ದಲಿತ ಸಂಘಟನೆಗಳಿಂದ ಮಡಿಕೇರಿಯಲ್ಲಿ ಬೃಹತ್ ಮಾನವ ಸರಪಳಿ

Tuesday, November 26th, 2019
dss

ಮಡಿಕೇರಿ : ಸಮಾನತೆಯ ಸಮಾಜ ನಿರ್ಮಾಣಕ್ಕೆ ಭದ್ರ ಬುನಾದಿಯಾಗಿರುವ ಸಂವಿಧಾನದ ಆಶಯಗಳನ್ನು ಹಾಳುಗೆಡಹಲು ನಿರಂತರ ಷಡ್ಯಂತ್ರಗಳು ನಡೆಯುತ್ತಿದೆ ಎಂದು ಆರೋಪಿಸಿ ಸಂವಿಧಾನ ರಕ್ಷಣಾ ಹೋರಾಟ ಸಮಿತಿಯ ನೇತೃತ್ವದಲ್ಲಿ ವಿವಿಧ ದಲಿತ ಸಂಘಟನೆಗಳು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದವು. ನಗರದ ಜ.ತಿಮ್ಮಯ್ಯ ವೃತ್ತದಲ್ಲಿ ’ಮಾನವ ಸರಪಳಿ’ ನಿರ್ಮಿಸಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ನಗರದ ಫೀ.ಮಾ.ಕಾರ್ಯಪ್ಪ ವೃತ್ತದಿಂದ ಜಿಲ್ಲಾಡಳಿತ ಭವನದವರೆಗೆ ದಲಿತ ಸಂಘಟನೆಗಳ ಕಾರ್ಯಕರ್ತರು ಘೋಷಣೆಗಳ ಸಹಿತ ಪ್ರತಿಭಟನಾ ಮೆರವಣಿಗೆ ನಡೆಸಿದರು. ಸಂವಿಧಾನ ರಕ್ಷಣಾ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ […]

ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೂಡಲೇ ಉಪನ್ಯಾಸಕರ ನೇಮಕಾತಿ ಮಾಡುವಂತೆ ಆಗ್ರಹಿಸಿ ಎಬಿವಿಪಿಯಿಂದ ನಗರ ಜ್ಯೋತಿವೃತ್ತದಲ್ಲಿ ಮಾನವ ಸರಪಳಿ

Tuesday, June 25th, 2013
abvp protest

ಮಂಗಳೂರು : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಶಾಖೆಯ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳಿಗೆ ಉಪನ್ಯಾಸಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ನಗರದ ಜ್ಯೋತಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ ಮೂಲಕ ಪ್ರತಿಭಟಿಸಲಾಯಿತು. ನಂತರ ಜ್ಯೋತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಲ್ಮಠ ಸರ್ಕಾರಿ ಕಾಲೇಜಿನ ಅಧ್ಯಕ್ಷೆ ಕು. ರಕ್ಷಿತಾ, ಕು. ದಿವ್ಯಾ, ಕು. ವಿನುತಾ ಮಾತನಾಡಿ ಮಂಗಳೂರು ವಿಶ್ವವಿದ್ಯಾಲಯವು ರಾಜ್ಯದಲ್ಲಿಯೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಫಲಿತಾಂಶ […]

ಭ್ರಷ್ಟಾಚಾರದ ವಿರುದ್ದ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

Saturday, August 27th, 2011
ABVP-protst/ ಎ.ಬಿ.ವಿ.ಪಿ ಪ್ರತಿಭಟನೆ

ಮಂಗಳೂರು : ನಗರದ ಕೆ.ಪಿ.ಟಿ. ಬಳಿ ರಾಷ್ಟ್ರೀಯ ಹೆದ್ದಾರಿ 66 ರ ಬಸವೇಶ್ವರ ವೃತ್ತದಲ್ಲಿ ಮತ್ತು ಹಂಪನಕಟ್ಟೆ ಸಿಗ್ನಲ್‌ ವೃತ್ತದಲ್ಲಿ ಅಣ್ಣಾ ಹಜಾರೆ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಹಾಗೂ ಜನ ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಎ.ಬಿ.ವಿ.ಪಿ. ಕಾರ್ಯಕರ್ತರು ಮಾನವ ಸರಪಳಿ ರಚಿಸಿ ರಸ್ತೆ ತಡೆ ಮತ್ತು ಪ್ರತಿಭಟನೆ ನಡೆಸಿದರು. ಬಸವೇಶ್ವರ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎ.ಬಿ.ವಿ.ಪಿ. ಮಂಗಳೂರು ನಗರ ಸಂಘಟನಾ ಕಾರ್ಯದರ್ಶಿ ವಿನಯ್‌ ಮತ್ತು ಮಿಥೇಶ್‌ ನೇತೃತ್ವ ವಹಿಸಿದ್ದರು. ಹಂಪನಕಟ್ಟೆ ಸಿಗ್ನಲ್‌ ವೃತ್ತದಲ್ಲಿ ಎ.ಬಿ.ವಿ.ಪಿ. ದ.ಕ. […]