ಕೊರಗರು ತಮ್ಮ ಕೀಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಯಲ್ಲಿ ತೊಡಗಿಸಿಕೊಳ್ಳಬೇಕು : ಸಚಿವ ಎಸ್.ಅಂಗಾರ

Sunday, September 12th, 2021
Angara

ಪುತ್ತೂರು  : ಸರಕಾರದ ಸೌಲ್ಯಭ್ಯಗಳಿಂದ ಇಂದಿಗೂ ವಂಚಿತರಾಗಿರುವ ಕೊರಗ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದ್ದು, ಈ ಕುರಿತು ಆಯಾಯ ತಾಲೂಕುಗಳಲ್ಲೇ ಸಮಸ್ಯೆಗಳ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಬಂದರು, ಮೀನುಗಾರಿಕೆ, ಒಳನಾಡು ಮತ್ತು ಜಲಸಾರಿಗೆ ಸಚಿವ ಎಸ್.ಅಂಗಾರ ಮಾಹಿತಿ ನೀಡಿದರು. ಪುತ್ತೂರಿನಲ್ಲಿ ನಡೆದ ಕೊರಗ ಸಮುದಾಯದ ಮುಖಂಡರ ಜೊತೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಸಚಿವರು ಈ ಮಾಹಿತಿ ನೀಡಿದರು. ಕೊರಗ ಸಮುದಾಯಗಳು ಜಮೀನು ಹಕ್ಕು ಪತ್ರ, […]

ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವರ ಸೂಚನೆ ತಪ್ಪಿದ್ದಲ್ಲೀ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ

Monday, September 6th, 2021
Angara

ಮಂಗಳೂರು :  ಕೋವಿಡ್-19 ಸೋಂಕು ಹೆಚ್ಚು ಕಂಡುಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ತಿಳಿಸಿದರು. ಸೆ. 6ರ ಸೋಮವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈಗಾಗಲೇ ಜಾರಿಯಲ್ಲಿರುವ ನಿರ್ಬಂಧಗಳ ಕುರಿತು ಚರ್ಚಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ […]

ಸಮುದ್ರದ ನೀರು, ಸಿಹಿ ನೀರಾಗಿಸುವ ಯಂತ್ರ ಅತ್ಯಂತ ಉಪಯುಕ್ತ: ಎಸ್. ಅಂಗಾರ

Friday, September 3rd, 2021
S Angara

ಮಂಗಳೂರು : ಸಮುದ್ರದಲ್ಲಿ ಆಳ ಹಾಗೂ ಒಳ ಮೀನುಗಾರಿಕೆ ಮಾಡುವ ಮೀನುಗಾರರಿಗೆ ಸಮುದ್ರದಲ್ಲಿಯೇ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸಿಕೊಡುವ ಯಂತ್ರವು ಅತ್ಯಂತ ಉಪಯುಕ್ತವಾಗಿದೆ ಹಾಗೂ ಈ ಯತ್ನ ಯಶಸ್ವಿಯಾಗಿದೆ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಬಣ್ಣಿಸಿದರು. ಅವರು ಸೆ.3ರ ಶುಕ್ರವಾರ ಸಮುದ್ರದ ಹಳೆ ಬಂದರು ಮಾರ್ಗದ ಮೂಲಕ ಬೆಂಗರೆಗೆ ತೆರಳುವ ಸಂದರ್ಭದಲ್ಲಿ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಯಂತ್ರದ ಪ್ರಾತ್ಯಕ್ಷಿಕೆ ವೀಕ್ಷಿಸಿ ಮಾತನಾಡಿದರು. ಆಸ್ಟ್ರೇಲಿಯಾ […]

ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ

Thursday, August 12th, 2021
Bommai Mangaluru

ಮಂಗಳೂರು :- ಜಿಲ್ಲೆಯಲ್ಲಿನ ಕೋವಿಡ್-19 ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.12 ಹಾಗೂ 13 ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಆ.12 ರ ಗುರುವಾರ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.  ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ […]

