ಜಿಲ್ಲಾ ಉಸ್ತುವಾರಿ ಸಚಿವರಿಂದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಟರ್ಪಾಲ್ ಗಳ ವಿತರಣೆ

Saturday, July 3rd, 2021
Shillekyata

ಮಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಅವರು ಜು.3ರ ಶನಿವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ 20 ಶಿಳ್ಳೆಕ್ಯಾತ ಸಮುದಾಯದ ಕುಟುಂಬಗಳಿಗೆ ಟರ್ಪಾಲ್ ಗಳನ್ನು  ವಿತರಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ ತೌಖ್ಯ ಚಂಡಮಾರುತದ ಪ್ರಭಾವದಿಂದಾಗಿ ಅಲೆಮಾರಿ ಶಿಳ್ಳಕ್ಯಾತ ಕುಟುಂಬದ ಗುಡಿಸಲುಗಳ ಟರ್ಪಾಲ್ ಗಳು ತೀವ್ರವಾಗಿ ಹಾನಿಯಾಗಿದ್ದವು. ಜಿಲ್ಲೆಯಲ್ಲಿ ಮುಂಗಾರು ಮಳೆಯೂ ಪ್ರಾರಂಭವಾಗಿರುವ ಹಿನ್ನಲೆಯಲ್ಲಿ ಈ ಸಮುದಾಯದವರಿಗೆ 20*30 […]

ಜೂನ್ 28 ರಿಂದ ವಿಶ್ವ ಪ್ರಸಿದ್ಧ ಜೋಗ ಜಲಪಾತ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Sunday, June 27th, 2021
Jog falls

ಶಿವಮೊಗ್ಗ: ಕಳೆದ ಎರಡು ತಿಂಗಳಿನಿಂದ ಮುಚ್ಚಲಾಗಿದ್ದ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ಪ್ರಸಿದ್ಧ ಜೋಗ ಜಲಪಾತ ಸೋಮವಾರದಿಂದ ಮತ್ತೆ ಪ್ರವಾಸಿಗರ ವೀಕ್ಷಣೆಗೆ ಮುಕ್ತವಾಗಲಿದೆ. ಕಳೆದ ಒಂದು ವಾರದಿಂದ ಮಲೆನಾಡು ಪ್ರದೇಶಗಳಲ್ಲಿ ಸುರಿಯುತ್ತಿರುವ ಮುಂಗಾರು ಮಳೆಯು ಜೋಗ ಜಲಪಾತದ ಸೊಬಗು ಹೆಚ್ಚಿಸಿದೆ. ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರವಾಸಿಗರು ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಸ್ಯಾನಿಟೈಸರ್‌ ಬಳಸುವುದು ಕಡ್ಡಾಯವಾಗಿದೆ. ಲಾಕ್‌ಡೌನ್‌ ಕಾರಣದಿಂದಾಗಿ ಪ್ರವಾಸಿಗರಿಲ್ಲದೇ ಸ್ಥಳೀಯ ವ್ಯಾಪಾರ, ವಹಿವಾಟು ಕುಂಠಿತಗೊಂಡಿತ್ತು. ಇದೀಗ […]

ಕರಾವಳಿಯಲ್ಲಿ ಕ್ಯಾರ್ ಚಂಡಮಾರುತ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ

Saturday, October 26th, 2019
chandamaarutha

ಮಂಗಳೂರು : ಕ್ಯಾರ್ ಚಂಡಮಾರುತ ಪರಿಣಾಮ, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡು ತೀರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿದೆ. ಇನ್ನೊಂದೆಡೆ ಶುಕ್ರವಾರ ದಿನವಿಡೀ ಸುರಿದ ಭಾರಿ ಗಾಳಿ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗಿದ್ದ ವಾಯುಭಾರ ಕುಸಿತ ಶುಕ್ರವಾರ ಮುಂಜಾನೆ 5.30ರ ವೇಳೆಗೆ ಚಂಡಮಾರುತವಾಗಿ ಪರಿತರ್ವನೆಗೊಂಡು ಉತ್ತರಕ್ಕೆ ಸಂಚರಿಸಿದೆ. ಮಧ್ಯಾಹ್ನ 2.30ರ ವೇಳೆಗೆ 16.2ಡಿಗ್ರಿ ಉತ್ತರ ಅಕ್ಷಾಂಶ ಮತ್ತು 71.7ಡಿಗ್ರಿ ಪೂರ್ವ ರೇಖಾಂಶದಲ್ಲಿ ಪೂರ್ವ ಮಧ್ಯ ಸಮುದ್ರಲ್ಲಿ ಕೇಂದೀಕೃತವಾಗಿತ್ತು. ಪ್ರಸ್ತತ ಒಮಾನ್ ತೀರದಿಂದ 1880 ಕಿ.ಮೀ.ದೂರದಲ್ಲಿದ್ದು, ಪ್ರತಿ […]

