ಗುರುಪುರ ಸೇತುವೆ ಬಂದ್, ಪಿಡಬ್ಲ್ಯೂಡಿ ಅಧಿಕಾರಿಗಳಿಂದ ಪರಿಶೀಲನೆ

Thursday, June 28th, 2018
mangaluru

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮುಂಗಾರು ಮಳೆಗೆ ಬಂಟ್ವಾಳ ಮತ್ತು ಮಂಗಳೂರು ತಾಲೂಕುಗಳ ಗಡಿಭಾಗ ಮುಲ್ಲರಪಟ್ನ ಎಂಬಲ್ಲಿ ಈಗಾಗಲೇ ಸೇತುವೆ ಕುಸಿದು ಬಿದ್ದಿದ್ದು, ಮತ್ತೊಂದು ಸೇತುವೆ ಇದೇ ಪರಿಸ್ಥಿತಿಯಲ್ಲಿದೆ. ಸಂಪೂರ್ಣ ಶಿಥಿಲಗೊಂಡಿರುವ ಈ ಸೇತುವೆ ಯಾವಾಗ ಕುಸಿದು ಬೀಳಲಿದೆ ಎಂಬ ಆತಂಕದಲ್ಲಿ ಸಾರ್ವಜನಿಕರು, ವಾಹನ ಸವಾರರು ದಿನದೂಡುತ್ತಿದ್ದಾರೆ. ಇದರ ಬೆನ್ನಲ್ಲೆ ನಿನ್ನೆ ಗುರುಪುರ ಸೇತುವೆಯನ್ನು ರಾಷ್ಟ್ರೀಯ ಹೆದ್ದಾರಿ ಮತ್ತು ಪಿಡಬ್ಲ್ಯೂಡಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಗುರುಪುರ ಸೇತುವೆ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ಇಂದು ಬೆಳಿಗ್ಗೆ […]

ಮುಲ್ಲರಪಟ್ನ ಸೇತುವೆ ಕುಸಿಯಲು ಮರಳು ಮಾಫಿಯಾ, ಅಧಿಕಾರಿ ನಿರ್ಲಕ್ಷ ಕಾರಣ: ಸಂಸದ ನಳಿನ್ ಕುಮಾರ್

Tuesday, June 26th, 2018
nalin-kumar

ಮಂಗಳೂರು: ಮುಲ್ಲರಪಟ್ನ ಸೇತುವೆಯು ಮರಳು ಮಾಫಿಯಾಕ್ಕೆ ಬಲಿಯಾದ ಮೊದಲ ಸೇತುವೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷವೂ ಕಾರಣ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ. ಮಂಗಳೂರಿನಲ್ಲಿಂದು ಸುದ್ದಿಗಾರರ ಜತೆ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಅಧಿಕಾರಿಗಳಿಗೆ ಅಲ್ಲಿಯ ಸ್ಥಳೀಯರು ಮರಳು ತೆಗೆಯುವುದರಿಂದ ಆಗಿರುವ ಹಾನಿ ಬಗ್ಗೆ, ಪಿಲ್ಲರ್ ಕುಸಿತದ ಬಗ್ಗೆ ವೀಡಿಯೋ ರೆಕಾರ್ಡ್ ಮಾಡಿ ಕಳುಹಿಸಿದ್ದರು. ಆಗ ಜಿಲ್ಲಾಡಳಿತ ಸೇತುವೆ ಬದಿ ಯಂತ್ರಗಳನ್ನು ಉಪಯೋಗಿಸಿ ಮರಳು ತೆಗೆಯುವುದನ್ನು ನಿಲ್ಲಿಸಿಲ್ಲ. ಅಲ್ಲಿ ಕಳೆದ ಅವಧಿಯಲ್ಲಿ ಆಡಳಿತದಲ್ಲಿದ್ದವರ ಪ್ರಭಾವ, ಬೆಂಬಲದೊಂದಿಗೆ […]