ಜೆಡಿಯಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಜಯಲಕ್ಷ್ಮಿ ಎಸ್. ಹೆಗ್ಡೆ ನಿಧನ

Thursday, October 12th, 2023
jayalakshmi-Hegde

ಮಂಗಳೂರು : ಜಾತ್ಯತೀತ ಜನತಾದಳ ಘಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ಮಹಿಳಾ ಘಟಕದ ಅಧ್ಯಕ್ಷೆ ಬೈದಾವು ಗುತ್ತು ಜಯಲಕ್ಷ್ಮಿ ಎಸ್. ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯ ಹೊಂದಿದ್ದು, ಗುರುವಾರ ಅ. 12ರಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅಡ್ಯಾರು ಮಹಿಳಾ ಮಂಡಲದ ಅಧ್ಯಕ್ಷರಾಗಿ 40 ವರ್ಷ ಸೇವೆ ಸಲ್ಲಿಸಿದ್ದರು. ಬಂಟರ ಯಾನೆ ನಾಡವರ ಮಾತೃ ಸಂಘದ ಕಾರ್ಯಕಾರಿ ಸಮಿತಿಯ ಮುಖ್ಯ ಕಾರ್ಯಕರ್ತರಾಗಿಯೂ ಉಪಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. ಅಡ್ಯಾರು ಗ್ರಾಮ ಪಂಚಾಯಿತಿನಲ್ಲಿ ಎರಡು ಅವಧಿಗೆ ಆಯ್ಕೆಯಾಗಿ ಒಂದು […]

ಜೆಡಿಎಸ್ ಪಕ್ಷದ ತತ್ವ ಸಿದ್ದಾಂತವನ್ನು ಕಾಂಗ್ರೆಸ್ ಮತ್ತು ಬಿಜೆಪಿ ಅನುಸರಿಸುತ್ತಾ ಬಂದಿದೆ : ಲೀಲಾವತಿ ಆರ್ ಪ್ರಸಾದ್

Sunday, March 21st, 2021
JDS

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಜಾತ್ಯಾತೀತ ಜನತಾದಳ ಮಹಿಳಾ ಘಟಕದ ವತಿಯಿಂದ ಮಹಿಳಾ ಸಮಾವೇಶ ಮಹಿಳಾ ದಿನಾಚರಣೆ ಮತ್ತು ಸಾಮರಸ್ಯ ಸಂಗಮ ಕಾರ್ಯಕ್ರಮ ಮಂಗಳೂರಿನ ಕದ್ರಿಪಾರ್ಕ್ ಬಳಿಯ ಲಯನ್ಸ್ ಅಶೋಕ ಸೇವಾ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮಾಜಿ ಸಚಿವೆ, ಜೆಡಿಎಸ್ ಮಹಿಳಾ ಘಟಕದ ರಾಜ್ಯಧ್ಯಕ್ಷೆ ಲೀಲಾವತಿ ಆರ್ ಪ್ರಸಾದ್ ದೀಪಬೆಳಗಿ ಚಾಲನೆ ನೀಡಿದರು. ಬಳಿಕ ಗ್ರಾಮಾಪಂಚಯತ್ ಚುನಾವಣೆಯಲ್ಲಿ ಗೆದ್ದ ಜೆಡಿಎಸ್ ಅಭ್ಯರ್ಥಿಗಳಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಾಲ್ಕು ಮಹಿಳಾ ಸಾಧಕಿಯರಿಗೆ ಸನ್ಮಾನ […]