ಮರವೂರು ಡ್ಯಾಂ ಬಳಿ ಈಜಾಡಲು ತೆರಳಿದ್ದ ಇಂಜಿನಿಯರ್ ನೀರಿನಲ್ಲಿ ಮುಳುಗಿ ಸಾವು

Tuesday, March 17th, 2020
prashanth-shetty

ಮಂಗಳೂರು: ಸ್ನೇಹಿತರ ಜೊತೆಗೂಡಿ ಈಜಾಡಲು ತೆರಳಿದ ವ್ಯಕ್ತಿಯೊಬ್ಬರು ಮುಳುಗಿ ಮೃತಪಟ್ಟ ಘಟನೆ ಮರವೂರು ಡ್ಯಾಂ ಬಳಿ ಮಂಗಳವಾರ ನಡೆದಿದೆ. ಮೃತರನ್ನು ಕಾವೂರು ಬೊಲ್ಪುಗುಡ್ಡೆ ನಿವಾಸಿ ಪ್ರಶಾಂತ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಮೃತರು ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದು , ಮಂಗಳಾ ಈಜು ಕೊಳದಲ್ಲಿ ಈಜಲು ತೆರಳುತ್ತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈಜು ಕೊಳ ಮುಚ್ಚಿರುವುದರಿಂದ ಸ್ಥಳೀಯ ಕೆಲ ಯುವಕರೊಂದಿಗೆ ಮರವೂರು ಡ್ಯಾಂ ಬಳಿಯ ಹಳ್ಳದಲ್ಲಿ ಈಜಾಡಲು ತೆರಳಿದ್ದ ವೇಳೆ ಮುಳುಗಿ ಮೃತಪಟ್ಟಿದ್ದಾರೆ. ಇವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. […]