ಕುಂದಾಪುರದತ್ತ ಸಾಗುತ್ತಿದ್ದ ಖಾಸಗಿ ಬಸ್‌ ಕಾರಿಗೆ ಢಿಕ್ಕಿ ಹೊಡೆದು ಹಲವರಿಗೆ ಗಾಯ

Saturday, September 3rd, 2016
Kundapur-accident

ಕುಂದಾಪುರ: ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಅನ್ನುವಳ್ಳಿ ಸೇತುವೆ ಬಳಿ ಕುಂದಾಪುರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಪಲ್ಟಿಯಾದ ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ತೀರ್ಥಹಳ್ಳಿಯಿಂದ ಕುಂದಾಪುರದತ್ತ ಸಾಗುತ್ತಿದ್ದ ಬಸ್ಸು ಮೇಗರವಳ್ಳಿ ಹತ್ತಿರ ಬರುತ್ತಿದ್ದಾಗ ಆಗುಂಬೆಯಿಂದ ತೀರ್ಥಹಳ್ಳಿಯತ್ತ ಸಾಗುತ್ತಿದ್ದ ಕಾರು ಬಸ್ಸಿನ ಹಿಂಬದಿಯ ಚಕ್ರಕ್ಕೆ ಬಲವಾಗಿ ಢಿಕ್ಕಿಹೊಡೆದ ಪರಿಣಾಮ ಬಸ್ಸಿನ ಹೌಸಿಂಗ್‌ ಪೂರ್ಣ ತುಂಡಾಗಿದ್ದರಿಂದ ನಿಯಂತ್ರಣ ತಪ್ಪಿದ ಬಸ್‌ ಪಲ್ಟಿಯಾಗಿತ್ತು. ಪಲ್ಟಿಯಾದ ರಭಸಕ್ಕೆ ಬಸ್ಸು ನಜ್ಜುಗುಜ್ಜಾಗಿತ್ತು. ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ಕುಂದಾಪುರದ ಬಳಿಯ ಬಸ್ರೂರಿನ ಸಯ್ಯದ್‌ಮಹಜಾಲಿನ್‌ ಹಾಗೂ […]