5 ವಿದ್ಯುತ್‌ ಕಂಬಗಳ ಜೊತೆ, ರಸ್ತೆಗುರುಳಿದ ಟ್ರಾನ್ಸ್‌ಫಾರ್ಮರ್‌

Wednesday, June 16th, 2021
Transformer

ಮಂಗಳೂರು :  ನಿರಂತರವಾಗಿ ಸುರಿಯುತ್ತಿರುವ ಮಳೆ,  ಭಾರಿ ಗಾಳಿಯಿಂದ  ಬುಧವಾರ ಮಧ್ಯಾಹ್ನ ಮಂಗಳಾದೇವಿ ಬಳಿ ಟ್ರಾನ್ಸ್‌ಫಾರ್ಮರ್‌ ಒಂದು  ರಸ್ತೆಗೆ ಬಿದ್ದಿದ್ದು, ಅಕ್ಕಪಕ್ಕದಲ್ಲಿದ್ದ 5 ವಿದ್ಯುತ್‌ ಕಂಬಗಳೂ ತುಂಡಾಗಿವೆ. ರಸ್ತೆಯಲ್ಲಿ ವಾಹನ ಸಂಚಾರ ಇಲ್ಲದಿದ್ದುದರಿಂದ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಮಂಗಳಾದೇವಿ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯವುಂಟಾಗಿದೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಧಾವಿಸಿ, ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ. ಟ್ರಾನ್ಸ್‌ಫಾರ್ಮರ್‌ ಇದ್ದ ಜಾಗದಲ್ಲಿ ಮರಗಳೂ ಇದ್ದು, ರಸ್ತೆಯ ಇನ್ನೊಂದು ಬದಿಗೆ ಸ್ಥಳಾಂತರಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿ

Thursday, January 7th, 2021
Hotel

ಉಡುಪಿ : ಅನಿರೀಕ್ಷಿತವಾಗಿ ಸುರಿದ ಗುಡುಗು ಸಹಿತ‌ ಭಾರೀ ಮಳೆಯ ಹಿನ್ನಲೆಯಲ್ಲಿ ಸಿಡಿಲು ಬಡಿದು ಹೋಟೆಲೊಂದು ಬೆಂಕಿಗಾಹುತಿಯಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಆಕಾಶವಾಣಿ ಸಮೀಪವಿರುವ ಸಪ್ತಮಿ ಹೋಟೆಲಿಗೆ ಸಿಡಿಲು ಬಡಿದ ಪರಿಣಾಮ ಹೋಟೆಲು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಅಗ್ನಿ ‌ಶಾಮಕ ದಳ  ಆಗಮಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದೆ.

ಕಾಸರಗೋಡು : ಮಳೆಯ ಅಬ್ಬರಕ್ಕೆ ಇಬ್ಬರು ಬಲಿ, 25ಕ್ಕೂ ಅಧಿಕ ಮನೆಗಳು ಹಾನಿ

Monday, September 21st, 2020
Kasaragod Rain

ಕಾಸರಗೋಡು : ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿಯಾಗಿದ್ದಾರೆ. 25ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ. 20ಕ್ಕೂ ಅಧಿಕ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಳೆಗೆ ಆರ್ಭಟಕ್ಕೆ  ಮಧೂರು ಚೇನಕ್ಕೋಡು ಎಂಬಲ್ಲಿ ಬಯಲಿನಲ್ಲಿ ನೀರು ತುಂಬಿದ್ದ ಹೊಂಡಕ್ಕೆ ಬಿದ್ದು ಚೆಂದ್ರಶೇಖರ(37) ಹಾಗೂ ಚೆರ್ವತ್ತೂರು ಮಯ್ಯಚ್ಚಿ ಎಂಬಲ್ಲಿ ಸುಧಾಕರ(50) ಎಂಬವರು ನೀರಿನ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಅಡ್ಕತ್ತಬೈಲ್ ಬೀಚ್ ಪರಿಸರದಲ್ಲಿ ಇಂದು ಬೆಳಗ್ಗೆ ಬೀಸಿದ ಸುಂಟರಗಾಳಿಗೆ 12ರಷ್ಟು ಮನೆಗಳು ಭಾಗಶಃ ಹಾನಿಗೀಡಾಗಿದೆ.  ಮಧೂರು ಪಟ್ಲದಿಂದ ಮೂರು ಹಾಗೂ ಮೊಗರು ಪರಿಸರದಿಂದ ಏಳು ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಮಂಜೇಶ್ವರ ತಾಲೂಕಿನಲ್ಲಿ […]

