ಕಲಬುರಗಿ ಲೋಕೋಪಯೋಗಿ ಭವನ ಲೋಕಾರ್ಪಣೆ

Sunday, July 11th, 2021
Kalburgi PWD

ಕಲಬುರಗಿ :  ಲೊಕೋಪಯೋಗಿ ಇಲಾಖೆಯ ವಿವಿಧ ಹಂತದ ಕಚೇರಿಗಳು ಒಂದೇ ಸೂರಿನಡಿ ಇರಬೇಕೆಂಬ ಪರಿಕಲ್ಪನೆಯಿಂದ 47.10 ಕೋಟಿ ರೂ. ವೆಚ್ಚದಲ್ಲಿ ಆಕರ್ಷಕ ವಾಸ್ತುಶಿಲ್ಪಿಯೊಂದಿಗೆ ಕಲಬುರಗಿ ನಗರದಲ್ಲಿ ನಿರ್ಮಾಣಗೊಂಡಿರುವ “ಲೋಕೋಪಯೋಗಿ ಭವನ” ಸೇರಿದಂತೆ ಕಲಬುರಗಿ ಜಿಲ್ಲೆಯ 181.85 ಕೋಟಿ ರೂ. ಬೃಹತ್ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಚಾಲನೆ ನೀಡಿದರು. ನೂತನ ಲೋಕೋಪಯೋಗಿ ಭವನದಲ್ಲಿ ಅಯೋಜಿಸಲಾದ ಭವ್ಯ ಕಾರ್ಯಕ್ರಮದಲ್ಲಿ ಲೊಕೋಪಯೋಗಿ, ಸಮಾಜ ಕಲ್ಯಾಣ ಹಾಗೂ ಅರೋಗ್ಯ ಇಲಾಖೆಯ ಒಟ್ಟು 16 ಕಾಮಗಾರಿಗಳಿಗೆ ಅಡಿಗಲ್ಲು, ಶಂಕುಸ್ಥಾಪನೆ ಹಾಗೂ ಲೋಕಾರ್ಪಣೆಯನ್ನು […]

ನಿರಂತರವಾಗಿ ಸುರಿದ ಮಳೆಗೆ ಪಂಪ್ ವೆಲ್ ಜಲಾವೃತ್ತ

Saturday, May 29th, 2021
pumpwell

ಮಂಗಳೂರು : ನಿರಂತರವಾಗಿ ಸುರಿದ ಮಳೆಗೆ ಪಂಪ್ ವೆಲ್ ಜಲಾವೃತ್ತ ವಾಗಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.  ಪಂಪ್‌ವೆಲ್ ಮೇಲ್ಸೇತುವೆ ಕೆಳಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾದ ಕಾರಣ ಬೆಳಗ್ಗೆ ಹೊತ್ತು ಮಂಗಳೂರಿಗೆ ವಾಹನದಲ್ಲಿ ಬಂದವರು ಪರದಾಡುವ ಪರಿಸ್ಥಿತಿ ನಿರ್ಮಾಣವಾಯಿತು. ಶನಿವಾರ ತಡರಾತ್ರಿಯಿಂದ ಬೆಳಗ್ಗೆ ಸುಮಾರು 8 ಗಂಟೆಯವರೆಯೂ ಸುರಿದ ಮಳೆಯಿಂದಾಗಿ ನಗರದ ಹಲವು ರಾಜಕಾಲುವೆಗಳು, ಚರಂಡಿ ತೋಡುಗಳು ತುಂಬಿ ಹರಿದವು. 9 ಗಂಟೆಯ ಬಳಿಕ ಮಳೆ ಪ್ರಮಾಣ  ಕಡಿಮೆಯಾಗಿದೆ. ನಗರದ ಪಂಪ್‌ವೆಲ್ ಸೇತುವೆ ಕೆಳಭಾಗ ಸೇರಿದಂತೆ ಬೆಳಗ್ಗಿನ ಹೊತ್ತು […]

ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಕಾರು ಮತ್ತು ಸ್ಕೂಟರ್ ಡಿಕ್ಕಿ, ಮಹಿಳೆ ಮೃತ್ಯು

Thursday, May 20th, 2021
Thokkottu Accident

ಉಳ್ಳಾಲ : ಕಾರು ಮತ್ತು ಸ್ಕೂಟರ್ ನಡುವೆ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಉಂಟಾದ ಅಪಘಾತದಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಕುಂಪಲ ಆಶ್ರಯ ಕಾಲನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ವಸಂತಿ ಅವರು ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ತಲಪಾಡಿ ಕಡೆಗೆ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ […]

ಕೂಳೂರು ಮೇಲ್ಸೇತುವೆಯಿಂದ ಹಾರಿದ ವ್ಯಕ್ತಿ ನಾಪತ್ತೆ

Tuesday, November 3rd, 2020
Kuluru River

ಮಂಗಳೂರು : ಪ್ರತ್ಯಕ್ಷದರ್ಶಿಯೊಬ್ಬರು  ಕೂಳೂರು ಮೇಲ್ಸೇತುವೆಯಿಂದ ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವ ನದಿಗೆ ಹಾರಿರುವ  ಬಗ್ಗೆ  ಪೊಲೀಸರಿಗೆ ದೂರು  ನೀಡಿದ ಹಿನ್ನಲೆಯಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಇಂದು ಬೆಳಗ್ಗೆ 10:30ರ ಸುಮಾರಿಗೆ ವ್ಯಕ್ತಿಯೊಬ್ಬರು ಮೇಲ್ಸೇತುವೆಯಲ್ಲಿ ಸ್ವಲ್ಪ ನಡೆದು ಬಳಿಕ ನದಿಗೆ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ‌‌ ಕಾರ್ಯಪ್ರವೃತ್ತರಾದ ಪೊಲೀಸರು ಸ್ಥಳಕ್ಕಾಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಪಣಂಬೂರು ಹಾಗೂ ಕಾವೂರು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜತೆಗೆ ಅಗ್ನಿಶಾಮಕ ದಳವೂ ಸ್ಥಳದಲ್ಲಿ ಕಾರ್ಯಾಚರಣೆ […]

ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಕಾರು ಪಲ್ಟಿ, ಚಾಲಕ ಪಾರು

Saturday, August 8th, 2020
pumpwell

ಮಂಗಳೂರು:  ಪಂಪ್ ವೆಲ್ ಮೇಲ್ಸೇತುವೆಯ ಮೇಲೆ ಕಾರೊಂದು ಪಲ್ಟಿಯಾಗಿ, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಕಾರು ಸಂಪೂರ್ಣ ತಲೆಕೆಳಗಾಗಿ ಬಿದ್ದಿದ್ದು, ಸ್ಥಳಿಯರು ಚಾಲಕನನ್ನು ಹೊರತೆಗೆದರು. ಪಂಪ್ ವೆಲ್ ಸೇತುವೆಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿತ್ತು.