ಮಂಗಳೂರು ಪೊಲೀಸರ ಮಿಂಚಿನ ಕಾರ್ಯಾಚರಣೆ: 35 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ಜಪ್ತಿ
Wednesday, June 6th, 2018ಮಂಗಳೂರು: ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಮಟ್ಟಹಾಕಲು ಪೊಲೀಸ್ ಇಲಾಖೆ ಹೊಸ ಪ್ರಯತ್ನವೊಂದಕ್ಕೆ ಮುನ್ನುಡಿಯಿಟ್ಟಿದ್ದು, ವಿಶೇಷ ಕಾರ್ಯತಂಡವನ್ನು ರಚಿಸಲಾಗಿದೆ. ನೂತನ ಕಾರ್ಯಪಡೆಯು ಮಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದ್ದು, ಹಲವೆಡೆ ಅಕ್ರಮವಾಗಿ ದಾಸ್ತಾನಿರಿಸಿದ್ದ ಮರಳನ್ನು ವಶಪಡಿಸಿಕೊಂಡಿದೆ. ಅಕ್ರಮ ಮರಳುಗಾರಿಕೆಗೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ವಿಪುಲ್ ಕುಮಾರ್ ಮಾರ್ಗದರ್ಶನದಲ್ಲಿ ಪೊಲೀಸ್ ಉಪ ಆಯುಕ್ತರಾದ ಹನುಮಂತರಾಯ, ಉಮಾಪ್ರಶಾಂತ್ ಅವರ ಮೇಲುಸ್ತುವಾರಿಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಗೋಪಾಲಕೃಷ್ಣ ನಾಯಕ್, ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಕೆ. […]