ಗಿಲ್ ನೆಟ್ ಬೋಟ್ ನಲ್ಲಿ ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Monday, September 13th, 2021
Azar Boat

ಮಂಗಳೂರು, : ಪಣಂಬೂರು ಸಮುದ್ರ ತೀರದಲ್ಲಿ ಸೆ.11 ರಂದು ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹವು ತಣ್ಣೀರುಬಾವಿ ಬೀಚ್ ಭಾನುವಾರ ರಾತ್ರಿ ವೇಳೆ ಪತ್ತೆಯಾಗಿದೆ. ನಾಪತ್ತೆಯಾಗಿದ್ದ  ಕಸಬಾ ಬೆಂಗರೆ ನಿವಾಸಿ ಮುಹಮ್ಮದ್ ಶರೀಫ್ (35) ಎಂಬ ಮೀನುಗಾರನ  ಮೃತದೇಹ ಪತ್ತೆಯಾಗಿದೆ. ಸೆ. 11 ರಂದು ಗಿಲ್ ನೆಟ್ ಬೋಟ್ ಮೀನುಗಾರಿಕೆಗೆ ತೆರಳುತ್ತಿರುವಾಗ ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದರು. ಆದರೆ ಶರೀಫ್ […]

ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ: ಗಾಯಗೊಂಡ ಯುವಕ ಆಸ್ಪತ್ರೆಯಲ್ಲಿ ಮೃತ್ಯು

Wednesday, November 27th, 2019
Shariff

ಮಂಜೇಶ್ವರ : ದ್ವಿಚಕ್ರ ವಾಹನವೊಂದಕ್ಕೆ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಸಂಭವಿಸಿದೆ. ಆರಿಕ್ಕಾಡಿ ಕುನ್ನಿಲ್ ನಿವಾಸಿ ಅಬೂಬಕರ್ ಎಂಬವರ ಪುತ್ರ ಮುಹಮ್ಮದ್ ಶರೀಫ್ (34) ಮೃತಪಟ್ಟವರು. ಮುಹಮ್ಮದ್ ಶರೀಫ್ ಮಂಗಳವಾರ ಬೆಳಗ್ಗೆ ಪತ್ನಿ ಮನೆಯಿಂದ ಸ್ಕೂಟರ್‌ನಲ್ಲಿ ನಾದಿನಿ ಮುನೀರಾ(19) ಎಂಬವರನ್ನು ಕರೆದುಕೊಂಡು ಬಂದ್ಯೋಡಿನತ್ತ ತೆರಳುತ್ತಿದ್ದ ವೇಳೆ ಅಡ್ಕ ಒಳಯಂ ಬಳಿ ಪಿಕಪ್ ವಾಹನ ಢಿಕ್ಕಿ ಹೊಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡಿದ್ದ […]