ರೈಲ್ವೇ ಸೇತುವೆಯ ಕೆಳಗೆ ಈಜಲು ಬಂದಿದ್ದ ನಾಲ್ಕು ಮಕ್ಕಳು ಮೃತ್ಯು

Wednesday, February 28th, 2024
4 students

ಮಂಗಳೂರು : ಕೊಪ್ಪಳ ಆಣೆಕಟ್ಟ ರೈಲ್ವೇ ಸೇತುವೆಯ ಕೆಳಗೆ ಈಜಲು ಬಂದಿದ್ದ ನಾಲ್ಕು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು, ತಡರಾತ್ರಿ ಬೆಳಕಿಗೆ ಬಂದಿದೆ. ಮೃತ ಪಟ್ಟ ಮಕ್ಕಳೆಲ್ಲರೂ ಸುರತ್ಕಲ್ ಖಾಸಗಿ ಶಾಲೆಯೊಂದರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದ್ದು, ಎಲ್ಲರ ಮೃತದೇಹಗಳನ್ನು ಸ್ಥಳೀಯರ ಸಹಕಾರದೊಂದಿಗೆ ಸುರತ್ಕಲ್ ಮತ್ತು ಮುಲ್ಕಿ ಪೊಲೀಸರು ಮೇಲೆತ್ತಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಎಂಬವರ ಮಗ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಎಂಬವರ […]

ಬಸ್ ಮತ್ತು ಬೈಕ್ ಡಿಕ್ಕಿ : ಬೈಕ್‌ ಸವಾರ ಮೃತ್ಯು

Saturday, December 16th, 2023
Aspak

ವಿಟ್ಲ : ಕಬಕ ಸಮೀಪದ ಮಿತ್ತೂರು ಎಂಬಲ್ಲಿ ಬಸ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್‌ ಸವಾರ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಅಹಮ್ಮದ್ ಆಶಿಕ್ ಅಕ್ಮಲ್ (18) ಎಂದು ಗುರುತಿಸಲಾಗಿದೆ.ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ. ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬಿಟ್ಟು ಬದಿಯ ಕಣಿವೆಗೆ ಜಾರಿ ನಿಂತಿದೆ ಎನ್ನಲಾಗಿದೆ. ಆಶಿಕ್ ಕಬಕದಲ್ಲಿ ಹಳೆಯ […]

ಪಡೀಲ್ ಅಂಡರ್ ಪಾಸ್‌ ನ ಗೋಡೆಗೆ ಬೈಕ್ ಢಿಕ್ಕಿ ಹೊಡೆದು ಓರ್ವ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Thursday, September 14th, 2023
Bike-Accident

ಮಂಗಳೂರು : ನಗರದ ಪಡೀಲ್ ಅಂಡರ್ ಪಾಸ್‌ ನಲ್ಲಿ ಗುರುವಾರ ನಡೆದ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟ ಯುವಕನನ್ನು ಬಜಾಲ್ ಸಮೀಪದ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಗಾಡ್ವಿನ್ (19) ಮತ್ತು ಆಶಿತ್ 17) ಎಂಬವರು ಗಾಯಗೊಂಡಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್‌ನಲ್ಲಿ ಮೂರು ಮಂದಿ ಸವಾರಿ ಮಾಡಿದ್ದು, ಅತೀ ವೇಗ ಮತ್ತು ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಅಂಡರ್‌ಪಾಸ್‌ನ ಗೋಡೆಗೆ ಬೈಕ್ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

