ಶಿವರಾಜ್ ಹತ್ಯೆ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು , ಮೂವರ ಬಂಧನ
Tuesday, January 23rd, 2018ಮಂಗಳೂರು: ನಗರದಲ್ಲಿ ಭಾನುವಾರ ತಡರಾತ್ರಿ ನಡೆದ ಶಿವರಾಜ್ (39) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುನೀಲ್ (32), ಧೀರಜ್ (25), ಗದಗ ಮೂಲದ ಮಲ್ಲೇಶ್ (23) ಎಂದು ಗುರುತಿಸಲಾಗಿದೆ. ಆರೋಪಿಗಳು ಹಳೇ ದ್ವೇಷದ ಹಿನ್ನಲೆಯಲ್ಲಿ ಶಿವರಾಜ್ ಕೊಲೆ ಮಾಡಲು ಬಂದಿದ್ದೆವು. ತಪ್ಪಿ ಶಿವರಾಜ್ ರನ್ನು ಕೊಲೆ ಮಾಡಿರುವುದಾಗಿ ಪೊಲೀಸರೆದುರು ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಓರ್ವ ಅಮಾಯಕ ಬಲಿ ಮಂಗಳೂರು ಹೊರವಲಯದ ತಣ್ಣೀರುಬಾವಿ ಎಂಬಲ್ಲಿ ತಡರಾತ್ರಿ ಮನೆಯ ಟೆರೇಸ್ […]