ಹೆರಿಗೆಯಾಗಿ 24ನೇ ದಿನಕ್ಕೇ ಮಹಾಮಾರಿ ಕರೊನಾಗೆ ಮಹಿಳೆ ಬಲಿ

Saturday, June 5th, 2021
nirmala

ಕೊಪ್ಪಳ: ತಾಲೂ ಕಿನ  ಗುಳದಳ್ಳಿ ಗ್ರಾಮದ ಮಹಿಳೆಯೊಬ್ಬರು ಹೆರಿಗೆಯಾಗಿ 24ನೇ ದಿನಕ್ಕೇ ಮಹಾಮಾರಿ ಕರೊನಾಗೆ  ಬಲಿಯಾಗಿದ್ದು, ಹಸುಗೂಸು ತಾಯಿ ಇಲ್ಲದೆ ತಬ್ಬಲಿ ಆಗಿದೆ. ನಿರ್ಮಲಾ ವೀರಯ್ಯ  ಮೃತರಾದ ಮಹಿಳೆ. ನಿರ್ಮಲಾಗೆ ಹೆರಿಗೆ ಆದ ಬಳಿಕ ಕರೊನಾ ಸೋಂಕು ಕಾಣಿಸಿಕೊಂಡಿತ್ತು. ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಪುತ್ತೂರು: ಡೆಂಗ್ಯೂ ಜ್ವರಕ್ಕೆ ಮಹಿಳೆ ಬಲಿ

Friday, June 19th, 2020
puttur Dengue

ಪುತ್ತೂರು: ಒಂದು ವಾರದಿಂದ ಜ್ವರ ದಿಂದ ಬಳಲುತ್ತಿದ್ದು ವಿವಾಹಿತ ಮಹಿಳೆ ಜೂ. 18 ರಂದು ತಡರಾತ್ರಿ ಮೃತಪಟ್ಟ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಪುತ್ತೂರು ತಾಲೂಕಿನ ಅರಿಯಡ್ಕ ನಿವಾಸಿ ನಜೀರ್ ಮಾಸ್ಟರ್ ಅವರ ಪತ್ನಿ ನಸೀಮಾ (32) ಮೃತಪಟ್ಟ ಮಹಿಳೆ. ನಸೀಮಾ ಅವರು ಕಳೆದ ಒಂದು ವಾರದಿಂದ  ಪುತ್ತೂರಿನಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಜ್ವರ ಉಲ್ಭಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಮೃತಪಟ್ಟಿದ್ದಾರೆ. ಮೃತರು ಪತಿ, ಮೂವರು ಪುತ್ರರನ್ನು […]