ತಲೆಯ ಮೇಲೆ ಕಲ್ಲು ಬಿದ್ದು ಹಾಸ್ಯ ಕಲಾವಿದ ರಾಘವೇಂದ್ರ ಆಚಾರ್ಯ ಮೃತ್ಯು

Sunday, October 4th, 2020
Raghavendra Acharya

ಬೆಳ್ತಂಗಡಿ : ಯುವ ಕಲಾವಿದ ಹಾಗೂ ಚಲನಚಿತ್ರ ನಟರಾಗಿದ್ದ ರಾಘವೇಂದ್ರ ಆಚಾರ್ಯಗೋಳಿಕಟ್ಟೆ ಅವರು ತಲೆಯ ಮೇಲೆ ಕಲ್ಲು ಕುಸಿದು ಬಿದ್ದ ಪರಿಣಾಮ ಅ.4 ರಂದು ದಾರುಣವಾಗಿ ಮೃತಪಟ್ಟಿದ್ದಾರೆ. ರಾಘವೇಂದ್ರ ಆಚಾರ್ಯ ಅವರು ಬಳಪದ ಕಲ್ಲಿನಿಂದ ರೊಟ್ಟಿ ಮಾಡುವ ಹಂಚನ್ನು ತಯಾರಿಸುತ್ತಿದ್ದರು. ತನ್ನ ಪ್ಯಾಕ್ಟರಿಯಲ್ಲಿ  ಕೆಲಸ ಮಾಡುತ್ತಿದ್ದ ಸಂದರ್ಭ ಕುಲುಮೆಯ ಮೇಲಿನಿಂದ ಏಕಾಏಕಿ ಕಲ್ಲೊಂದು ಜಾರಿ ತಲೆ ಮೇಲೆ ಬಿದ್ದ ಪರಿಣಾಮ ತೀವ್ರ ಗಾಯವಾಗಿ ಅವರು ಅಕಾಲಿಕವಾಗಿ ಸಾವನ್ನಪ್ಪಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವ, ಉಜಿರೆಯಲ್ಲಿ ನಡೆದಿದ್ದ ವಿಶ್ವ ತುಳು ಸಮ್ಮೇಳನ, […]

ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದು ಯುವಕ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

Sunday, August 30th, 2020
wall colapse

ಬಂಟ್ವಾಳ : ಹಳೆಯ ಕಟ್ಟಡದ ಗೋಡೆ ಕುಸಿದು ಬಿದ್ದ ಪರಿಣಾಮ ಸ್ಥಳದಲ್ಲಿದ್ದ ಯುವಕ ಮೃತಪಟ್ಟು, ಬಾಲಕ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಅಮ್ಮುಂಜೆ ಎಂಬಲ್ಲಿ ನಡೆದಿದೆ. ಅಮ್ಮುಂಜೆ ಗ್ರಾಮದ ಮಾದಕೋಡಿ ಎಂಬಲ್ಲಿ ಘಟನೆ ನಡೆದಿದ್ದು, ಬಂಟ್ವಾಳ ತಾಲೂಕಿನ ಶಂಭೂರು ಗ್ರಾಮದ ಗುಡ್ಡೆ ಮನೆ ನಿಲಯ್ಯ ಪೂಜಾರಿ ಎಂಬವರ ಪುತ್ರ ಜನಾರ್ಧನ ಅಂಚನ್ (35) ಮೃತಪಟ್ಟಿದ್ದಾರೆ. ಉಳಿದಂತೆ ಬಾಲಕ ವೃಷಭ (11) ಹಾಗೂ ಸೂರಜ್ (20) ಘಟನೆ ಯಲ್ಲಿ ಅಲ್ಪಸ್ವಲ್ಪ ಗಾಯಗೊಂಡು […]

ಹಾಸ್ಯ ಸಾಹಿತಿ, ನಟ ಶೇಖರ ಭಂಡಾರಿ ಕೊರೋನಾ ದಿಂದ ಮೃತ್ಯು

Monday, August 10th, 2020
shekar bhandary

ಮಂಗಳೂರು: ನಾಟಕ ಚಲನಚಿತ್ರ ನಟ, ಹಾಸ್ಯ ಸಾಹಿತಿ, ಪ್ರಾಸ ಕವಿ ಕಾರ್ಕಳ ಶೇಖರ ಭಂಡಾರಿ (72.) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೆಲವು ದಿನಗಳ ಹಿಂದೆ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಸೋಮವಾರ ನಿಧನರಾದರು. ಅವರ ಗಂಟಲ ದ್ರವ ಪರೀಕ್ಷಾ ವರದಿ ಇಂದು ತಲುಪಿದ್ದು ಅವರಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಕೈಬೆರಳು ರಹಸ್ಯ, ನಿಮ್ಮ ಯಾವ ಬೆರಳಿನಲ್ಲಿ ಅದೃಷ್ಟವಿದೆ ನೋಡಿ ! ಶೇಖರ ಭಂಡಾರಿ ಕಾರ್ಕಳದ ಬೆಟ್ಟದ ಮನೆ […]

