್ಯಾಮರವನ್ನು ಕಿತ್ತುಕೊಳ್ಳಲಾಗಿತ್ತು. ರಹಸ್ಯ ಕಾರ್ಯಚರಣೆಯಲ್ಲಿ ಬ್ರಹ್ಮಾವರ ಸರ್ಕಲ್ ಇನ್ಸ್ ಫೆಕ್ಟರ್ ಅರುಣ್ ನಾಯಕ್ ಮತ್ತು ಕಾನ್ಸ್ಟೇಬಲ್ […]