ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ನೂತನ ಅಧ್ಯಕ್ಷರಾಗಿ ರವಿಶಂಕರ್‌ ಮಿಜಾರು ಅಧಿಕಾರ ಸ್ವೀಕಾರ

Tuesday, June 9th, 2020
Ravishankara Mijar

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದ ನೂತನ ಅಧ್ಯಕ್ಷರಾಗಿ ಕರ್ನಾಟಕ ಸರಕಾರದಿಂದ ನೇಮಕಗೊಂಡಿರುವ ರವಿಶಂಕರ್‌ ಮಿಜಾರು ಅವರು ಸೋಮವಾರ ನಗರದ ಉರ್ವಾ ಸ್ಟೋರ್‌ನಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್‌, ಡಾ| ಭರತ್‌ ಶೆಟ್ಟಿ, ಉಮಾನಾಥ ಕೋಟ್ಯಾನ್‌, ಮಾಜಿ ಸಚಿವ ನಾಗರಾಜ ಶೆಟ್ಟಿ, ಮಾಜಿ ಶಾಸಕ ಎನ್‌. ಯೋಗೀಶ್‌ ಭಟ್‌, ಮೇಯರ್‌ ದಿವಾಕರ ಪಾಂಡೇಶ್ವರ, ಮುಡಾ ಆಯುಕ್ತ ದಿನೇಶ್‌ ಕುಮಾರ್‌, ದ.ಕ. ಜಿಲ್ಲಾ ಬಿಜೆಪಿ […]

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ಆಯ್ಕೆ

Saturday, December 3rd, 2016
Suresh-ballal

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಬಲ್ಲಾಳ್ ನೇಮಕಗೊಂಡಿದ್ದಾರೆ. ಸುರೇಶ್ ಬಲ್ಲಾಳ್ ಪ್ರಸಕ್ತ ಕೆಪಿಸಿಸಿ ಸದಸ್ಯರಾಗಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. ಈ ಹಿಂದೆ ಮಂಗಳೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್, ಸೆನೆಟ್ ಹಾಗೂ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಸುರೇಶ್ ಬಲ್ಲಾಳ್ ಈ ಹಿಂದೆಯೂ ಮುಡಾ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.