ಮಂಗಳೂರು: ಮಹತೋಭಾರ ಮಂಗಳಾದೇವಿ ದೇವಸ್ಥಾನದ ನವರಾತ್ರಿ ಮಹೋತ್ಸವವು ಅಕ್ಟೋಬರ್ 17 ರಿಂದ ಆರಂಭಗೊಂಡಿದೆ. ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಜನಸಂದಣಿ ಸೇರದಂತೆ ಉತ್ಸವದ ಸಮಯ ಬದಲಾವಣೆ ಮಾಡಲಾಗಿದೆ. ಸಾರ್ವಜನಿಕ ಅನ್ನಸಂತರ್ಪಣೆ ಇರುವುದಿಲ್ಲ ಎಂದು ಎಂದು ಆಡಳಿತ ಮೊಕ್ತೇಸರ ಪಿ.ರಮಾನಾಥ ಹೆಗ್ಡೆ ಹೇಳಿದ್ದಾರೆ. ಮಹಾನವಮಿಯಂದು ಚಂಡಿಕಾಹೋಮ, ವಾಹನ ಪೂಜೆ (ಆಯುಧ ಪೂಜೆ), ರಾತ್ರಿ ದೊಡ್ಡ ವಿಶೇಷ ರಂಗಪೂಜೆ ನಂತರ ಸಣ್ಣ ರಥೋತ್ಸವ ನೆರವೇರಿಸಲಾಗುವುದು. ವಿಜಯದಶಮಿಯಂದು ಬೆಳಿಗ್ಗೆ ತೆನೆ ಹಬ್ಬದ ಅಂಗವಾಗಿ 8 ಗ್ರಾಮದ ಜನರಿಗೆ ತೆನೆ ನೀಡುವ ಪದ್ಧತಿ […]