ಮಂಗಳೂರು ಬೋಟ್ ದುರಂತ : ಮೂವರು ಸಾವು, ಒಂಬತ್ತು ಮಂದಿ ನಾಪತ್ತೆ

Tuesday, April 13th, 2021
ship

ಮಂಗಳೂರು: ಸೋಮವಾರ ತಡರಾತ್ರಿ ಸಂಭವಿಸಿದ ಬೋಟ್ ದುರಂತದಲ್ಲಿ ಮೃತಪಟ್ಟ ಮೂವರು ಮೀನುಗಾರರ ಮೃತದೇಹವನ್ನು ಕೋಸ್ಟ್ ಗಾರ್ಡ್ ಸಿಬ್ಬಂದಿ ವರ್ಗ ಮಂಗಳವಾರ ಪತ್ತೆ ಹಚ್ಚಿದ್ದು,  ಮಾಣಕ್ಯದಾಸ್ ಮತ್ತು ಅಲೆಗ್ಸಾಂಡರ್ ಎಂಬವರ ಗುರುತು ಹಿಡಿಯಲಾಗಿದ್ದು, ಇನ್ನೊಬ್ಬರ ಹೆಸರು ತಿಳಿದು ಬಂದಿಲ್ಲ. ಸುರತ್ಕಲ್ ಲೈಟ್ ಹೌಸ್‌ನಿಂದ 42 ನಾಟಿಕಲ್ ಮೈಲ್ ದೂರದ ಸಮುದ್ರದಲ್ಲಿ ಈ ದುರ್ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಇತರ ಒಂಭತ್ತು ಮಂದಿ ಕಾಣೆಯಾಗಿದ್ದಾರೆ. ಅವರಿಗಾಗಿ ಕೋಸ್ಟ್‌ಗಾರ್ಡ್‌ನವರು ಶೋಧಕಾರ್ಯ ಮುಂದುವರಿಸಿದ್ದಾರೆ. ರಕ್ಷಿಸಲ್ಪಟ್ಟ ಇಬ್ಬರು ಮತ್ತು ಮೂವರ ಮೃತದೇಹವನ್ನು ಕಡಲ ಕಿನಾರೆಗೆ ತಂದು […]

ಸಮುದ್ರದಲ್ಲಿ ಸಿಡಿಲು ಬಡಿದು ವ್ಯಕ್ತಿ ಸಾವು, ಜೊತೆಗಿದ್ದವರು ಅಪಾಯದಿಂದ ಪಾರು

Tuesday, April 13th, 2021
baburaj

ಕಾಸರಗೋಡು : ಮೀನುಗಾರಿಕೆಗೆ ತೆರೆಳಿದ್ದ ವ್ಯಕ್ತಿಯೊಬ್ಬರು ಸಿಡಿಲು ಬಡಿದು ಮೃತಪಟ್ಟ ದಾರುಣ ಘಟನೆ ಏ.13ರ ಮಂಗಳವಾರ ಮುಂಜಾನೆ ಕಾಸರಗೋಡು ಸಮುದ್ರದಲ್ಲಿ ನಡೆದಿದೆ. ಮೃತಪಟ್ಟವರನ್ನು ಅಡ್ಕತ್ತಬೈಲ್ ಶ್ರೀ ಕುರುಂಭಾ ಕ್ಷೇತ್ರ ಸಮೀಪದ ಬಾಬು ರಾಜ್ ( 40) ಎಂದು ಗುರುತಿಸಲಾಗಿದೆ. ಬಾಬು ರಾಜ್ , ಕೃಷ್ಣ , ಸುಜಿ ಮತ್ತು ಬಾಬು ಎಂಬವರು ಭಾಗ್ಯಲಕ್ಷ್ಮಿ ಎಂಬ ಬೋಟ್ ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಮುಂಜಾನೆ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಬೋಟು ಆಳಿವೆ ಬಾಗಿಲು ತಲಪುತ್ತಿದ್ದಂತೆ ಭಾರೀ ಗಾಳಿ , […]