ವಿದ್ಯುತ್ ಪ್ರವಹಿಸಿ ಎಸೆಸೆಲ್ಸಿ ವಿದ್ಯಾರ್ಥಿ ಮೃತ್ಯು

Saturday, July 18th, 2020
Goutham

ಉಡುಪಿ : ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ವಿದ್ಯುತ್ ಪ್ರವಹಿಸಿ ಮೃತಪಟ್ಟ ಘಟನೆ ಜು.17ರಂದು ರಾತ್ರಿ ವೇಳೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್‌ ನಲ್ಲಿ ನಡೆದಿದೆ. ಮೃತರನ್ನು ಲಕ್ಷ್ಮೀನಗರದ ಮಂಜುನಾಥ್ ನಾಯಕ್ ಎಂಬವರ ಮಗ ಗೌತಮ್(15) ಎಂದು ಗುರುತಿಸಲಾಗಿದೆ. ನೆರೆಮನೆಯವರು ತಮ್ಮ ಬಾವಿಯಿಂದ ಪಂಪ್‌ಸೆಟ್ ಮೇಲಕ್ಕೆತ್ತುವಾಗ ಅಲ್ಲೇ ಸಮೀಪದಲ್ಲಿ ಇದ್ದ ಗೌತಮ್ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಣಪುರ ಮಿಲಾಗ್ರಿಸ್ ಪ್ರೌಢಶಾಲೆಯ ಪ್ರತಿಭಾವಂತ ಎಸೆಸೆಲ್ಸಿ ವಿದ್ಯಾರ್ಥಿಯಾಗಿರುವ ಗೌತಮ್, ಇತ್ತೀಚೆಗೆ ನಡೆದ ಎಸೆಸೆಲ್ಸಿ […]

ಮೊಬೈಲ್ ಗೀಳು -ರೈಲು ಡಿಕ್ಕಿಹೊಡೆದು ಇಂಜಿನಿಯರಿಂಗ್ ವಿದ್ಯಾರ್ಥಿ ಮೃತ್ಯು

Sunday, February 28th, 2016
vaishak

ಕಾಸರಗೋಡು: ಅತಿಯಾದ ಮೊಬೈಲ್ ಗೀಳಿಗೊಳಗಾದ ವಿದ್ಯಾರ್ಥಿಯೊಬ್ಬ ರೈಲು ಡಿಕ್ಕಿಯಾಗಿ ದಾರುಣನಾಗಿ ಮೃತಪಟ್ಟ ಘಟನೆ ಕಾಸರಗೊಡು ರೈಲು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ನಡೆದಿದೆ. ತೃಶೂರ್ ಕುನ್ನಂಕುಳಂ ನ ತೆಕ್ಕೆಪರಂಬಿಲ್ ನ ರವಿ ಕುಮಾರ್ ಎಂಬವರ ಪುತ್ರ ಹಾಗೂ ಪೊವ್ವಲ್ ಎಲ್‌ಬಿಎಸ್ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಕೆ.ಆರ್.ವೈಶಾಖ್ (23)ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ. ಶನಿವಾರ ಹಾಗೂ ಭಾನುವಾರ ಕಾಲೇಜಿಗೆ ರಜೆಯಾಗಿರುವುದರಿಂದ ಊರಿಗೆ ತೆರಳಲು ವೈಶಾಖ್ ಕಾಸರಗೋಡಿಗೆ ಬಂದಿದ್ದನು. ಅಲ್ಲಿ ಮೊಬೈಲ್ ಪೋನ್ ನ ಇಯರ್ ಫೋನ್ ಕಿವಿಗಿರಿಸಿ ರೈಲು […]

