ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆ, ಪರಿಸರ ಕಾಳಜಿಯನ್ನು ಮೂಡಿಸುವ ಪ್ರಯತ್ನ ನಡೆಯಬೇಕು : ಮೋಹನದಾಸ ಸ್ವಾಮೀಜಿ

Sunday, October 3rd, 2021
Manila Sree

ಧರ್ಮಸ್ಥಳ  : ಭಜನಾ ಮಂಡಳಿಯ ಸದಸ್ಯರು ತಮ್ಮ ತಮ್ಮ ಪ್ರದೇಶದ ಅಭಿವೃದ್ಧಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಇದಕ್ಕಾಗಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಎಂದು  ಅತ್ಯಾವಶ್ಯಕ ಎಂದು ಶ್ರೀ ಧಾಮ ಮಾಣಿಲ ಸೇವಾಧಾಮದ ಶ್ರೀ ಮೋಹನದಾಸ ಸ್ವಾಮೀಜಿಯವರು ಮಾತನಾಡಿದರು. ಅವರು  ಧರ್ಮಸ್ಥಳದಲ್ಲಿ  ಭಜನಾ ತರಬೇತಿ ಕಮ್ಮಟದ ಎರಡನೇ ದಿನದಂದು ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಭಜನಾರ್ಥಿಗಳು ಧಾರ್ಮಿಕವಾಗಿ ತೊಡಗಿಸಿಕೊಳ್ಳುವುದರ ಜೊತೆಗೆ ಸಾಮಾಜಿಕವಾಗಿ, ಪರಿಸರ ರಕ್ಷಣಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕಾದ ಅನಿವಾರ್ಯತೆ ಇದೆ. ಭೂಮಿಗೆ ನೀರಿಂಗಿಸುವ ಕೆಲಸ ಇಂದು ಆಗಬೇಕು. ಅಲ್ಲದೇ ಮಕ್ಕಳನ್ನು ತಮ್ಮ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಅವರಲ್ಲಿ ಧಾರ್ಮಿಕ ಪ್ರಜ್ಞೆ, […]

ಶ್ರೀ ಧಾಮ ಮಾಣಿಲದಲ್ಲಿ 48 ದಿನಗಳ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆ ಆರಂಭ

Monday, July 5th, 2021
Manila

ವಿಟ್ಲ:  ಶ್ರೀ ಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ವೃತಾಚರಣೆಯ ಪ್ರಯುಕ್ತ 48 ದಿನಗಳ ವರೆಗೆ ನಡೆಯಲಿರುವ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಪ್ರಥಮ ಪೂಜೆಯು ಜು.4ರಂದು ಆರಂಭ ಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ  ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಕಾರಸ್ಮರಣೆ ನಮ್ಮೊಳಗಿದ್ದರೆ ಪರಮಾತ್ಮನ ಶ್ರೀರಕ್ಷೆ ಸದಾ ಇರುತ್ತದೆ ಎಂದು ಹೇಳಿದರು. ಬಾಲಭೋಜನ ಕಾರ್ಯಕ್ರಮಕ್ಕೆ  ಸ್ವಾಮೀಜಿಯವರು ಚಾಲನೆ ನೀಡಿ ಆಶೀರ್ವಚನ ನೀಡಿದರು. ಎಲ್ಲಾ ಜೀವ ರಾಶಿಗಳು ಇವತ್ತು ಕೋವಿಡ್‌ನಿಂದಾಗಿ ನಲುಗಿ […]

