ಸಚಿವ ಮೇಟಿ ಪ್ರಕರಣ ಅವರ ವಿಚಾರವಾಗಿದ್ದು, ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ: ದಿನೇಶ್ ಗುಂಡೂರಾವ್

Friday, December 16th, 2016
Dinesh-gundu-rao

ಮಂಗಳೂರು: ಸಚಿವ ಮೇಟಿ ಪ್ರಕರಣ ನೋವು ತಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರೂ ನೋವು ವ್ಯಕ್ತಪಡಿಸಿದ್ದಾರೆ. ಆದರೆ ಇದು ಮೇಟಿಯವರ ವೈಯಕ್ತಿಕ ವಿಚಾರವಾಗಿದ್ದು, ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಬಂಟ್ವಾಳ ತಾಲೂಕಿನ ಕಳ್ಳಿಗೆಯಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಸಚಿವ ಬಿ.ರಮಾನಾಥ ರೈ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿ ಮೇಟಿಯವರಿಂದ ರಾಜೀನಾಮೆ ಪಡೆದುಕೊಂಡಾಗಿದೆ. ಇದಕ್ಕೂ ಸರ್ಕಾರದ ಆಡಳಿತಕ್ಕೂ ಸಂಬಂಧ ಇಲ್ಲ ಎಂದು ಸ್ಪಷ್ಟಪಡಿಸಿದರು. ಮುಂಬರುವ ಚುನಾವಣೆಗೆ ಕಾಂಗ್ರೆಸ್ […]