ಹೋಟೇಲ್ ಮ್ಯಾನೇಜರ್ ಟಿಪ್ಪರ್ ಅಪಘಾತದಲ್ಲಿ ಮೃತ್ಯು

Friday, June 5th, 2015
Aithal

ಕುಂದಾಪುರ: ಇಲ್ಲಿನ ಹರ್ಷ ರಿಫ್ರೆಶ್‌ಮೆಂಟ್ ಹೋಟೇಲಿನ ಮ್ಯಾನೇಜರ್ ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ಗುರುವಾರ ಮಧ್ಯಾಹ್ನದ ಸುಮಾರಿಗೆ ಕುಂದಾಪುರ ನಗರದ ಶಾಸ್ತ್ರೀ ವೃತ್ತದ ಸಮೀಪ ನಡೆದಿದೆ. ಮೃತ ಪಟ್ಟವರನ್ನು ಕುಂದಾಪುರದ ಯುನಿಟ್ ಹಾಲ್ ಸಮೀಪದ ನಿವಾಸಿ ನರಸಿಂಹ ಐತಾಳ್ (48) ಎಂದು ಗುರುತಿಸಲಾಗಿದೆ. ಮೂಲತಃ ಬಂಟ್ವಾಳದ ದಾಸಬೈಲಿನವರಾದ ನರಸಿಂಹ ಐತಾಳ್ ಅವರು ಕಳೆದ ಇಪ್ಪತ್ತೈದು ವರ್ಷಗಳಿಂದಲೂ ಕುಂದಾಪುರದಲ್ಲಿ ವಾಸಿಸುತಿದ್ದರು, ಅಲ್ಲದೇ ಕುಂದಾಪುರದ ಹರ್ಷ ರಿಫ್ರೆಶ್‌ಮೆಂಟ್ ಹೋಟೇಲಿನಲ್ಲಿ ಮ್ಯಾನೇಜರ್ ವೃತ್ತಿಯನ್ನು […]

ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನ ಡಕ್ಕಿ ಹೊಡೆದು ವೈದ್ಯ ಮೃತ್ಯು

Saturday, July 20th, 2013
Doctor

ಮಂಗಳೂರು : ಮಂಗಳೂರು-ಮೂಡಬಿದಿರೆಯ ಹೆದ್ದಾರಿಯಲ್ಲಿರುವ  ಪೊಳಲಿ ದ್ವಾರದ ಬಳಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ಹೋಗುತ್ತಿದ್ದ  ಪಾಂಡೇಶ್ವರದ ವೈದ್ಯರೊಬ್ಬರಿಗೆ  ಡಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ  ಮೃತ  ಘಟನೆ ಶುಕ್ರವಾರ ನಡೆದಿದೆ. ಮಂಗಳೂರಿನ ಪಾಂಡೇಶ್ವರದ ನಿವಾಸಿ  ಡಾ.ಹರ್ಷವರ್ಧನ ಗಣೇಶ್ ಉಳ್ಳಾಲ್ ಮೃತಪಟ್ಟ ದುರ್ದೈವಿ.  ಗುರುವಾರ ಹರ್ಷವರ್ಧನ್ ತನ್ನ ಮೂವರು ಗೆಳೆರೊಂದಿಗೆ ಗಂಜಿಮಠದಲ್ಲಿರುವ ಗೆಳೆಯನ ಮನೆಗೆ ಹೊಗಿದ್ದರು. ಶುಕ್ರವಾರ ಮುಂಜಾನೆ ಮೂರು ಮಂದಿ ಗೆಳೆಯರು ಕಾರಿನಲ್ಲಿ ಹೊರಟರು, ಹರ್ಷವರ್ಧನ್ ಮಾತ್ರ ಗಂಜಿಮಠದಿಂದ ಮಂಗಳೂರಿಗೆ ಬೈಕ್ ನಲ್ಲೇ ತೆರಳಿದರು. ಮಂಗಳೂರು-ಮೂಡಬಿದಿರೆ […]