ಕೊರೊನಾ ಮಹಾಮಾರಿಯನ್ನು ತೊಲಗಿಸಲು ಪ್ರತಿಯೊಬ್ಬರೂ ಕಟಿಬದ್ಧರಾಗಬೇಕು : ಶ್ರೀ ಮೋಹನದಾಸ ಸ್ವಾಮೀಜಿ

Saturday, August 1st, 2020
MohanadasaSwamiji

ಮಂಗಳೂರು : ಶ್ರೀಧಾಮ ಮಾಣಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರ ದಲ್ಲಿ 48 ದಿನಗಳ ವರಮಹಾಲಕ್ಷ್ಮಿ ಪೂಜೆ ಜುಲೈ 31ರಂದು ಚಂಡಿಕಾ ಯಾಗದ ಪೂರ್ಣಾಹುತಿ ಯೊಂದಿಗೆ ಸಮಾಪನ ಗೊಂಡಿತು. ಬೆಳಗ್ಗೆ ಗಣಪತಿ ಹೋಮ ನಾನಾ ಧಾರ್ಮಿಕ ಕಾರ್ಯಕ್ರಮಗಳ ಬಳಿಕ ಚಂಡಿಕಾ ಯಾಗ, ಕನಕಾಧಾರಾ ಯಾಗ ಪೂರ್ಣಹುತಿ ನಡೆಯಿತು. ಭಜನಾ ಸತ್ಸಂಗ ಕಾರ್ಯಕ್ರಮ ಪ್ರಸ್ತುತಗೊಂಡಿತು. ಸಂಜೆ ದುರ್ಗಾಪೂಜೆ, ಆಶ್ಲೇಷ ಬಲಿ ನಡೆದವು. ಕೊರೊನಾ ಸೋಂಕಿತರನ್ನು ನೋಡುವ ದೃಷ್ಟಿ ಬದಲಾಗಬೇಕಾಗಿದೆ. ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ಸಿಗುವಂತಾಗಲು ಮಾನವೀಯ ಮೌಲ್ಯಗಳ ಅಗತ್ಯತೆಯಿದೆ. ಈ ಮಹಾಮಾರಿಯನ್ನು ತೊಲಗಿಸಲು […]

ಸ್ವಸ್ಥ, ಸದೃಢ ಸಮಾಜದ ನಿರ್ಮಾಣ ನಮ್ಮಧ್ಯೇಯವಾಗಲಿ- ಮೋಹನದಾಸ ಸ್ವಾಮೀಜಿ

Thursday, January 28th, 2016
Mohanadasa Swamiji

ಉಪ್ಪಳ: ಯುವ ಸಮೂಹ ಯಾವುದೇ ದುಶ್ಚಟಗಳಿಗೆ ದಾಸರಾಗದೆ ಸ್ವಸ್ಥ, ಸದೃಢ ಸಮಾಜದ ನಿರ್ಮಾಣ ರೂವಾರಿಗಳಾಗಬೇಕೆಂದು ಮಾಣಿಲ ಶ್ರೀಧಾಮದ ಶ್ರೀ ಪರಮಹಂಸ ಮೋಹನದಾಸ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಬಾಯಾರು ಸಮೀಪದ ಚೇರಾಲು ಶಾರದಾ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಸ್ವಾಮೀಜಿ ಆಶೀರ್ವಚನ ನೀಡುತ್ತ ಮಾತನಾಡುತ್ತಿದ್ದರು. ಮಾತೆಯರು ಸಚ್ಚಾರಿತ್ರ್ಯ ಅಳವಡಿಸಿ ಮಕ್ಕಳಿಗೆ ಉತ್ತಮ ಸಂಸ್ಕಾರ, ಮೌಲ್ಯಯುತ ಶಿಕ್ಷಣವನ್ನು ನೀಡಬೇಕು ಎಂದು ತಿಳಿಸಿದ ಅವರು ಯುವ ಪೀಳಿಗೆ ಉತ್ತಮ ರೀತಿ, ನೀತಿ ಜೊತೆ ಭಕುತಿ ಮಾರ್ಗದಿಂದ ಸೌಹಾರ್ದಯುತ ಸಮಾಜವನ್ನು ನಿರ್ಮಿಸಬೇಕೆಂದು ಕರೆಯಿತ್ತರು. […]

ಕೊಂಡೆವೂರಲ್ಲಿ 12 ನೇ ಅಖಂಡ ಭಜನಾ ಸಪ್ತಾಹಕ್ಕೆ ಚಾಲನೆ

Wednesday, April 1st, 2015
Kodevooru Bhajane

ಮಂಜೇಶ್ವರ : ಕೊಂಡೆವೂರಿನ ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ಮಾರ್ಚ್ 30 ರಿಂದ ಏಪ್ರಿಲ್ 6 ಸೋಮವಾರ ಸೂರ್ಯಾಸ್ತದವರೆಗೆ ನಡೆಯುವ 12 ನೇ ಅಖಂಡ ಭಜನಾ ಸಪ್ತಾಹಕ್ಕೆ ಮಾಣಿಲ ಶ್ರೀ ಧಾಮದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಸೂರ್ಯಾಸ್ತಕ್ಕೆ ಸರಿಯಾಗಿ ದೀಪ ಬೆಳಗಿಸಿ ಚಾಲನೆ ನೀಡಿದರು. ಅಲ್ಲದೇ ಪರಮ ಪೂಜ್ಯ ಮಾಣಿಲ ಶ್ರೀಗಳು ಭಜನೆ ಹಾಡುವುದರೊಂದಿಗೆ ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಜಿಲ್ಲೆಯ, ಪರಜಿಲ್ಲೆಯ ಭಕ್ತಾದಿಗಳ ಭಜನಾ ತಂಡಗಳು ಈ ಅಖಂಡ ಭಜನಾ ಸಪ್ತಾಹದಲ್ಲಿ ಪಾಲ್ಗೊಳ್ಳಲಿವೆ […]