ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಆರೋಪಿಯ ಬಂಧನ

Saturday, December 22nd, 2018
arrest

ಮಂಗಳೂರು: ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಮುಖ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡು ವಿದೇಶಕ್ಕೆ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಬಜ್ಪೆಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಉಳಾಯಿಬೆಟ್ಟುವಿನ ಮೂಡುಜೆಪ್ಪುಮನೆಯ ಮಹಮ್ಮದ್ ಅಶ್ರಫ್ (25) ಬಂಧಿತ ಆರೋಪಿ. ಈ ಹಿಂದೆ ಆರೋಪಿಯ ಪತ್ತೆಗೆ ಎಲ್.ಓ.ಸಿ ಪ್ರಕಟಣೆ ಹೊರಡಿಸಿದ ಮೇರೆಗೆ ಆರೋಪಿಯು ದುಬೈನಿಂದ ಮಂಗಳೂರು ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಾಗ ವಶಕ್ಕೆ ಪಡೆದುಕೊಂಡು, ಕಾನೂನು ಕ್ರಮ ಜರುಗಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸಾಲ್ಮರದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

Friday, December 16th, 2016
Mahammad Ashraf

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಸಾಲ್ಮರದಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಸುಮಾರು 15 ಸಾವಿರ ರೂಪಾಯಿ ಮೌಲ್ಯದ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಮಾರುತಿ ಓಮ್ನಿಯನ್ನು ವಶಕ್ಕೆ ಪಡೆದಿದ್ದಾರೆ. ಮಹಮ್ಮದ್ ಅಶ್ರಫ್(37) ಗಾಂಜಾ ಸಾಗಣೆ ಪ್ರಕರಣದಡಿ ಬಂಧಿತನಾದ ವ್ಯಕ್ತಿ. ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪುತ್ತೂರು ಪೊಲೀಸರು ಗುರುವಾರ ಸಂಜೆ ದಾಳಿ ನಡೆಸಿದಾಗ ಪಡ್ನೂರು ಗ್ರಾಮದ ಶಾಂತಿನಗರದ ಮಹಮ್ಮದ್ ಅಶ್ರಫ್ ಬಲೆಗೆ ಬಿದ್ದಿದ್ದಾನೆ. ಆತನ ಬಳಿ 500 ಗ್ರಾಂ ಗಾಂಜಾ ಪತ್ತೆಯಾಗಿದೆ. ನಗರ ಠಾಣಾ […]