ಲಾಕ್ ಡೌನ್ ಬಳಿಕ ನಷ್ಟ : ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಸ್ಸು ಮಾಲಕ

Monday, January 24th, 2022
Prakash Travels

ಶಿವಮೊಗ್ಗ : ಕಳೆದ ಶುಕ್ರವಾರದಿಂದ ನಿಗೂಢವಾಗಿ ನಾಪತ್ತೆಯಾಗಿದ್ದ ಪ್ರಕಾಶ್ ಟ್ರಾವೆಲ್ಸ್ ಮಾಲಕ ಪ್ರಕಾಶ್ (54) ಅವರ ಮೃತದೇಹ ಪತ್ತೆಯಾಗಿದೆ. ಹೊಸನಗರ ತಾಲೂಕಿನ ಪಟಗುಪ್ಪ ಸೇತುವೆ ಸಮೀಪದ ಪಟಗುಪ್ಪ ಹೊಳೆಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಸಾಗರ ತಾಲೂಕಿನ ಪ್ರಕಾಶ್ ಟ್ರಾವೆಲ್ಸ್ ಮಾಲಕರಾದ ಪ್ರಕಾಶ್ ಅವರು ಶುಕ್ರವಾರ ಸಂಜೆಯಿಂದ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಕುರಿತು ಸಾಗರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ಕುಟುಂಬಸ್ಥರು ದೂರು ನೀಡಿದ್ದರು. ಶನಿವಾರ ಸೇತುವೆ ಮೇಲೆ ಅವರ ಚಪ್ಪಲಿ ಪತ್ತೆಯಾಗಿತ್ತು. ಪ್ರಕಾಶ್ ಗಾಗಿ ನಿರಂತರವಾಗಿ ಅಗ್ನಿಶಾಮಕ ಸಿಬ್ಬಂದಿ […]

ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ

Sunday, December 6th, 2020
Rape

ಶಿವಮೊಗ್ಗ: ತಾಯಿಯನ್ನು ನೋಡಿಕೊಳ್ಳಲು  ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿ ತಾಯಿ ಆರೋಗ್ಯ ಸಮಸ್ಯೆ ಹಿನ್ನೆಲೆ  ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು […]

ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಮೆ ಯತ್ನ : ಮಗು ಮೃತ್ಯು

Thursday, November 7th, 2019
shivmogga

ಶಿವಮೊಗ್ಗ : ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿ, ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಮೆಗೆ ಯತ್ನಿಸಿರುವ ಘಟನೆ ತಾಲೂಕಿನ ಬೀರನಕೆರೆ ಗ್ರಾಮದಲ್ಲಿ ನಡೆದಿದೆ. ಬೀರನಕೆರೆ ಗ್ರಾಮದ ಚೈತ್ರ (24) ತನ್ನ 3 ವರ್ಷದ ಮಗು ಕೌಶಿಕ್ನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾರೆ. ಚೈತ್ರ ಬಾವಿಗೆ ಹಾರಿದನ್ನು ಕಂಡ ಗ್ರಾಮಸ್ಥರು ಬಾವಿಗೆ ಹಾರಿ ಚೈತ್ರರನ್ನು ರಕ್ಷಣೆ ಮಾಡಿ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಬಾವಿಯಲ್ಲಿ ಮಗು ಇರುವುದನ್ನು ಗಮನಿಸದ ಗ್ರಾಮಸ್ಥರು ತಾಯಿಯನ್ನು ಮಾತ್ರ ರಕ್ಷಣೆ ಮಾಡಿದ್ದಾರೆ. […]