ಬೇಜವಾಬ್ದಾರಿ ಹೇಳಿಕೆ ನೀಡುವವರು ಮೊದಲು ಅಧಿಕಾರ ಬಿಟ್ಟು ಹೋಗಲಿ: ಸಿಎಂಗೆ ಪೂಜಾರಿ ತರಾಟೆ

Friday, January 6th, 2017
janardhana-poojary

ಮಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಇತ್ತೀಚೆಗೆ ನಿಧನರಾದ ಸಚಿವ ಮಹಾದೇವ ಪ್ರಸಾದ್ ಅವರ ಪತ್ನಿ ಅಥವಾ ಮಗನಿಗೆ ಟಿಕೆಟ್ ನೀಡಬೇಕು. ಅನುಕಂಪದ ಮತವಾದರೂ ಬರುತ್ತವೆ. ಅದನ್ನು ಬಿಟ್ಟು ಅವರ ಕ್ಷೇತ್ರದಲ್ಲಿ ಬೇರೆ ಯಾರನ್ನಾದರೂ ನಿಲ್ಲಿಸಿದರೆ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ. ಜನಾರ್ದನ ಪೂಜಾರಿ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರತಿಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವತ್ತೂ ಬೆಲೆ ಕೊಡುವುದಿಲ್ಲ. ಆದರೆ, ಈ ಮಾತಿನ ವಿರುದ್ಧ ಸಿಎಂ ನಡೆದರೆ […]