ದೇಶಸೇವೆಯನ್ನೇ ಉಸಿರಾಗಿಸಿಕೊಂಡಿರುವ ಸಂಘಟನೆ ಆರ್ ಎಸ್‍ಎಸ್ : ಕಂದಾಯ ಸಚಿವ ಆರ್ ಅಶೋಕ

Wednesday, October 6th, 2021
R Ashoka

ಬೆಂಗಳೂರು  : “ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಆರ್ ಎಸ್ ಎಸ್ ಅನ್ನು ಟೀಕಿಸುವುದು ತಪ್ಪು. ಎಲ್ಲವನ್ನು ತಿಳಿದುಕೊಂಡು ಮಾತನಾಡಬೇಕು”, ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು “ಆರೆಸ್ಸೆಸ್ ಒಂದು ದೇಶಭಕ್ತ ಸಂಘಟನೆ. ಸೇವೆಯೆ ಅದರ ಮೂಲಮಂತ್ರ. ತುರ್ತು ಪರಿಸ್ಥಿತಿಯನ್ನು ವಿರೋಧಿಸಿ ಬಂಧಿತರಾದವರು ಶೇಕಡ 80 ರಷ್ಟು ಜನ ಆರ್‍ಎಸ್‍ಎಸ್ ಗೆ ಸೇರಿದವರು. ತುರ್ತುಪರಿಸ್ಥಿತಿಯ ವಿರುದ್ಧ ಹೋರಾಡುವಲ್ಲಿ ಮತ್ತು ಪ್ರಜಾಪ್ರಭುತ್ವವನ್ನು […]

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಆಸ್ಕರ್ ಫೆರ್ನಾಂಡಿಸ್ ರವರಿಗೆ ಆತ್ಮೀಯ ಶ್ರದ್ದಾಂಜಲಿ

Tuesday, September 28th, 2021
oscar-fernandes

ಮುಂಬಯಿ : ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಜನಪ್ರಿಯ ಸಮಾಜ ಸೇವಕ ಆಸ್ಕರ್ ಫೆರ್ನಾಂಡಿಸ್ ಅವರು ಸೆ. 13 ರಂದು ನಿಧನರಾಗಿದ್ದು, ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಕರಾವಳಿಯ ಉಭಯ ಜಿಲ್ಲೆಗಳ ಅಭಿವೃದ್ದಿ ಬಗ್ಗೆ ಕ್ರೀಯಾಶೀಲವಾಗಿರುವ ಸರಕಾರೇತರ ಸಂಸ್ಥೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಸೆ. 24ರಂದು ಜೂಮ್ ಮೂಲಕ ಶ್ರದ್ದಾಂಜಲಿ ಸಭೆ ನಡೆಯಿತು. ಈ ಸಭೆಯಲ್ಲಿ ಮುಂಬಯಿಯ ವಿವಿಧ ಜಾತೀಯ ಸಂಘಟನೆಗಳ ಪ್ರಮುಖರು ಮಾತ್ರವಲ್ಲದೆ, ಊರಿನ ಗಣ್ಯರು ಬಾಗವಹಿಸಿದ್ದರು. ಜಯಶ್ರೀಕೃಷ್ಣ […]

ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

Monday, September 13th, 2021
Oscar fernandise

ಮಂಗಳೂರು : ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೆ.13 ರಂದು ನಿಧನರಾಗಿದ್ದಾರೆ. ಮನೆಯಲ್ಲಿ ಯೋಗ ಮಾಡುತ್ತಿರುವಾಗ ಕುಸಿದು ಬಿದ್ದು  ತಲೆಯ ಒಳಗೆ ರಕ್ತಸ್ರಾವವಾಗಿರುವುದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ಹೆಪ್ಪುಗಟ್ಟಿರುವ ರಕ್ತವನ್ನು ತೆಗೆಯಲು ವೈದ್ಯರು ಸರ್ಜರಿ ಮಾಡಿದ್ದರು. ಆ ಬಳಿಕ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮಾ.27, 1941 ರಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್, ಐಎನ್ ಸಿಯಲ್ಲಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವವುಳ್ಳ ನಾಯಕರಾಗಿದ್ದರು. ಮಾಜಿ ಪ್ರಧಾನಿ ರಾಜೀವ್ […]

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ತೀವ್ರ ನಿಗಾ ಘಟಕದಲ್ಲಿ

Wednesday, July 21st, 2021
oscar faradise

ಮಂಗಳೂರು: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಫ್ಲ್ಯಾಟ್ ನಲ್ಲಿ  ಜಾರಿ ಬಿದ್ದು  ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಮಂಗಳೂರು ಅತ್ತಾವರದಲ್ಲಿರುವ ಫ್ಲ್ಯಾಟ್ ನಲ್ಲಿ ಯೋಗ ಮಾಡುತ್ತಿದ್ದ ವೇಳೆ ಜಾರಿ ಬಿದ್ದಿದ್ದ ಆಸ್ಕರ್ ಫರ್ನಾಂಡಿಸ್ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಇನ್ನು ಭಾನುವಾರ ಜಾರಿ ಬಿದ್ದ ಸಮಯ ಯಾವ ಗಾಯವಾಗಿಲ್ಲ ಎಂಬ ನಿರ್ಲಕ್ಷ್ಯದಿಂದಿದ್ದ ಫರ್ನಾಂಡಿಸ್ ಅವರು ಅದೇ ದಿನ ಸಂಜೆ ಡಯಾಲಿಸಿಸಿ ಗೆ ತೆರಳಿದ್ದಾಗ […]