ಜೀ ಕನ್ನಡದ ಹೊಸ ಧಾರಾವಾಹಿ ‘ಗೃಹಲಕ್ಷ್ಮಿ’

Tuesday, June 2nd, 2015
Gruhalaxmi serial

ಮಂಗಳೂರು : ಜೀ ಕನ್ನಡ ವಾಹಿನಿಯನ್ನು ಕನ್ನಡ ಕಿರುತೆರೆಯಲ್ಲಿ ವಿಭಿನ್ನವಾಗಿಸುವ ಪ್ರಯತ್ನ ನಮ್ಮದಾಗಿದ್ದು ಈ ನಿಟ್ಟಿನಲ್ಲಿ ಹೊಸ ಹೊಸ ಪ್ರಯೋಗಗಳಿಗೆ ತೆರೆದುಕೊಳ್ಳುತ್ತಿದ್ದೇವೆ. ಈ ಹೊಸ ಅಲೆಯಲ್ಲಿ ಪ್ರಾರಂಭವಾದ ‘ಶ್ರೀರಸ್ತು ಶುಭಮಸ್ತು’, ‘ಜೊತೆಜೊತೆಯಲಿ’, ಶುಭವಿವಾಹ, ‘ಲವ್‌ಲವಿಕೆ’, Mr. & Mrs ರಂಗೇಗೌಡ’ ಮತ್ತು ‘ಒಂದೂರ್‍ನಲ್ಲಿ ರಾಜರಾಣಿ’ ಧಾರಾವಾಹಿಗಳಿಗೆ ನಮ್ಮ ನಿರೀಕ್ಷೆಯನ್ನೂ ಮೀರಿದ ಮೆಚ್ಚುಗೆ ವ್ಯಕ್ತವಾಗಿದೆ. ಈಗ ಇದೇ ಜೂನ್ 8 ರಿಂದ ಸಂಜೆ 6:30 ಕ್ಕೆ ‘ಗೃಹಲಕ್ಷ್ಮಿ’ ಹೆಸರಿನ ಮತ್ತೊಂದು ಧಾರಾವಾಹಿಯನ್ನು ಪ್ರಿಯ ವೀಕ್ಷಕರ ಮುಂದಿಡುತ್ತಿದ್ದೇವೆ. ‘ಗೃಹಲಕ್ಷ್ಮಿ’-ಇದು ತುಂಬ […]

ಮುಂಗಾರು ಮಳೆಯಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪಕ್ಕೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ

Thursday, May 23rd, 2013
N Prakash

ಮಂಗಳೂರು : ಮುಂಗಾರು ಶೀಘ್ರವೇ ಜಿಲ್ಲೆಗೆ ಕಾಲಿಡಲಿದ್ದು, ಅದಕ್ಕೂ ಮುನ್ನ ಪಾಲಿಕೆ ವ್ಯಾಪ್ತಿಯಲ್ಲಿನ ಚರಂಡಿ ಮತ್ತು ಕಾಲುವೆಗಳನ್ನು ಶುಚಿಗೊಳಿಸಿ ಕೃತಕ ನೆರೆ ಉಂಟಾಗದಂತೆ ಎಚ್ಚರವಹಿಸಿ ಎಂದು ಜಿಲ್ಲಾಧಿಕಾರಿ ಎನ್. ಪ್ರಕಾಶ್ ಹೇಳಿದರು. ಅವರು ಬುಧವಾರ ತಮ್ಮ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಹಾಗು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪಾಲಿಕೆ ಮತ್ತು ತಾಲೂಕು ವ್ಯಾಪ್ತಿಯಲ್ಲಿ, ಮುಂಬರುವ ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪದ ಬಗ್ಗೆ ಮುಂಜಾಗ್ರತೆ ವಹಿಸುವಂತೆ ತಿಳಿಸಿದ ಅವರು ಮೇ 25 ರೊಳಗೆ ಸಹಾಯಕ ಕಮೀಷನರ್ […]

