ಪಿಲಿಕುಳದ ಸುಧಾರಣೆಗೆ ಅಗತ್ಯ ಕ್ರಮ: ಅರವಿಂದ ಲಿಂಬಾವಳಿ

Friday, July 9th, 2021
Aravinda Limbavali Pilikula

ಮಂಗಳೂರು : ಪಿಲಿಕುಳ ನಿಸರ್ಗ ಧಾಮದ ಸುಧಾರಣೆಗೆ ಕೇಂದ್ರ ಸಚಿವರು ಹಾಗೂ ರಾಜ್ಯದ ಅಧಿಕಾರಿಗಳೊಂದಿಗೆ ಚರ್ಚಿಸಿ ಎಲ್ಲಾ ರೀತಿಯ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳುವುದಾಗಿ ಅರಣ್ಯ ಮತ್ತು ಕನ್ನಡ ಹಾಗೂ ಸಂಸ್ಕøತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿ ಅವರು ತಿಳಿಸಿದರು. ಅವರು ಜು.9ರ ಶುಕ್ರವಾರ ನಗರಕ್ಕೆ ಅನತಿ ದೂರದಲ್ಲಿರುವ ಪಿಲಿಕುಳ ನಿಸರ್ಗ ಧಾಮಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪಿಲಿಕುಳದ ಮೃಗಾಯಲವನ್ನು ವೀಕ್ಷಿಸಿದ ನಂತರ ವರದಿಗಾರರೊಂದಿಗೆ ಮಾತನಾಡಿದರು. ಪಿಲಿಕುಳದಲ್ಲಿರುವ ಪ್ರಾಣಿಗಳ ರಕ್ಷಣೆ ಹಾಗೂ ಪೋಷಣೆ ಕುರಿತಂತೆ ಸಂಬಂಧಿಸಿದ ಅಧಿಕಾರಿಗಳ ತಂಡದೊಂದಿಗೆ […]

ದುಬೈನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ ಸುಹೈಬ್ ಅಲಿ

Wednesday, December 16th, 2020
SUHAIB-ALI

ವಿಟ್ಲ : ದುಬೈನಲ್ಲಿ ನಡೆದ 24ಗಂಟೆಗಳ ಕಾಂಟ್ರೋಮೆಂಟ್ 2020,ಕಾರ್ ರೇಸಲ್ಲಿ ಮೂಡಬಿದಿರೆಯ ಸುಹೈಬ್ ಅಲಿ ಟೀಮ್ ಮತ್ತೆ ಪ್ರಶಸ್ತಿಗಳನ್ನು ಪಡೆದು ಭಾರತದ ಗೌರವ ಹೆಚ್ಚಿಸಿದೆ. ದುಬೈನಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಎಂಡ್ಯುರೆನ್ಸ್ ಚಾಂಪಿಯನ್ ಶಿಪ್೨೦೨೦ ಕಾರ್ ರೇಸಿಗೆ ಆಯ್ಕೆಯಾಗಿದ್ದ ೭೨ದೇಶಗಳ ಪೈಕಿ ೪೨ದೇಶಗಳು ಭಾಗವಹಿಸಿವೆ. ೪೨ತಂಡವನ್ನೂ ಹಿಂದಿಕ್ಕಿದ ಮೂಡಬಿದಿರೆಯ ಸುಹೈಬ್ ಅಲಿ ಟೀಮ್ ಎರಡು ಪ್ರಶಸ್ತಿಗಳನ್ನು ಪಡೆದು ಮತ್ತೆ ದುಬೈನಲ್ಲಿ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾರೆ. ನಮ್ಮ ದೇಶದ ಕಂಪನಿಗಳು ಮತ್ತು ದಾನಿಗಳು ನಮಗೆ ಇನ್ನಷ್ಟು […]

