ಬಕ್ರೀದ್​​ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಮುತಾಲಿಕ್​ ಮನವಿ

Friday, July 24th, 2020
pramodMuthalik

ಧಾರವಾಡ : ಬಕ್ರೀದ್ ಹಬ್ಬದಂದು ಗೋಹತ್ಯೆ ನಿಲ್ಲಿಸುವಂತೆ ಆಗ್ರಹಿಸಿ ಶ್ರೀರಾಮಸೇನಾ ವತಿಯಿಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರಿಗೆ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್, ಅಕ್ರಮವಾಗಿ ಗೋವುಗಳ ಮಾರಾಟ, ಸಾಗಾಣಿಕೆ ಹಾಗೂ ಅವುಗಳ ಕಳ್ಳತನ ನಡೆಯುತ್ತಿದೆ. ಬಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ಯಥೇಚ್ಛವಾಗಿ ನಡೆಯುತ್ತಿದೆ. ಗೋವುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕಿದೆ, ಸರ್ಕಾರವೂ ಸಹ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿಗಳಿಗೆ ಮನವಿ […]

ಮಂಗಳೂರು ಪಬ್‌ ಅಟ್ಯಾಕ್‌ ಪ್ರಕರಣ: ಮುತಾಲಿಕ್‌ ಸೇರಿ ಎಲ್ಲ ಆರೋಪಿಗಳು ಖುಲಾಸೆ

Tuesday, March 13th, 2018
muthalik

ಮಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದ ಮಂಗಳೂರಿನ ಪಬ್ ದಾಳಿ ಪ್ರಕರಣದ ಆರೋಪಿಗಳನ್ನು ಸಾಕ್ಷ್ಯಾಧಾರದ ಕೊರತೆಯಿಂದ ಖುಲಾಸೆಗೊಳಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 30 ಮಂದಿ ಆರೋಪಿಗಳನ್ನು ಮೂರನೇ ಜೆಎಂಎಫ್‌ಸಿ ನ್ಯಾಯಾಲಯ ಖುಲಾಸೆಗೊಳಿಸಿದೆ. ನಗರದ ಬಲ್ಮಠ ರಸ್ತೆಯಲ್ಲಿರುವ ಅಮ್ನೇಶಿಯಾ ಪಬ್‌ನಲ್ಲಿದ್ದ ಯುವತಿಯರ ಮೇಲೆ 2009ರ, ಜನವರಿ 24ರಂದು ಹಲ್ಲೆ ನಡೆದಿತ್ತು. ಇದು ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂದರು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮ ಸೇನೆಯ ಪ್ರಮುಖರಾದ ಪ್ರಮೋದ್ ಮುತಾಲಿಕ್ ಅವರನ್ನೂ ಬಂಧಿಸಲಾಗಿತ್ತು. ಇದೀಗ […]

ಕಾಂಗ್ರೆಸ್‌-ಬಿಜೆಪಿ ವಿರುದ್ಧ ಮುತಾಲಿಕ್‌ ವಾಗ್ದಾಳಿ

Friday, March 2nd, 2018
muthalik

ಮಂಗಳೂರು: ಬಿಜೆಪಿ, ಕಾಂಗ್ರೆಸ್ ಪಕ್ಷಗಳ ವಿರುದ್ಧ ಕಿಡಿಕಾರಿರುವ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್, ಈ ಎರಡೂ ಪಕ್ಷಗಳು ತುಷ್ಟೀಕರಣದ ಪಕ್ಷಗಳು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮುಸ್ಲಿಂ, ಬಿಜೆಪಿ ಹಿಂದೂ ತುಷ್ಟೀಕರಣದ ಪಕ್ಷ. ಈ ಎರಡೂ ಪಕ್ಷಗಳ ಉದ್ದೇಶ ಒಂದೇ. ಅದು ಅಧಿಕಾರವೇ ವಿನಃ ಜನ ಸಾಮಾನ್ಯರ ಅಭಿವೃದ್ಧಿಯಲ್ಲ. ಲೂಟಿ ಮಾಡಬೇಕೆಂಬುದೇ ಇವರ ಗುರಿ ಎಂದು ಟೀಕಿಸಿದರು. ಬಿಜೆಪಿ ಮಾ. 3ರಿಂದ ಹಮ್ಮಿಕೊಂಡಿರುವ ಜನಸುರಕ್ಷಾ ಯಾತ್ರೆಯನ್ನು ಟೀಕಿಸಿರುವ ಅವರು, ಇದೊಂದು ಡೋಂಗಿ ಯಾತ್ರೆ. ಸಾಧ್ಯವಿದ್ದರೆ ಭಟ್ಕಳದಿಂದ […]