ದ.ಕ. ಜಿಲ್ಲೆಯಲ್ಲಿ ಭಾರಿ ಮಳೆ ಸಂಪರ್ಕ ರಸ್ತೆ, ಮನೆಗಳು ಕುಸಿತ, ಹಲವೆಡೆ ಜಲಾವೃತ

Sunday, September 20th, 2020
neerumarga

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕಳೆದ 24ಗಂಟೆಗಳಲ್ಲಿ ಸುರಿದ ಮಳೆಯಿಂದಾಗಿ  ನಗರ ಹೊರವಲಯದ ನೀರುಮಾರ್ಗ ಮತ್ತು ಬಜ್ಪೆ ಸಮೀಪದ ಆದ್ಯಪಾಡಿ ಎಂಬಲ್ಲಿ ಭೂ ಕುಸಿದ ಪರಿಣಾಮ ಸಂಪರ್ಕ ರಸ್ತೆ ಕಡಿದು ಹೋಗಿದೆ.‌ ಮುನ್ನೆಚ್ಚರಿಕೆಯ ಕ್ರಮವಾಗಿ ಈ ಭಾಗದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ . ಅದಲ್ಲದೆ ಸರಿಪಳ್ಳ ಎಂಬಲ್ಲಿ ಮನೆ ಯೊಂದು ಕುಸಿದ ಪರಿಣಾಮ ಇಬ್ಬರಿಗೆ‌ ಗಾಯವಾಗಿದ್ದು, ಅವರನ್ನು‌ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಜಪ್ಪಿನಮೊಗರು, ಕುದ್ರೋಳಿ ಮತ್ತಿತರ ಕಡೆ ನೀರು ನಿಲುಗಡೆಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ನಗರದ ಫಳ್ನೀರ್ ರಸ್ತೆಯ […]

ನಿರಂತರ ಮಳೆ – ಎಕ್ಕೂರು, ಜಪ್ಪಿನಮೊಗರು, ಕಲ್ಲಾಪು ಪ್ರದೇಶ ಜಲಾವೃತ

Friday, September 11th, 2020
Jappiana Mogaru

ಮಂಗಳೂರು : ನಿರಂತರವಾಗಿ ನಗರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನೇತ್ರಾವತಿ  ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು ಎಕ್ಕೂರು, ಜಪ್ಪಿನಮೊಗರು, ಕಲ್ಲಾಪು ಸೇರಿದಂತೆ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಇದರಿಂದಾಗಿ ಶುಕ್ರವಾರ  ಮುಂಜಾನೆಯ ವೇಳೆ ಜಪ್ಪಿನಮೊಗರು ಸುತ್ತಮುತ್ತ ಹಲವು ಮನೆಗಳು, ಫ್ಲ್ಯಾಟ್‌ಗಳ ಒಳಗೆ ನೆರೆ ನೀರು ನುಗ್ಗಿದೆ. ಗುರುವಾರ ತಡರಾತ್ರಿಯಿಂದ ಮಳೆ ಮತ್ತಷ್ಟು ಬಿರುಸುಗೊಂಡಿದ್ದರಿಂದ  ‘‘ಜಪ್ಪಿನಮೊಗರು ಆಸುಪಾಸಿನ ಸುಮಾರು 50 ಮನೆಗಳಿಗೆ ಮಳೆ ನೀರು ನುಗ್ಗಿದೆ. ಮನೆಯಲ್ಲಿರುವ ಸಾಮಗ್ರಿಗಳು ಮಳೆ ನೀರಿನಿಂದಾಗಿ ಸಂಪೂರ್ಣವಾಗಿ ನಿರುಪಯುಕ್ತವಾಗಿದೆ. ಶುಕ್ರವಾರ ಬೆಳಗ್ಗೆ ಅಗ್ನಿಶಾಮಕ ದಳದ ತಂಡ ದೋಣಿಗಳೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಈಗಾಗಲೇ […]

