ಒಂಬತ್ತನೇ ಮಹಡಿಯಿಂದ ಬಿದ್ದ ಭದ್ರತಾ ಸಿಬ್ಬಂದಿ ಮೃತ್ಯು

Monday, November 23rd, 2020
mutturaj

ಮಂಗಳೂರು : ಒಂಬತ್ತನೇ ಮಹಡಿಯಿಂದ  ಕಾಲು ಜಾರಿ ಕೆಳಗೆ ಬಿದ್ದ ಭದ್ರತಾ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದಲ್ಲಿ ನಡೆದಿದೆ. ಇಲ್ಲಿನ ಠಾಣಾ ವ್ಯಾಪ್ತಿಯ ನಗರಸಭೆ ಕಚೇರಿ ಬಳಿ ಇರುವ ಇನ್‌ಪಾಲ ಬಹುಮಹಡಿ ಕಟ್ಟಡದಲ್ಲಿ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಚೆಂಬುಗುಡ್ಡೆ ನಿವಾಸಿ ಮುತ್ತುರಾಜ(55) ಎಂದು ಗುರುತಿಸಲಾಗಿದೆ. ಕಟ್ಟಡದ 9ನೆ ಮಹಡಿಗೆ ತೆರಳಿದ್ದ ಅವರು, ಟ್ಯಾಂಕ್ ನಲ್ಲಿ ನೀರು ಪರಿಶೀಲನೆ ಮಾಡುತ್ತಿದ್ದ ಸಂದರ್ಭ ಅಕಸ್ಮಾತ್ ಕಾಲುಜಾರಿ ಕೆಳಗೆ ಬಿದ್ದಿದ್ದಾರೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರರಕಣ ದಾಖಲಾಗಿದೆ.