ಮಗಳ ಪ್ರಯತ್ನಕ್ಕೆ ಸರ್ಕಾರ ಸ್ಪಂದಿಸಿ ದರೂ, ಕೊರೋನಾ ಆ ಶಿಕ್ಷಕಿಯ ಪ್ರಾಣವನ್ನೇ ಕಸಿದುಕೊಂಡಿತು

Friday, October 16th, 2020
Padamkshi

ಮೂಡಬಿದಿರೆ: ವಿವಿಧ ಸ್ಥಳಗಳಿಗೆ ಭೇಟಿ ನೀಡುವ ರಾಜ್ಯ ಸರ್ಕಾರದ ‘ವಿದ್ಯಾಗಮ’ ಯೋಜನೆಯಡಿ ಕರ್ತವ್ಯ ನಿರ್ವಹಿಸುತಿದ್ದ  ಪ್ರೌಢಶಾಲೆಯ  ಶಿಕ್ಷಕಿಯೊಬ್ಬರು  ಕೊರೋನಾ ವೈರಸ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಮೂಡಬಿದಿರೆಯ ಜವಾಹರಲಾಲ್ ನೆಹರೂ ಅನುದಾನಿತ ಪ್ರೌಢಶಾಲೆಯ ಶಿಕ್ಷಕಿಯಾಗಿದ್ದ ಪದ್ಮಾಕ್ಷಿ ಎನ್ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ‘ವಿದ್ಯಾಗಮ’ ಯೋಜನೆಯಡಿ ವಿದ್ಯಾರ್ಥಿಗಳಿಗೆ ಕಲಿಸುತ್ತಿದ್ದರು. ಅಂತಹ ಭೇಟಿಗಳ ಸಮಯದಲ್ಲಿ ಶಿಕ್ಷಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಸೆಪ್ಟೆಂಬರ್ 29 ರಂದು ಅವರು ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದರು. ಆಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ […]

ರಿಟ್ಜ್ ಕಾರಿನಲ್ಲಿ ಅಕ್ರಮ ದನ ಸಾಗಾಟ, ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆದ ಆರೋಪಿಗಳು, ಗಾಳಿಯಲ್ಲಿ ಗುಂಡು

Sunday, October 11th, 2020
Ritz Car Cow smuggling

ಮೂಡುಬಿದಿರೆ: ರಿಟ್ಜ್  ಕಾರಿನಲ್ಲಿ ಅಕ್ರಮ ದನ ಸಾಗಾಟ ನಡೆಸುತ್ತಿದ್ದ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಹತ್ನಿಸಿದ ಘಟನೆ ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ. ಮೂಡಬಿದಿರೆಯ ಸಮೀಪ ಮೂಡುಕೋಣಾಜೆ ಉಂಜೆಬೆಟ್ಟು ಬಳಿ ಇಂದು ನಸುಕಿನ ವೇಳೆ ಕಾರಿನಲ್ಲಿ ಅಕ್ರಮವಾಗಿ ದನಗಳನ್ನು ಸಾಗಿಸುತ್ತಿದ್ದ ಗೋಕಳ್ಳರ ಮೇಲೆ ಶೂಟೌಟ್ ಮಾಡಿದ ಪೋಲಿಸರು 6 ದನಗಳನ್ನು ರಕ್ಷಿಸಿದ್ದಾರೆ. ಶಿರ್ತಾಡಿ ಕಡೆಯಿಂದ ಹೌದಾಲ್ ಕಡೆಗೆ ಬರುತ್ತಿದ್ದ ರಿಟ್ಜ್  ಕಾರ್ ನಲ್ಲಿ ಆರು ದನಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿರುವ ಮಾಹಿತಿ ಪಡೆದ ಪೊಲೀಸರು […]

ದುಬೈ ಕಾರ್ ರೇಸಿನಲ್ಲಿ ಭಾಗವಹಿಸಲಿರುವ ಮೂಡಬಿದಿರೆಯ ಸುಹೈಬ್

Wednesday, September 16th, 2020
suhail

ಮಂಗಳೂರು  : ದುಬೈನಲ್ಲಿ ಸೆಪ್ಟೆಂಬರ್ 17 ರಂದು ನಡೆಯಲಿರುವ “ಎಂಡ್ಯುರೆನ್ಸ್ ಚಾಂಪಿಯನ್ ಶಿಪ್2020” ಕಾರ್ ರೇಸ್‌ನ ಭಾರತೀಯ ತಂಡದಲ್ಲಿ ಮೂಡಬಿದಿರೆಯ ಯುವಕ ಸುಹೈಬ್ ಅಲಿ ಭಾಗವಹಿಸುತ್ತಿದ್ದಾರೆ. ದುಬೈನಲ್ಲಿ  ಸೆಪ್ಟೆಂಬರ್ 17 ರಂದು ಗುರುವಾರ 6ಗಂಟೆಗಳ ಕಾಲ ನಡೆಯಲಿರುವ ಎಂಡ್ಯುರೆನ್ಸ್ ಚಾಂಪಿಯನ್ ಶಿಪ್ 2020  ಕಾರ್ ರೇಸ್‌ನಲ್ಲಿ ಐವರನ್ನೊಳಗೊಂಡ ಭಾರತದ ತಂಡ ಭಾಗವಹಿಸಲಿದೆ. ಐವರ ಪೈಕಿ ಮೂಡಬಿದಿರೆಯ ಸುಹೈಬ್ ಅಲಿ(28)ಕೂಡ ಒಬ್ಬರಾಗಿದ್ದು ನಿನ್ನೆ ಬಜಪೆ ಏರ್‌ಪೋರ್ಟಿಂದ ದುಬೈಗೆ ಪ್ರಯಾಣ ಬೆಳೆಸಿದ್ದಾರೆ. ದ.ಕ.ಜಿಲ್ಲಾ ಅಂಬೇಡ್ಕರ್ ಸೇನೆಯ ಅಧ್ಯಕ್ಷ ಎಂ.ಕೆ.ಅಬೂಬಕ್ಕರ್(ಮಡಿಕೇರಿ) ಪುತ್ರ ಸುಹೈಬ್ […]

