ಸತ್ತ ವ್ಯಕ್ತಿಗೆ ಎರಡನೇ ಡೋಸ್ ಕೋವಿಡ್ ಲಸಿಕೆ, ಮಗನ ಮೊಬಲೈ ಗೆ ಎಸ್ಎಂಎಸ್

Wednesday, October 27th, 2021
Covid-vaccine

ವಿಟ್ಲ : ಸತ್ತ ವ್ಯಕ್ತಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಮಗನ ಮೊಬೈಲ್ಗೆ ಬಂದ ಘಟನೆ ನಡೆದಿದೆ. ಆರು ತಿಂಗಳ ಹಿಂದೆಯೇ  ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬುವರು 2001ರ ಏ.27 ರಂದು ಮೃತಪಟ್ಟಿದ್ದರು. ಆದರೆ, ಅ.14ರಂದು ಅವರಿಗೆ ಎರಡನೇ ಡೋಸ್ ನೀಡಲಾಗಿದೆ ಎಂಬ ಎಸ್ಎಂಎಸ್ ಮಗನ ಮೊಬೈಲ್ಗೆ ಬಂದಿದೆ. ಮಾಣಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾರ್ಚ್ 24ರಂದು ಮೃತ ಹಸೈನಾರ್ ಅವರಿಗೆ ಪ್ರಥಮ ಡೋಸ್ ನೀಡಲಾಗಿತ್ತು. ಎರಡನೇ ಡೋಸ್ ಪಡೆಯುವ ಮೊದಲೇ […]

ಪುತ್ತೂರು : ಲಾರಿ-ಸ್ಕೂಟರ್ ಡಿಕ್ಕಿ ಸವಾರ ಮೃತ್ಯು

Monday, May 17th, 2021
Seetharam

ಪುತ್ತೂರು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪುತ್ತೂರು ನಗರದ ಬೈಪಾಸ್ ರಸ್ತೆಯಲ್ಲಿನ ತೆಂಕಿಲ ಎಂಬಲ್ಲಿ  ಲಾರಿ ಮತ್ತು ಸ್ಕೂಟರೊಂದರ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ನಡೆದಿದೆ. ಮೃತರನ್ನು ಸುಳ್ಯ ತಾಲೂಕಿನ ಬೆಳ್ಳಾರೆ ನಿವಾಸಿ ಸೀತಾರಾಮ ಭಟ್ ಎಂದು ಗುರುತಿಸಲಾಗಿದೆ. ಸೀತಾರಾಮ ಭಟ್ ಬೆಳ್ಳಾರೆಯಿಂದ ತನ್ನ ಸ್ಕೂಟರ್‌ನಲ್ಲಿ ಮಂಗಳೂರು ರಸ್ತೆಯಲ್ಲಿ ಹೋಗುತ್ತಿದ್ದ ವೇಳೆಯಲ್ಲಿ ತೆಂಕಿಲದಲ್ಲಿ ಮುಂಭಾಗದಿಂದ ಆಗಮಿಸುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಅವರು […]

ದ್ವಿಚಕ್ರ ವಾಹನಗಳ ಢಿಕ್ಕಿ ; ಸವಾರಿಬ್ಬರು ಮೃತ್ಯು

Wednesday, January 15th, 2020
Mani Accident

ಬಂಟ್ವಾಳ: ದ್ವಿಚಕ್ರ ವಾಹನಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಮೃತಪಟ್ಟು, ಸಹಸವಾರೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಕಲ್ಲಡ್ಕ ಶಾಲಾಬಳಿ ನಿವಾಸಿ ಕರೀಂ ಎಂಬವರ ಪುತ್ರ ಮುಹಮ್ಮದ್ ಅಜ್ಮಲ್(19), ಮಾಣಿ ಬರೆನೆಕ್ಕರೆ ನಿವಾಸಿ ಮೋನಪ್ಪ ಪೂಜಾರಿ ಎಂಬವರ ಪುತ್ರ ಪರೀಕ್ಷಿತ್ (19) ಮೃತಪಟ್ಟ ದ್ವಿಚಕ್ರ ವಾಹನ ಸವಾರರಾಗಿದ್ದು, ಸ್ಥಳೀಯ ನಿವಾಸಿ, ಸಹಸವಾರ ಪದ್ಮನಾಭ ಗೌಡ (28) ಎಂಬವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪರೀಕ್ಷಿತ್ ಹಾಗೂ […]