ಗುರುಪುರ ಬಳಿ ಗುಡ್ಡ ಕುಸಿದು ನಾಲ್ಕು ಮನೆಗಳು ನೆಲಸಮ, ಮಣ್ಣಿನಡಿ ಸಿಲುಕಿರುವ ಇಬ್ಬರು ಮಕ್ಕಳು

Sunday, July 5th, 2020
gurupura landslid

ಮಂಗಳೂರು: ನಿರಂತರವಾಗಿ ಸುರಿದ ಮಳೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದ ಬಂಗ್ಲಗುಡ್ಡೆ ಬಳಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿರುವ ಘಟನೆ ರವಿವಾರ ನಡೆದಿದೆ. ನಾಲ್ಕು ಮನೆಗಳ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ. ಇನ್ನೂ ಎಂಟು ಮನೆಗಳು ಅಪಾಯದಲ್ಲಿದೆ. ಗುಡ್ಡ ಇನ್ನೂ ಕುಸಿಯುತ್ತಿದೆ ಎನ್ನಲಾಗಿದೆ. ತೆಂಗಿನ ಮರ ಸೇರಿದಂತೆ ಕೆಲವು ಮರಗಳು ಮಣ್ಣಿನ ಜೊತೆಗೆ ಕುಸಿದು ಬಿದ್ದಿದೆ. ಘಟನಾ ಸ್ಥಳಕ್ಕೆ ಸ್ಥಳೀಯರು ಧಾವಿಸಿದ್ದು, ಸಿಲುಕಿರುವವರ ಹೊರತೆಗೆಯಲು ಪ್ರಯತ್ನಿಸುತ್ತಿದ್ದಾರೆ. […]

ಕರಾವಳಿಗೆ ಆರೆಂಜ್ ಅಲರ್ಟ್, ಜುಲೈ 7ರವರೆಗೂ ಮಳೆ

Saturday, July 4th, 2020
Mangalore Rain

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ದಿಂದ ಭಾರಿ ಮಳೆಯಾಗುತ್ತಿದ್ದು ಶನಿವಾರವೂ ಮುಂದುವರಿದಿದೆ. ಶುಕ್ರವಾರ ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಮೋಡ-ಬಿಸಿಲಿನ ನಡುವೆ ಅಷ್ಟಾಗಿ ಮಳೆಯಾಗಿರಲಿಲ್ಲ. ಅಪರಾಹ್ನ ಮತ್ತೆ ಚುರುಕಾಗಿದೆ. ಜತೆಗೆ ಗಾಳಿಯೂ ವೇಗ ಪಡೆದಿತ್ತು. ಭಾರಿ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ಮನೆಗಳಿಗೂ ಹಾನಿಯಾಗಿದೆ. ರಸ್ತೆ ಕಾಮಗಾರಿಗಳಿಗಾಗಿ ಅಗೆದಿದ್ದ ಗುಡ್ಡಗಳು ಕುಸಿದಿದ್ದರಿಂದ ವಾಹನ ಸಂಚಾರಕ್ಕೂ ಅಡಚಣೆಯಾಗಿತ್ತು. ಕೆಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದವು. ಹವಾಮಾನ ಇಲಾಖೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜುಲೈ 7ರವರೆಗೂ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. […]

ಉಡುಪಿಯಲ್ಲಿ ಸಿಡಿಲು, ಮಿಂಚು, ಗಾಳಿ ಸಹಿತ ಭಾರೀ ಮಳೆ

Tuesday, April 7th, 2020
udupi rain

ಉಡುಪಿ :  ಕಾಪು ತಾಲ್ಲೂಕಿನಾದ್ಯಂತ ಮಂಗಳವಾರ ಸಂಜೆ ಸಿಡಿಲು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಿದೆ. ಕೆಲವಡೆ ಗಾಳಿ, ಸಿಡಿಲು ಸಹಿತ ಮಳೆಯಾಗಿದೆ. ಹಲವು ಕಡೆಗಳಲ್ಲಿ ಚರಂಡಿಯ ವ್ಯವಸ್ಥೆ ಸರಿಪಡಿಸದೆ ಇರುವುದರಿಂದ ರಸ್ತೆಯಲ್ಲೇ ನೀರು ಹರಿದು ಹೋಗುವಂತಾಯಿತು. ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕ ಕಾಮಗಾರಿಯಿಂದ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ಹರಿದುಹೋಗುತಿತ್ತು, ಪಡುಬಿದ್ರಿಯ ಕಲ್ಸಂಕದಲ್ಲಿ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಮಳೆ ನೀರು ಹೆದ್ದಾರಿಯಲ್ಲಿಯೇ ಹೋಗುವಂತಾಯಿತು. ಪಡುಬಿದ್ರಿಯ ಕಾರ್ಕಳ ಸಂಪರ್ಕಿಸುವ ಸರ್ಕಲ್ ಬಳಿ ಮಳೆ ನೀರು ನಿಂತಿತ್ತು. ಆದರೆ ಲಾಕ್‍ಡೌನ್‍ನಿಂದ ಹೆಚ್ಚಿನ ವಾಹನಗಳು […]

