ಪೆಟ್ರೋಲ್ ಸುರಿದು ದೇವಸ್ಥಾನದಲ್ಲೇ ಆತ್ಮಹತ್ಯೆ ಮಾಡಿಕೊಂಡ ಯುವಕ
Friday, September 18th, 2020ಗಂಗೊಳ್ಳಿ : ಗಂಗೊಳ್ಳಿಯ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಗುರುವಾರ ಮಧ್ಯಾಹ್ನ ಯುವಕನೋರ್ವ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಯತ್ನಿಸಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಯುವಕ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ. ದೇವರು ಮೈಮೇಲೆ ಬರುತ್ತಿದ್ದರೂ ಸಮುದಾಯದ ದೇವಸ್ಥಾನದಲ್ಲಿ ಪಾತ್ರಿಯಾಗಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿ ರಾಘವೇಂದ್ರ ಖಾರ್ವಿ, ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ರಾಘವೇಂದ್ರ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಗಂಗೊಳ್ಳಿ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಮೃತರು ಎಂದು ಗುರುತಿಸಲಾಗಿದೆ. ಈ ಸಂದರ್ಭ ರಕ್ಷಿಸಲು ಹೋಗಿ ಗಾಯಗೊಂಡವರನ್ನು […]