ಮಾಡೂರಿನ ವ್ಯಕ್ತಿಯ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ
Wednesday, May 15th, 2019ಮಂಗಳೂರು : ಕೋಟೆಕಾರ್ ಸಮೀಪದ ಮಾಡೂರಿನಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ರಾ.ಹೆ.66ರ ಉಳ್ಳಾಲ ನೇತ್ರಾವತಿ ನದಿಯಲ್ಲಿ ಮೇ 15 ರ ಬುಧವಾರ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಕೋಟೆಕಾರ್ ಸಮೀಪದ ಮಾಡೂರಿನ ಲೋಕೇಶ್ ಎಂದು ಗುರುತಿಸಲಾಗಿದೆ. ಇವರು ಕಳೆದ ಮೂರು ದಿನದ ಹಿಂದೆ ಕಾಣೆಯಾಗಿದ್ದು, ನದಿಗೆ ಹಾರಿ ಆತ್ಮಹತ್ಯೆಗೈದಿರಬೇಕು ಎಂದು ಶಂಕಿಸಲಾಗಿದೆ. ಕೃತ್ಯಕ್ಕೆ ಕಾರಣ ಏನು ಎಂದು ತಿಳಿದು ಬಂದಿಲ್ಲ. ಮೃತದೇಹ ಸಂಪೂರ್ಣವಾಗಿ ಊದಿಕೊಂಡಿದ್ದು ಗುರುತು ಪತ್ತೆಯಾಗ್ದ ಸ್ಥಿತಿಯಲ್ಲಿದೆ. ಉಳ್ಳಾಲ ನೇತ್ರಾವತಿ ಸೇತುವೆಯಡಿ ಮೃತದೇಹ ತೇಲುವುದನ್ನು ಕಂಡ ಸಾರ್ವಜನಿಕರು […]