‘ಆಳ್ವಾಸ್’ ನಲ್ಲಿ ಸ್ನೇಹ ಕೂಟ ಕಾರ್ಯಕ್ರಮ

Wednesday, October 3rd, 2018
alwasclg

ಮೂಡಬಿದಿರೆ: ಕಾಲೇಜಿನ ಬೆಳವಣಿಗೆಯಲ್ಲಿ ಉಪನ್ಯಾಸಕರ ಪಾತ್ರ ಪ್ರಮುಖವಾಗಿದ್ದು, ಹೊಸ ಯೋಜನೆಗಳನ್ನು ನಿಭಾಯಿಸುವಲ್ಲಿ ಜವಾಬ್ದಾರಿಯುತ ನಡೆ ಅಗತ್ಯ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಅವರು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ “ಸ್ನೇಹ ಕೂಟ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವ್ಯಕ್ತಿಯ ವ್ಯಕ್ತಿತ್ವ ತಿಳಿದುಕೊಳ್ಳಲು ಪ್ರತಿಭೆಗಳು ಸಹಕಾರಿಯಾಗಿವೆ. ವರ್ಷವಿಡೀ ವಿದ್ಯಾರ್ಥಿಗಳಿಗೆ ಕಲಿಸುತ್ತಾ, ವೃತ್ತಿನಿರತರಾದ ಉಪನ್ಯಾಸಕರಿಗೆ ತಮ್ಮಲ್ಲಿದ್ದ ಪ್ರತಿಭೆಗಳನ್ನು ಹೊರಹಾಕಲು ಹಾಗೂ ಆತ್ಮೀಯತೆಯಿಂದ ಒಬ್ಬರನ್ನೊಬ್ಬರು ಬೆರೆಯುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. […]

ಪೋಷಕರ ಪ್ರೀತಿ ಮಕ್ಕಳ ಭವಿಷ್ಯವನ್ನು ನಿರ್ಧರಿಸುವಂತಿರಬೇಕು: ಪ್ರೋ ಪ್ರಕಾಶ್ ಶೆಟ್ಟಿ

Monday, October 1st, 2018
praksh-shetty

ಮೂಡಬಿದಿರೆ: ಮಕ್ಕಳು ಕೇಳಿದ ಎಲ್ಲ ವಸ್ತುವನ್ನು ಪೋಷಕರು ನೀಡಿದರೆ ಅದು ಮಕ್ಕಳನ್ನು ಪೋಷಿಸಿದಂತಲ್ಲ. ಮಕ್ಕಳನ್ನು ವಿನಯಶೀಲರಾಗಿ ಬೆಳೆಸುವುದು ಪೋಷಕರ ಮುಖ್ಯ ಕರ್ತವ್ಯ ಎಂದು ಆಳ್ವಾಸ್ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಆಡಳಿತ ಅಧಿಕಾರಿ ಪ್ರೋ ಪ್ರಕಾಶ್ ಶೆಟ್ಟಿ ಹೇಳಿದರು. ಆಳ್ವಾಸ್ ಕಾಲೇಜಿನ ವಾಣಿಜ್ಯ ವಿಭಾಗದಿಂದ ಆಯೋಜಿಸಲಾಗಿದ್ದ ಶಿಕ್ಷಕ-ರಕ್ಷಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳನ್ನು ಬಾಲ್ಯದಲ್ಲಿಯೇ ಶಿಕ್ಷಣಕ್ಕಾಗಿ ಮನೆಯಿಂದ ಹೊರ ಕಳುಹಿಸುತ್ತಿದ್ದಾರೆ. ಇದರಿಂದಾಗಿ ಕುಟುಂಬ ಪದ್ದತಿಯ ಮೌಲ್ಯ ಅರಿಯದ ಮಕ್ಕಳು ದೊಡ್ಡವರಾದ ಮೇಲೆ ತಮ್ಮ ಹೆತ್ತವರನ್ನೆ […]

