ಬಂಟ್ವಾಳ : ಟ್ರಕ್ ಪಲ್ಟಿ ಚಾಲಕ ಮೃತ್ಯು

Wednesday, December 2nd, 2020
Bantwala Truck

ಬಂಟ್ವಾಳ:  ಬಂಟ್ವಾಳ ತಾಲೂಕಿನ ರಾ.ಹೆ.75ರ ನರಹರಿ ಪರ್ವತ ಬಳಿ ಕೃಷ್ಣಕೋಡಿ ಎಂಬಲ್ಲಿ ನಡೆದಿದ್ದುಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಪಲ್ಟಿಯಾದ ಘಟನೆ ನಡೆದಿದೆ, ಗಂಭೀರವಾಗಿ ಗಾಯಗೊಂಡಿದ್ದ ಚಾಲಕ  ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ವೈರ್ಗಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರಕ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಗಾಯಗೊಂಡ ಚಾಲಕ   ಅಕ್ರಮ್ ಬಾಷಾ ಅವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಮೆಲ್ಕಾರ್ ಸಂಚಾರ ಠಾಣಾ ಪೋಲೀಸರು ಬೇಟಿ ನೀಡಿ, […]

ಬ್ರೀಜ್ ಕಾರಿನಲ್ಲಿ ಗಾಂಜಾ ಸಾಗಾಟ, ಮೆಲ್ಕಾರ್ ನಲ್ಲಿ ಇಬ್ಬರ ಬಂಧನ

Thursday, November 12th, 2020
breez Ganja

ಬಂಟ್ವಾಳ : ಬ್ರೀಜ್  ಕಾರೊಂದರಲ್ಲಿ ಬಿ.ಸಿ.ರೋಡಿನಿಂದ ಮಾಣಿ ಮಾರ್ಗದಲ್ಲಿರುವ ಮೆಲ್ಕಾರ್ ಬಸ್ ನಿಲ್ದಾಣದ ಸಮೀಪ  ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಡಿಸಿಐಬಿ ಪೊಲೀಸರು, 1.48 ಕೆಜಿ ಗಾಂಜಾ ಮತ್ತು ಕಾರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ಬಂದರು ಅನ್ಸಾರಿ ಕ್ರಾಸ್ ರೋಡ್ ನಿವಾಸಿ ಟಿ.ಪಿ.ಫಾರೂಕ್ (50) ಮತ್ತು ನೇಪಾಳದ ನಿವಾಸಿ, ಸದ್ಯ ಪಿವಿಎಸ್ ವೃತ್ತದ ಬಳಿ ಪಿಜಿಯಲ್ಲಿ ವಾಸವಿರುವ ಸಾಗರ್ ಸಿಂಗ್ (22) ಬಂಧಿತ ಆರೋಪಿಗಳು. ಇಬ್ಬರೂ ಗಾಂಜಾ ಮಾರಾಟ ಮಾಡಲು ಬಂದಿರುವುದಾಗಿ ಒಪ್ಪಿಕೊಂಡಿದ್ದು, ಬಳಿಕ ಅವರ ವಶದಲ್ಲಿದ್ದ ಒಟ್ಟು […]

ಸ್ಕೂಟರಿಗೆ ಅಪರಿಚಿತ ದ್ವಿಚಕ್ರ ವಾಹನ ಹಿಟ್ ಎಂಡ್ ರನ್, ತಲೆಗೆ ಗಾಯಗೊಂಡಿದ್ದ ಸವಾರ ಸಾವು

Tuesday, September 1st, 2020
Scooter hit

ಬಂಟ್ವಾಳ: ಬಿ.ಸಿ.ರೋಡು ಸರ್ಕಲ್ ಬಳಿಯಲ್ಲಿ ದ್ವಿಚಕ್ರ ವಾಹನ ಸವಾರನಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ವಾಹನವನ್ನು ಮೆಲ್ಕಾರ್ ಟ್ರಾಫಿಕ್ ಠಾಣಾ ಎಸ್. ಐ.ರಾಜೇಶ್ ಕೆ.ವಿ.ನೇತೃತ್ವದ ತಂಡ ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ವಾಹನ ಚಾಲಕನ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ಸೋಮವಾರ ಸಂಜೆ ನಡೆದ ಹಿಟ್ ಎಂಡ್ ರನ್ ಪ್ರಕರಣದಲ್ಲಿ ಗಂಭೀರ ಸ್ವರೂಪದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ದ್ವಿಚಕ್ರ ವಾಹನ ಸವಾರ ಪ್ರಕಾಶ್ ಆರ್. ಚೌಟ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ವೇಳೆ ಮೃತಪಟ್ಟಿದ್ದಾರೆ. ನಿನ್ನೆ ಸಂಜೆ ವೇಳೆ ಬಿ.ಸಿ.ರೋಡು […]

ಮುಡಿಪು-ಮಿತ್ತಕೋಡಿ ಬಳಿ ರಸ್ತೆಗೆ ಗುಡ್ಡಕುಸಿತ ಪರಿಣಾಮ ವಾಹನ ಸಂಚಾರ ಅಸ್ತವ್ಯಸ..!

Tuesday, June 26th, 2018
mudipu-mitthagudi

ಮಂಗಳೂರು: ಕಳೆದೆರಡು ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮಂಗಳೂರಿನಿಂದ ಮುಡಿಪು ಮಾರ್ಗವಾಗಿ ಮೆಲ್ಕಾರ್ ಕಡೆ ಸಂಚರಿಸುವ ರಸ್ತೆಯ ಮಿತ್ತಕೋಡಿ ಎಂಬಲ್ಲಿ ಗುಡ್ಡವೊಂದು ಮುಖ್ಯ ರಸ್ತೆಗೆ ಕುಸಿದು ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ತೊಡಕುಂಟಾದ ಘಟನೆ ಕಳೆದ ತಡರಾತ್ರಿ ನಡೆದಿದೆ. ಮುಡಿಪು ಸಮೀಪದ ಮಿತ್ತಕೋಡಿ ಬಳಿ ಗುಡ್ಡವು ಭಾರೀ ಪ್ರಮಾಣದಲ್ಲಿ ಸಂಪರ್ಕ ರಸ್ತೆಗೆ ಕುಸಿದಿದೆ. ಇದರಿಂದಾಗಿ ಈ ಭಾಗದಲ್ಲಿ ಸಂಚರಿಸುವ ವಾಹನಗಳಿಗೆ ತೊಡಕುಂಟಾಗಿದೆ. ಈ ಹಿನ್ನೆಲೆಯಲ್ಲಿ ಮೆಲ್ಕಾರ್ ಕಡೆಗೆ ಸಂಚರಿಸುವ ವಾಹನವು ಪಜೀರು-ಕಂಬ್ಲಪದವು ಮಾರ್ಗವಾಗಿ ಹಾಗೂ ಕುರ್ನಾಡು ಮಾರ್ಗವಾಗಿ […]