ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬಂದ 49 ವಿದ್ಯಾರ್ಥಿನಿಯರು ಮನೆಗೆ

Wednesday, February 16th, 2022
Hijab Students

ಮಂಗಳೂರು : ಬುಧವಾರ ಕಾಲೇಜುಗಳಿಗೆ ಹಿಜಾಬ್ ಧರಿಸಿ ಬಂದ 49 ವಿದ್ಯಾರ್ಥಿನಿಯರು ಪ್ರವೇಶ ನಿರಾಕರಿಸಿದ್ದಕ್ಕಾಗಿ ಹಿಂತಿರುಗಿ ಮನೆಗೆ ತೆರಳಿದ್ದಾರೆ. ಮಂಗಳೂರು ಕಾರ್‌ಸ್ಟ್ರೀಟ್‌ನ ದಯಾನಂದ ಪೈ ಪದವಿ ಕಾಲೇಜಿನ ಇಬ್ಬರು, ಮುಡಿಪು ಪದವಿ ಕಾಲೇಜಿನ 22, ಮೊಂಟೆಪದವು ಕಾಲೇಜಿನ 11, ಪೊಂಪೈ ಕಾಲೇಜಿನ 26, ಇಂದಿರಾ ನಗರ ಪದವಿ ಕಾಲೇಜಿನ 15 ಹಾಗು ಮೂಡುಬಿದಿರೆ ಮಹಾವೀರ ಕಾಲೇಜಿನ 6 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಮುಡಿಪು ಪದವಿ ಕಾಲೇಜು ಹಾಗು ಮೊಂಟೆಪದವು ಕಾಲೇಜಿನ ವಿದ್ಯಾರ್ಥಿನಿಯರು ಆಡಳಿತ ಮಂಡಳಿ ಹಾಗು ಪ್ರಾಂಶುಪಾಲರ ಸೂಚನೆ […]

ಮಂಗಳೂರು-ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಸಂಚಾರ ಆರಂಭ

Thursday, August 26th, 2021
ksrtc-bus

ಮಂಗಳೂರು :  ಮಂಗಳೂರು-ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಸಂಚಾರ ಆರಂಭಿಸಿದ ಹಿನ್ನಲೆಯಲ್ಲಿ ಮೊಂಟೆಪದವು ನಾಗರಿಕರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಮಂಗಳೂರಿನಿಂದ ನಾಟೆಕಲ್-ಮೊಂಟೆಪದವು ಮಾರ್ಗವಾಗಿ ಮುಡಿಪುವಿಗೆ ಸರಕಾರಿ ಬಸ್ ಒದಗಿಸುವಂತೆ ಸುಮಾರು 10 ವರ್ಷಗಳಿಂದ ಈ ಭಾಗದ ಜನರು ಒತ್ತಾಯಿಸುತ್ತಾ ಬಂದಿದ್ದರಲ್ಲದೆ, ಇಲ್ಲಿನ ಸಂಘ ಸಂಸ್ಥೆಗಳು ಹಲವು ಬಾರಿ ಹೋರಾಟವನ್ನೂ ನಡೆಸಿತ್ತು. ಸಂಬಂಧಪಟ್ಟವರಿಗೆ ಮನವಿಯನ್ನೂ ಸಲ್ಲಿಸಿತ್ತು. 10 ವರ್ಷದ ಹೋರಾಟದ ಫಲವಾಗಿ ಸರಕಾರಿ ಬಸ್ ಓಡಾಟ ಆರಂಭಿಸಿದ ಹಿನ್ನೆಲೆಯಲ್ಲಿ ನಾಗರಿಕರು ಸಂಭ್ರಮಿಸಿದರು.

ದೇವಸ್ಥಾನದಿಂದ ಕಾಣಿಕೆ ಡಬ್ಬಿ ಕಳವು ವಿಶ್ವ ಹಿಂದೂ ಪರಿಷತ್​ನ ಪ್ರಖಂಡ ಸಂಚಾಲಕ ಬಂಧನ

Monday, March 8th, 2021
Mohan

ಮಂಗಳೂರು : ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ನ ಉಳ್ಳಾಲ ಗ್ರಾಮಾಂತರ ಪ್ರಖಂಡದ ಸಂಚಾಲಕ ಮೊಂಟೆಪದವು ನಿವಾಸಿ ತಾರನಾಥ್ ಮೋಹನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಮಂಜನಾಡಿ ದೇವಸ್ಥಾನದಿಂದ ಕಾಣಿಕೆ ಡಬ್ಬಿ ಹಾಗೂ ಮೊಂಟೆಪದವು ಬಳಿಯ ಮನೆಯೊಂದರಿಂದ ಬೈಕ್ ಕಳವು ಮಾಡಿದ್ದ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಈ ಹಿನ್ನೆಲೆ ಸಾರ್ವಜನಿಕರು ಆತನನ್ನು ಹಿಡಿದು ಹತ್ತಿರದ ಕೊಣಾಜೆ ಪೊಲೀಸರಿಗೆ ಒಪ್ಪಿಸಿದ್ದಾರೆ.