ಬಂಟ್ವಾಳ : ನಿಯಂತ್ರಣ ತಪ್ಪಿದ ಕಾರ್ ಮೈಲುಕಲ್ಲಿಗೆ ಢಿಕ್ಕಿ; ಐವರಿಗೆ ಗಾಯ

Wednesday, December 18th, 2019
Car

ಬಂಟ್ವಾಳ : ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಯ ಮೈಲುಕಲ್ಲಿಗೆ ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ ಮಾಣಿ ಸಮೀಪ ಮಂಗಳವಾರ ತಡರಾತ್ರಿ ನಡೆದಿದೆ. ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ದಿ.ಹಸನಬ್ಬ ಎಂಬವರ ಪುತ್ರರಾದ ಝುಬೈರ್, ಶರೀಫ್, ಸಿರಾಜ್, ವಳವೂರಿನ ಅರಬನಗುಡ್ಡೆಯ ನಿವಾಸಿ, ಹಮೀದ್ ಎಂಬವರ ಪುತ್ರರಾದ ಮುಸ್ತಫಾ, ಆಸಿಫ್ ಗಾಯಗೊಂಡವರು ಎಂದು ತಿಳಿದುಬಂದಿದೆ. ಇವರೆಲ್ಲರು ಎಸ್ಕೆಎಸ್ಸೆಸ್ಸೆಫ್ ತಲಪಾಡಿ ಘಟಕದ ಕಾರ್ಯಕರ್ತರಾಗಿದ್ದು, ಸಮಸ್ತ ಸಮ್ಮೇಳನಕ್ಕೆಂದು ತಮ್ಮ ಕಾರಿನಲ್ಲಿ ಮಂಗಳವಾರ ಮಡಿಕೇರಿಗೆ ತೆರಳಿದ್ದರು. ಕಾರ್ಯಕ್ರಮ […]

ಮಾಣಿ : ರಸ್ತೆಯ ಹೊಂಡಕ್ಕೆ ಖಾಸಗಿ ಬಸ್; ಸಂಚಾರಕ್ಕೆ ಅಡಚಣೆ

Saturday, September 14th, 2019
maani

ವಿಟ್ಲ : ಬೆಂಗಳೂರು ಕಡೆಯಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ರಸ್ತೆ ಹೊಂಡಕ್ಕೆ ಸಿಕ್ಕಿಹಾಕಿಕೊಂಡ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ಮಾಣಿ ಸಮೀಪದ ಬೊಳ್ಳುಕಲ್ಲು ಎಂಬಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದೆ. ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಹೊಂಡಗಳು ನಿರ್ಮಾಣಗೊಂಡಿದ್ದು, ಬೆಳಗ್ಗೆ ಹೊಂಡದಲ್ಲಿ ಬಸ್ ಸಿಲುಕಿದೆ. ಇದರಿಂದ ಘನ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ 2 ತಾಸುಗಳ ವರೆಗೆ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಸುತ್ತಮುತ್ತಲಿನ ಪ್ರಯಾಣಿಕರು ರಸ್ತೆಯಲ್ಲಿ ಕಾಲಕಳೆಯುವಂತಾಯಿತು. ಬಳಿಕ ಉಪ್ಪಿನಂಗಡಿಯಿಂದ ಕ್ರೇನ್ ತರಿಸಿ ಬಸ್ಸನ್ನು […]