ಮೂಲರಪಟ್ಣ ನೂತನ ಸೇತುವೆ ವಾಹನ ಸಂಚಾರಕ್ಕೆ ಮುಕ್ತ

Friday, November 12th, 2021
mularapatna

ಬಂಟ್ವಾಳ: ಬಂಟ್ವಾಳ ಹಾಗೂ ಮಂಗಳೂರು ತಾಲೂಕುಗಳನ್ನು ಸಂಪರ್ಕಿಸುವ ಮೂಲರಪಟ್ಣ ನೂತನ ಸೇತುವೆಯನ್ನು ಊರಿನ ಹಿರಿಯರು ತೆಂಗಿನಕಾಯಿ ಒಡೆದು ಸಂಚಾರಕ್ಕೆ ಮುಕ್ತಗೊಳಿಸಿದರು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಸೇತುವೆಯಲ್ಲಿ ಊರಿನ ಪ್ರಮುಖರ ಜತೆ ಸಾಗಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೇತುವೆ ನಿರ್ಮಾಣ ಸಂಸ್ಥೆ ಕಾವೂರು ಮುಗ್ರೋಡಿ ಕನ್ ಸ್ಟ್ರಕ್ಷನ್ಸ್ ಮಾಲಕ ಸುಧಾಕರ ಶೆಟ್ಟಿ ಮುಗ್ರೋಡಿ, ದಾಮೋದರ್, ಅರಳ ಗ್ರಾ.ಪಂ.ಅಧ್ಯಕ್ಷ ಲಕ್ಷ್ಮೀಧರ ಶೆಟ್ಟಿ, ಉಪಾಧ್ಯಕ್ಷೆ ಪ್ರೇಮಾ, ಮುತ್ತೂರು […]

ಮೂಲರಪಟ್ಣ ಸೇತುವೆ ಸ್ಥಳಕ್ಕೆ ಯು.ಟಿ ಖಾದರ್ ಭೇಟಿ ನೀಡಿ ಪರಿಶೀಲನೆ..!

Saturday, June 30th, 2018
mullarpatna

ಮಂಗಳೂರು: ಇತ್ತೀಚೆಗೆ ಮಂಗಳೂರಿನ ಕುಪ್ಪೆಪದವಿನಿಂದ ಬಂಟ್ವಾಳ ಸಂಪರ್ಕಿಸುವ ಮೂಲರಪಟ್ಣ ಸೇತುವೆ ಕುಸಿತವಾಗಿರುವ ಹಿನ್ನೆಲೆಯಲ್ಲಿ ಸಚಿವ ಯು.ಟಿ ಖಾದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸ್ಥಳೀಯರೊಂದಿಗೆ ಸಮಸ್ಯೆ ಆಲಿಸಿದ ಅವರು, ಶೀಘ್ರ ಪರ್ಯಾಯ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ಮೂಲರಪಟ್ಣದಿಂದ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಮಾಡುವ ಭರವಸೆ ನೀಡಿದರು. ನದಿಯ ಎರಡೂ ಕಡೆಯವರ ಸಂಪರ್ಕಕ್ಕಾಗಿ ಬೋಟ್ ವ್ಯವಸ್ಥೆ ಮಾಡಲು ಪರಿಶೀಲನೆ ನಡೆಸುವಂತೆ ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು ಎಂದರು. ಮಳೆಗಾಲ ಕಳೆದ ಬಳಿಕ ಹೊಸ […]

ಮೂಲರಪಟ್ಣದ ಸೇತುವೆ ಕುಸಿತ…3 ತಿಂಗಳು ಮೊದ್ಲೇ ಭವಿಷ್ಯ ನುಡಿದಿದ್ದ ವ್ಯಕ್ತಿ!

Tuesday, June 26th, 2018
mangalore

ಮಂಗಳೂರು: ಇದು ಸೋಜಿಗವೆನಿಸಿದರೂ ನಂಬಲೇಬೇಕಾದ ವಿಷಯವಾಗಿದೆ. ನಿನ್ನೆಯಷ್ಟೇ ಮಂಗಳೂರಿನ ಮೂಲರಪಟ್ಣದಲ್ಲಿ ಕುಸಿದ ಸೇತುವೆಯ ಕುರಿತಾಗಿ ಗ್ರಾಮಸ್ಥರೊಬ್ಬರು ಮೂರು ತಿಂಗಳ ಮೊದಲೇ ಗ್ರಹಿಸಿ ಎಚ್ಚರಿಕೆ ನೀಡಿದ್ದ ವಿಡಿಯೋ ಸದ್ಯ ವೈರಲ್ ಆಗಿದೆ. ಜಿಲ್ಲೆಯ ಮೂಲರಪಟ್ಣ ಸೇತುವೆ ಕುಸಿದು ಬಿದ್ದು ರಾಜ್ಯದಾದ್ಯಂತ ಸುದ್ದಿಯಾಗಿತ್ತು. ಈಗ ಅದೇ ಸೇತುವೆ ಕುರಿತಾಗಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡ್ತಿದೆ. ವಿಡಿಯೋದಲ್ಲಿ ಮೂಲರಪಟ್ಣದ ಸ್ಥಳೀಯ ಹಮೀದ್ ಎಂಬುವರು ಬ್ಯಾರಿ ಭಾಷೆಯಲ್ಲಿ ಮಾತನಾಡುತ್ತಾ ನೆರೆಹೊರೆಯವರಿಗೆ ಸೇತುವೆಯಲ್ಲಿ ಕಾಣಿಸಿಕೊಂಡ ಬಿರುಕನ್ನು ತೋರಿಸಿದ್ದರು. ಇದು ಈ ಬಾರಿ ಉರುಳಿ […]