ಎರಡು ದಿನದ ನವಜಾತ ಶಿಶುವನ್ನು ಫಲ್ಗುಣಿ ನದಿಗೆ ಎಸೆದ ಪಾಪಿಗಳು

Sunday, January 3rd, 2021
Palguni River

ಮಂಗಳೂರು : ಎರಡು ದಿನದ ನವಜಾತ ಶಿಶುವಿನ ಮೃತದೇಹವು ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯ ತೋಟಬೆಂಗ್ರೆಯ ಫಲ್ಗುಣಿ ನದಿಯಲ್ಲಿ ಶನಿವಾರದಂದು ತೇಲುತ್ತಿರುವುದು ಕಂಡು ಬಂದಿದೆ. ಮೀನುಗಾರಿಕೆ ನಡೆಸಿ ಫಲ್ಗುಣಿ ನದಿಯ ದಂಡಕ್ಕೆ ಮರಳುವ ಸಂದರ್ಭದಲ್ಲಿ ನವಜಾತ ಶಿಶುವಿನ ಮೃತದೇಹ ತೇಲುತ್ತಿರುವುದು ಪತ್ತೆಯಾಗಿದೆ. ದೋಣಿಯಲ್ಲಿದ್ದ ಫೈಜಲ್ ಮತ್ತು ರಹೀಮ್ ನವಜಾತ ಶಿಶುವಿನ ಮೃತದೇಹ ನೀರಿನ ಮೇಲೆ ತೇಲುತ್ತಿರುವುದನ್ನು ಗಮನಿಸಿದ್ದು ತಕ್ಷಣ, ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ನವಜಾತ ಶಿಶುವು ಹೆಣ್ಣಾಗಿದ್ದು ಒಂದು ಅಥವಾ ಎರಡು ದಿನದ್ದಾಗಿದೆ ಎಂದು ಅಂದಾಜಿಸಲಾಗಿದೆ. ಜೀವಂತ  ಮಗುವನ್ನು ಅಥವಾ […]

ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೋಟ್‌ ಮುಳುಗಡೆ, ಆರು ಮಂದಿ ನಾಪತ್ತೆ

Tuesday, December 1st, 2020
fishing Boat

ಮಂಗಳೂರು : ಮೀನುಗಾರಿಕೆಗೆ ತೆರಳಿದ್ದ ಪರ್ಸಿನ್ ಬೃಹತ್ ಬೋಟ್‌ವೊಂದು ಕಡಲಲ್ಲಿ ಮುಳುಗಡೆಯಾಗಿದ್ದು, ಆರು ಮಂದಿ ನಾಪತ್ತೆಯಾದ ಘಟನೆ ಉಳ್ಳಾಲದ ಪಶ್ಚಿಮ ಭಾಗದಿಂದ ಕೆಲವೇ  ನಾಟಿಕಲ್‌ ಮೈಲಿ ದೂರದಲ್ಲಿ ನಡೆದಿದೆ. ಬೋಳಾರದ ಪ್ರಶಾಂತ ಎಂಬವರ ಮಾಲಕತ್ವದ “ಶ್ರೀರಕ್ಷಾ” ಹೆಸರಿನ ಬೋಟು ಸೋಮವಾರ ನಸುಕಿನಜಾವ ಮೀನುಗಾರಿಕೆಗೆ ತೆರಳಿತ್ತು.‌ ಬೋಟ್‌ನಲ್ಲಿ 25 ಮಂದಿ ಮೀನುಗಾರರು ತೆರಳಿದ್ದರು. ಕಡಲಲ್ಲಿ‌ ಭಾರೀ ಪ್ರಮಾಣದ ಮೀನು ಸಿಕ್ಕಿದ್ದು, ಸಂಜೆ 6:30ರ ಸುಮಾರಿಗೆ ಬಲೆಯನ್ನು ಮೇಲೆ‌‌ ಎಳೆಯುವಾಗ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೋಟ್ ನಲ್ಲಿ ಉಳ್ಳಾಲ, ಮಂಗಳೂರು […]