ನೋಡಬಹುದಾದ ”ಮದುವೆ ಮನೆ”

Sunday, November 27th, 2011
Ganesh Shruda Arya

ಬೆಂಗಳೂರು : ನಿರ್ದೇಶಕ ಸುನಿಲ್ ಕುಮಾರ್ ಸಿಂಗ್ ಚೊಚ್ಚಲ ನಿರ್ದೇಶನದಲ್ಲಿಯೇ ಸದಭಿರುಚಿಯ ಉತ್ತಮ ಚಿತ್ರವೊಂದನ್ನು ಪ್ರೆಕ್ಷಕರಿಗೆ ನೀಡಿದ್ದಾರೆ. ಸೋಲಿನ ಸೆರಗಲ್ಲಿ ತೇಲಾಡುತಿದ್ದ ಗಣೇಶ್‌ಗೆ ಇಂತಹ ಚಿತ್ರವೊಂದರ ಅಗತ್ಯವಿತ್ತು. ಕತೆ, ಚಿತ್ರಕತೆ, ಸಂಭಾಷಣೆ, ಸಂಗೀತ, ಛಾಯಾಗ್ರಹಣ ಸೇರಿದಂತೆ ಎಲ್ಲಾ ವಿಭಾಗದಲ್ಲಿಯೂ ಈ ಚಿತ್ರ ಯಶಷ್ವಿಯಾಗಿದೆ. ಚಿತ್ರದ ನಾಯಕಿ ಸುಮಾಳನ್ನು (ಶ್ರದ್ಧಾ ಆರ್ಯ) ಚಿತ್ರದ ನಾಯಕ ಸೂರಜ್ (ಗಣೇಶ್) ಅನಿರೀಕ್ಷಿತ ಸಂದರ್ಭದಲ್ಲಿ ಭೇಟಿಯಾಗುತ್ತಾನೆ. ಸುಮಾಳಿಗೆ ಮದುವೆ ಗೊತ್ತಾಗಿರುತ್ತದೆ. ಮದುವೆಯಾಗುವವನು ಎಸಿಪಿ ದುಷ್ಯಂತ್ (ಚಿರಂತ್). ಆದರೆ ಮದುವೆ ಮನೆಯ ಸಂಭ್ರಮದಲ್ಲಿ ಭಾಗಿಯಾಗಿದ್ದ […]

ಅನಿರೀಕ್ಷಿತ ಮಳೆಗೆ ಜಿಲ್ಲೆಯಲ್ಲಿ ಮನೆಕುಸಿತ, ವಿದ್ಯುತ್ ವತ್ಯಯ

Saturday, September 25th, 2010
ಅತ್ತಾವರದಲ್ಲಿ ಮಳೆಗೆ ಕುಸಿದ ಮನೆ

ಮಂಗಳೂರು : ಮುಂಗಾರು ಮಳೆ ಕಡಿಮೆಯಾಗಿ ಜನರು ಸ್ವಲ್ಪ ಮಟ್ಟಿಗೆ ಓಡಾಟ ಅರಂಭಿಸುತ್ತಿರುವಾಗಲೇ ಮತ್ತೆ ಗುರುವಾರ ರಾತ್ರಿ ಧಾರಾಕಾರ ಮಳೆ ಸುರಿದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಅಪಾರ ನಷ್ಟ, ಹಾನಿ ಸಂಭವಿಸಿದೆ. ಮಂಗಳೂರಿನ ಪಾಂಡೇಶ್ವರದಲ್ಲಿ ರುಕ್ಮಯ ಎಂಬವರ ಮನೆ, ಪಂಪ್ವೆಲ್ ಸಮೀಪ ಒಂದು ಮನೆ ಅರ್ಧದಷ್ಟು ಕುಸಿದಿದೆ, ಬೆಂದೂರುವೆಲ್ ಸಮೀಪ ಆವರಣಗೋಡೆಯೊಂದು ಕುಸಿದು ಬಿದ್ದಿದೆ.  ಅತ್ತಾವರ ಕೆಎಂಸಿ ಆಸ್ಪತ್ರೆ ಎದುರಿನಲ್ಲಿ ಹಳೆಯ ಹಂಚಿನ ಮನೆ ಸಂಪೂರ್ಣ ಕುಸಿದು ಬಿದ್ದಿದೆ. ಸುರತ್ಕಲ್  ಪರಿಸರದಲ್ಲಿ ಹಾನಿಯಾದ ಪ್ರದೇಶಗಳಿಗೆ […]