ಬಿಜೆಪಿಯ ‘ಜನಸುರಕ್ಷಾ ಯಾತ್ರೆ’ ಕೇವಲ ಢೋಂಗಿ ರಾಜಕಾರಣ: ಮುತಾಲಿಕ್

Thursday, March 1st, 2018
janasuraksha

ಮಂಗಳೂರು: ಬಿಜೆಪಿ ನಡೆಸಲು ಉದ್ದೇಶಿಸಿರುವ ಜನಸುರಕ್ಷಾ ಯಾತ್ರೆ ಕೇವಲ ಢೋಂಗಿ ರಾಜಕಾರಣ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಗುರುವಾರ ಮಾತನಾಡಿದ ಅವರು ಬಿಜೆಪಿಯವರಿಗೆ ಕಾಳಜಿ ಇದ್ದರೆ ಭಟ್ಕಳದಿಂದ ಯಾತ್ರೆ ಆರಂಭಿಸಲಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ಭಟ್ಕಳ ಬಿಜೆಪಿ ಶಾಸಕ ಚಿತ್ತರಂಜನ್ ಕೊಲೆ ಪ್ರಕರಣದಲ್ಲಿ ಈವರೆಗೆ ಆರೋಪಿಗಳ ಪತ್ತೆಯಾಗಿಲ್ಲ. 1997ರಲ್ಲಿ ಭಟ್ಕಳದ 21 ಜನರ ಕೊಲೆ ಪ್ರಕರಣವನ್ನು ಈವರೆಗೂ ಭೇದಿಸಲು ಸಾಧ್ಯವಾಗಿಲ್ಲ. ಭಟ್ಕಳ ತಾಲೂಕು ಬಿಜೆಪಿ ಅಧ್ಯಕ್ಷರಾಗಿದ್ದ ತಿಮ್ಮಪ್ಪ […]

ಕೃಷ್ಣಮಠದ ಆವರಣದಲ್ಲಿ ಮುಸ್ಲಿಮರಿಗೆ ನಮಾಝ್ ಸಲ್ಲಿಸಲು ಅವಕಾಶ ನೀಡಿದ್ದು ಸರಿಯಲ್ಲ : ಮುತಾಲಿಕ್

Monday, June 26th, 2017
Muthalik

ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜೂ. 24ರಂದು ಆಯೋಜಿಸಲಾಗಿದ್ದ ಇಫ್ತಾರ್ ಕೂಟವನ್ನು ವಿರೋಧಿಸಿ ಶ್ರೀರಾಮಸೇನೆ ಜು.2ರಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಶ್ರೀರಾಮಸೇನೆಯ ಸ್ಥಾಪಕ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ಪೇಜಾವರ ಮಠದ ಶ್ರೀವಿಶ್ವೇಶತೀರ್ಥ ರೊಂದಿಗೆ ಸೋಮವಾರ ಬೆಳಗ್ಗೆ ಉಡುಪಿಗೆ ಧಾವಿಸಿ ಬಂದು ಚರ್ಚೆ ನಡೆಸಿ ವಿಫಲರಾಗಿದ್ದ ಮುತಾಲಿಕ್, ಅನಂತರ ಸೇನೆಯ ಮುಖಂಡರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕ ಇದರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದು ಸಂಜೆ ಸುದ್ದಿಗಾರರಿಗೆ ತಿಳಿಸಿದರು. ಸ್ವಾಮೀಜಿ ಸಮಾಜಕ್ಕೆ ಶ್ರೀಮಠದಲ್ಲಿ ಇಫ್ತಾರ್ […]

ಹಿಂದೂ ವಿರೋಧಿ ಕೋಮು ಹಿಂಸೆ ತಡೆ ಶಾಸನ ಜಾರಿಯನ್ನು ನಿಲ್ಲಿಸಬೇಕು : ಮುತಾಲಿಕ್

Monday, August 1st, 2011
ಹಿಂದೂ ವಿರೋಧಿ ಕೋಮು ಹಿಂಸೆ ತಡೆ ಶಾಸನ ಜಾರಿಯನ್ನು ನಿಲ್ಲಿಸಬೇಕು : ಮುತಾಲಿಕ್

ಮಂಗಳೂರು : ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ಭಾನುವಾರ ಕೇಂದ್ರ ಸರಕಾರ ಕೋಮು ಹಿಂಸೆ ತಡೆ ಶಾಸನ ಜಾರಿಗೆ ತರುವುದನ್ನು ವಿರೋಧಿಸಿ ಹಿಂದೂ ಸಂಘಟನೆಗಳನ್ನು ಒಗ್ಗೂಡಿಸಿ ದೇಶಾದ್ಯಂತ ತೀವ್ರ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದ್ದಾರೆ. ಪತ್ರಕರ್ತರೊಂದಿಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಸ್ಲಿಂ ದೇಶದಲ್ಲೂ ಇಂತಹ ಶಾಸನ ಜಾರಿಗೊಳಿಸಿಲ್ಲ. ಬಹುಸಂಖ್ಯಾಕರನ್ನು ದಮನ ಮಾಡುವ ಹಾಗೂ ಮತ ಗಳಿಸುವ ಉದ್ದೇಶದಿಂದ ಈ ಕಾನೂನು ಜಾರಿಗೆ ತರಲಾಗುತ್ತಿದೆ. ಯಾವುದೇ ಹಿಂದೂ ನಾಯಕರನ್ನು, ಸಂಘಟನೆಗಳನ್ನು ಗುರಿಯಾಗಿಟ್ಟುಕೊಂಡು ಈ ಶಾಸನ ರಚಿಸಲಾಗಿದೆ. […]