ಮಲ್ಪೆ ಬಂದರಿನಲ್ಲಿ ತಮಿಳುನಾಡಿನ ಬೋಟುಗಳಲ್ಲಿ ಅಕ್ರಮ ಮೀನುಗಾರಿಕೆ, 10 ಮಂದಿ ವಶ

Thursday, October 22nd, 2020
Tamil Boat

ಮಲ್ಪೆ :  ಅಕ್ರಮ ಲೈಟ್ ಫಿಶಿಂಗ್ ಹಾಗೂ ಚೌರಿ ಹಾಕಿ ಮೀನು ಹಿಡಿಯುತಿದ್ದ ತಮಿಳುನಾಡಿನ ಬೋಟುಗಳಲ್ಲಿ ಒಂದನ್ನು ಮಲ್ಪೆ ಬಂದರಿನಿಂದ ಕೇವಲ 10 ನಾಟಿಕಲ್ ಮೈಲು ದೂರದಲ್ಲಿ ವಶಕ್ಕೆ ಪಡೆದ ಮಲ್ಪೆ ಮೀನುಗಾರರ ತಂಡ  ಬೋಟಿನಲ್ಲಿದ್ದ 10 ಮಂದಿ ಸಿಬ್ಬಂದಿಗಳೊಂದಿಗೆ ಮಲ್ಪೆ ಬಂದರಿಗೆ ತಂದಿದ್ದಾರೆ. ಶಾನ್ ಮಾಲಕತ್ವದ ‘ಮಕರ ಸಂಕ್ರಾಂತಿ’ ಪರ್ಸೀನ್ ಬೋಟು ಬುಧವಾರ ಮೀನುಗಾರಿಕೆಗೆಂದು ಸಮುದ್ರಕ್ಕೆ ತೆರಳಿದ್ದು,  ಗುರುವಾರ  ಬೆಳಗಿನಜಾವ ಸುಮಾರು 10 ನಾಟಿಕಲ್ ಮೈಲು ದೂರದಲ್ಲಿ ತಮಿಳುನಾಡಿಗೆ ಸೇರಿದ್ದೆನ್ನಲಾದ ಬೃಹತ್ ಗಾತ್ರದ ‘ಇಂಡಿಯನ್’ ಹೆಸರಿನ ಬೋಟು ಲೈಟ್ […]

ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೃತ್ಯು

Sunday, August 16th, 2020
boat

ಕುಂದಾಪುರ : ಮೀನುಗಾರಿಕೆಗೆ ತೆರಳಿದ್ದ ನಾಡದೋಣಿಯೊಂದು ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಪರಿಣಾಮ ನಾಲ್ವರು ಮೀನುಗಾರರು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಕೊಡೇರಿ ಎಂಬಲ್ಲಿ ರವಿವಾರ ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ. ಬೆಳಗ್ಗೆ 10.30ರ ಸುಮಾರಿಗೆ ಸಾಗರಶ್ರೀ ಎಂಬ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ಸಮುದ್ರದ ದೈತ್ಯ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮಗುಚಿ ಬಿತ್ತೆನ್ನಲಾಗಿದೆ. ಇದರಿಂದ ನಾಗರಾಜ್ ಖಾರ್ವಿ, ಲಕ್ಷ್ಮಣ್ ಖಾರ್ವಿ, ಶೇಖರ್, ಮಂಜುನಾಥ್ ನೀರಿನಲ್ಲಿ ಮುಳುಗಿ ಮೃತಪಟ್ಟರೆಂದು ತಿಳಿದುಬಂದಿದೆ.  ಒಟ್ಟು 9 ಮಂದಿ ಮೀನುಗಾರರು ತೆರಳಿದ್ದರು. […]