ಉಳ್ಳಾಲದ ಕೊಡಿ ಎಂಬಲ್ಲಿ ಮೀನುಗಾರಿಕಾ ದೋಣಿ ಅಫಘಾತ, 10 ಮಂದಿ ರಕ್ಷಣೆ

Sunday, May 23rd, 2021
Fishing Boat

ಮಂಗಳೂರು : ಉಳ್ಳಾಲ ಕೋಟೆಪುರ ದ ವ್ಯಕ್ತಿಯೊಬ್ಬರಿಗೆ ಸೇರಿದ ಮೀನುಗಾರಿಕಾ ದೋಣಿಯೊಂದು  ಉಳ್ಳಾಲದ  ಕೊಡಿ ಎಂಬಲ್ಲಿ ಅಪಘಾತಕ್ಕೀಡಾಗಿದ್ದು, ದೋಣಿಯಲ್ಲಿದ್ದ 10 ಮಂದಿಯನ್ನು ರಕ್ಷಿಸಲಾಗಿದೆ. ಬೊಟ್ ಶನಿವಾರ ತಡರಾತ್ರಿ ಮಂಗಳೂರಿನ ಧಕ್ಕೆಯಿಂದ ಆಳಸಮುದ್ರ ಮೀನುಗಾರಿಕೆಗೆ ಹೊರಟಿದ್ದು ಮೇ 23ರ ರವಿವಾರ ಮುಂಜಾನೆ ಇಲ್ಲಿನ ಕೋಡಿಯಲ್ಲಿ ಮೀನುಗಾರಿಕಾ ದೋಣಿ ಅಪಘಾತಕ್ಕೀಡಾಗಿದೆ. ಉಳ್ಳಾಲ ಮೂಲದ ಅಶ್ರಫ್‌‌ ಅವರಿಗೆ ಸೇರಿದ್ದ ಅಜಾನ್‌ ಎಂಬ ಮೀನುಗಾರಿಕಾ ದೋಣಿ ರವಿವಾರ ಮುಂಜಾನೆ 1.30ರ ವೇಳೆಗೆ ದಡದಿಂದ ಹೊರಟಿತ್ತು. ಕನ್ಯಾಕುಮಾರಿಯ ಐವರು ಮೀನುಗಾರರು ಮದ್ಯದ ಅಮಲಿನಲ್ಲಿದ್ದರು ಎಂದು ತಿಳಿದುಬಂದಿದೆ. ದೋಣಿ ನಡೆಸಲು […]

ಮೂವರು ಮೀನುಗಾರರನ್ನು ರಕ್ಷಿಸಿದ ಭಾರತೀಯ ಕರಾವಳಿ ಕಾವಲು ಪಡೆ

Saturday, May 15th, 2021
Cost Guard

ಮಂಗಳೂರು : ಕೇರಳದ ಕಣ್ಣೂರಿನಿಂದ ಸುಮಾರು 10 ನಾಟಿಕಲ್ ದೂರದಲ್ಲಿ‌ ಮೀನುಗಾರಿಕಾ ದೋಣಿಯೊಂದು ಸಿಲುಕಿದ ಪರಿಣಾಮ ಅಪಾಯದಲ್ಲಿ ಸಿಲುಕಿದ್ದ ಮೂವರು ಮೀನುಗಾರರನ್ನು ಭಾರತೀಯ ಕರಾವಳಿ ಕಾವಲು ಪಡೆ ತಂಡ ರಕ್ಷಿಸಿದೆ. ಎಂಜಿನ್‌ ಸಮಸ್ಯೆಯ ಕಾರಣದಿಂದ ಸಮುದ್ರದಲ್ಲಿ ಮೀನುಗಾರಿಕಾ ದೋಣಿಯ ಯಂತ್ರ ಕೆಟ್ಟು ಹೋಗಿ ನಿಂತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಕರಾವಳಿ ಕಾವಲು ಪಡೆ ಸಿಬ್ಬಂದಿಗಳು ವಿಕ್ರಮ್‌ ನೌಕೆ ಮೂಲಕ ಕಾರ್ಯಾಚರಣೆ ನಡೆಸಿ ಮೂವರು ಕೇರಳ ಮೀನುಗಾರರನ್ನು ರಕ್ಷಿಸಿದೆ. ಮೀನುಗಾರರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. […]

ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

Friday, September 16th, 2011
ಮೀನುಗಾರಿಕಾ ದೋಣಿ ಮುಳುಗಿ 6 ಮಂದಿ ಮೀನುಗಾರರು ನಾಪತ್ತೆ

ಮಂಗಳೂರು: ಮೀನುಗಾರಿಕಾ ದೋಣಿಯೊಂದು ಮುಳುಗಡೆಯಾಗಿ 6 ಮಂದಿ ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ಅರಬಿ ಸಮುದ್ರದಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ. ‘ಓಶಿಯನ್‌ ಫಿಶರೀಸ್‌- 2’ ಎಂಬ ಮೀನುಗಾರಿಕಾ ದೋಣಿಯಲ್ಲಿ 8 ದಿನಗಳ ಹಿಂದೆ 7 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಮೀನು ಹಿಡಿದು ಹಿಂದಿರುಗುತ್ತಿದ್ದಾಗ ಮಂಗಳೂರಿನ ಅಳಿವೆ ಬಾಗಿಲಿನ ಸಮೀಪ ದುರ್ಘ‌ಟನೆ ಸಂಭವಿಸಿದೆ. ದೋಣಿಯಲ್ಲಿದ್ದ ೭ಜನರ ಪೈಕಿ ದೋಣಿಯ ಚಾಲಕ ಬಳ್ಳಾರಿ ಹೊಸಪೇಟೆಯ ಕಾಂಬ್ಲಿಪುರ ಕಂಟರ್‌ಬಿನ್ನೆಯ ಶ್ರೀಕಾಂತ್‌, ಕೊಪ್ಪಳದ ನಾರಾಯಣ, ಮಂಗಳೂರು ಪಂಜಿಮೊಗರಿನ […]