ಬೆಂಗಳೂರು : ಕೆಲವೆಡೆ ಭಾರೀ ಸುರಿದ ಮಳೆ; ಮನೆಗೆ ನುಗ್ಗಿದ ನೀರು

Thursday, October 3rd, 2019
bengaluru

ಬೆಂಗಳೂರು : ಬುಧವಾರ ರಾತ್ರಿ ನಗರದ ಕೆಲವೆಡೆ ಸುರಿದ ಭಾರೀ ಮಳೆಯಿಂದಾಗಿ ಮನೆಯೊಳಗೆ ನೀರು ನುಗ್ಗಿ ಜನರು ಪರದಾಡುವಂತಾಯಿತು. ನೀರು ನಿಂತಿದ್ದರಿಂದ ಗುರುವಾರ ಬೆಳಿಗ್ಗೆಯಿಂದಲೇ ನಗರದ ಅಲ್ಲಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಜನರು ವಾಹನ ಚಲಾಯಿಸಲು ಪರದಾಡಿದರು. ಸಿ.ವಿ.ರಾಮ್ ನಗರ, ಎಚ್ ಎಸ್ ಆರ್ ಲೇಜೌಟ್, ಮಲ್ಲೇಶ್ವರಂ, ವಿಜಯನಗರ ಹಾಗೂ ಜಲಹಳ್ಳಿ ಪ್ರದೇಶಕ್ಕೆ ಮಳೆಯಿಂದಾಗಿ ಹೆಚ್ಚಿನ ಹಾನಿಯಾಗಿದೆ. ಬುಧವಾರ ರಾತ್ರಿ 11.30ಕ್ಕೆ ಪ್ರಾರಂಭವಾದ ಮಳೆ ಬೆಳಿಗ್ಗೆ4.20ರ ವರೆಗೆ ನಿರಂತರವಾಗಿ ಸುರಿದಿದೆ. ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ […]

ಕುಂದಾಪುರ ರಸ್ತೆ ದುರಸ್ತಿ : ವಾಹನ ಸವಾರರು ಹೈರಾಣ

Monday, September 9th, 2019
kundapura

ಕುಂದಾಪುರ : ಪುರಸಭೆ ವ್ಯಾಪ್ತಿಯ ಹೆದ್ದಾರಿಯ ಅನೇಕ ಕಡೆಗಳಲ್ಲಿ ಭಾರೀ ಮಳೆಯಿಂದಾಗಿ ಮತ್ತೆ ಬೃಹತ್‌ ಹೊಂಡ – ಗುಂಡಿಗಳು ಕಾಣಿಸಿಕೊಂಡಿದ್ದು, ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆಯಡಿ ದಂಡವನ್ನು ಹೆಚ್ಚಿಸುವ ಸರಕಾರ ರಸ್ತೆ ದುರಸ್ತಿಗೆ ಯಾಕೆ ಮನಸ್ಸು ಮಾಡುತ್ತಿಲ್ಲ ಎನ್ನುವ ಆರೋಪವನ್ನು ಜನರು ಮಾಡುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಹಾಕಲಾದ ತೇಪೆ ಎದ್ದು ಹೋಗಿದೆ. ಇದರಿಂದ ಈಗ ಹಿಂದಿಗಿಂತಲೂ ಹೆಚ್ಚು ಕಡೆಗಳಲ್ಲಿ ಹೆದ್ದಾರಿ ಮಧ್ಯೆಯೇ ಹೊಂಡ – ಗುಂಡಿಗಳಾಗಿವೆ. ಮಳೆ […]