ಪ್ರೀತಿ ನಿರಾಕರಿಸಿದ ಆರೋಪ: ಪ್ರಿಯತಮೆಯ ಕೊಂದು ಪ್ರೇಮಿ ಆತ್ಮಹತ್ಯೆ

Friday, September 28th, 2018
murder

ಮಂಗಳೂರು: ಪ್ರೇಮ ಪ್ರಸ್ತಾಪವನ್ನು ನಿರಾಕರಿಸಿದಳೆಂದು ಆರೋಪಿಸಿ ಯುವತಿಯ ಮನೆಗೆ ನುಗ್ಗಿದ್ದ ಪಾಗಲ್ ಪ್ರೇಮಿವೋರ್ವ ಆಕೆಯನ್ನು ಕೊಂದು ಬಳಿಕ ತಾನು ಆತ್ಮಹತ್ಯೆಗೆ ಶರಣಾಗಿರುವ ಮೂಡಬಿದಿರೆಯಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ಚರಿಷ್ಮಾ ಎಂದು ಗುರುತಿಸಲಾಗಿದ್ದು, ಈಕೆಯನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಯುವಕ ಮಂಗಳೂರು ಮೂಲದ ಲೋಹಿತ್ ಎಂದು ತಿಳಿದು ಬಂದಿದೆ. ಮೂಡಬಿದಿರೆ ಪ್ರಾಂತ್ಯ ಶಾಲೆಯ ಬಳಿ ಇರುವ ಮನೆಯಲ್ಲಿ ಚರಿಷ್ಮಾ ವಾಸವಿದ್ದಳು. ಈಕೆಯನ್ನು ಮಂಗಳೂರಿನ ಬಜಾಲ್ ನಿವಾಸಿ ಲೋಹಿತ್ ಎಂಬಾತ ಪ್ರೀತಿಸುತ್ತಿದ್ದ ಎನ್ನಲಾಗ್ತಿದೆ. ಲೋಹಿತ್ನ ಪ್ರೇಮ ಪ್ರಸ್ತಾಪವನ್ನು ಚರಿಷ್ಮಾ ನಿರಾಕರಿಸಿದ್ದಳು. […]

ಮಂಗಳಮುಖಿವರಿಗೂ ಎಲ್ಲರಂತೆ ಸಮಾನರಾಗಿ ಬದುಕುವ ಹಕ್ಕಿದೆ: ಆರ್ ಜೆ ಕಾಜಲ್

Wednesday, September 5th, 2018
rj-kajal

ಮೂಡಬಿದಿರೆ: ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ಸಮಾನರಾಗಿ ಬದುಕುವ ಹಕ್ಕನ್ನು ನೀಡಿದೆ. ಅದರಂತೆ ಮಂಗಳಮುಖಿವರಿಗೂ ಎಲ್ಲರಂತೆ ಸಮಾನರಾಗಿ ಬದುಕುವ ಹಕ್ಕಿದೆ ಎಂದು ರೇಡಿಯೋ ಜಾಕಿ ಕಾಜಲ್ ತಿಳಿಸಿದರು. ಆಳ್ವಾಸ್ ಕಾಲೇಜಿನ ಪತ್ರಿಕೋದ್ಯಮ ವಿಭಾಗ ವತಿಯಿಂದ ಹಮ್ಮಿಕೊಂಡಿದ್ದ ಉಪನ್ಯಾಸ ಕಾರ‍್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಡುತ್ತಿದ್ದರು. ಇಂದು ಮಂಗಳಮುಖಿಯರು ತಮ್ಮನ್ನು ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಬದುಕು ನಡೆಸುತ್ತಿದ್ದರೂ ಸಮಾಜ ಅವರನ್ನು ನೋಡುವ ದೃಷ್ಠಿ ಬದಲಾಗಿಲ್ಲ ಎಂದು ಖೇದ ವ್ಯಕ್ತಪಡಿಸಿದರು. ಜಾತಿ, ಭಾಷೆ, ಧರ್ಮದ ಹೆಸರಿನಲ್ಲಿ ಕಚ್ಚಾಡುತ್ತಿರುವ ಜನರ ನಡುವೆ […]

ಆಳ್ವಾಸ್‌ನಲ್ಲಿ ಮಾಹಿತಿ ಕಾರ್ಯಾಗಾರ

Wednesday, September 5th, 2018
moodbidri

ಮೂಡಬಿದಿರೆ: ಇಂದಿನ ಸಮಾಜದಲ್ಲಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪೋಷಕರಲ್ಲಿನ ಅರಿವಿನ ಕೊರತೆ ಈ ಸಮಸ್ಯೆಗೆ ಮೂಲ ಕಾರಣ ಎಂದು ಮಂಗಳೂರು ಇಂಚರಾ ಫೌಂಡೇಷನ್‌ನ ನಿರ್ದೇಶಕ ಪ್ರೀತಮ್ ರೊಡ್ರಿಗಸ್ ತಿಳಿಸಿದರು. ಅವರು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮನಶಾಸ್ತ್ರ ಮತ್ತು ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಎಂಬ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಮಕ್ಕಳ ಮೇಲಿನ ದೌರ್ಜನ್ಯ ಭಾರತದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು ಅದರಲ್ಲೂ ಸಂಬಂಧಿಕರೆ ದೌರ್ಜನ್ಯ ಎಸಗುತ್ತಿರುವುದು […]