ಮಂಗಳೂರು ಮಳೆಗೆ ಇಬ್ಬರು ಬಲಿ…ಡಿಸಿಯಿಂದ ಪರಿಹಾರದ ಚೆಕ್‌ ವಿತರಣೆ

Wednesday, May 30th, 2018
sesikanth-senthil

ಮಂಗಳೂರು: ನಿನ್ನೆ ಸುರಿದ ಭಾರಿ ಮಳೆಗೆ ಇಬ್ಬರು ಬಲಿಯಾಗಿದ್ದರು. ಸಂತ್ರಸ್ತರ ಕುಟುಂಬಕ್ಕೆ ತಲಾ ಐದು‌ ಲಕ್ಷ ರೂ. ಪರಿಹಾರದ ಚೆಕನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ವಿತರಿಸಿದರು. ಮಹಾಮಳೆಗೆ‌ ಉದಯನಗರದ ಮೋಹಿನಿ ಮತ್ತು ಕೊಡಿಯಾಲ್ ಬೈಲ್‌ನ ಮುಕ್ತಾಬಾಯಿ ಸಾವನ್ನಪ್ಪಿದರು. ಅವರ ಮೃತದೇಹ ಪೋಸ್ಟ್ ಮಾರ್ಟಂಗಾಗಿ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಜಿಲ್ಲಾಧಿಕಾರಿ ವೆನ್‌ಲಾಕ್ ಆಸ್ಪತ್ರೆ ಗೆ ತೆರಳಿ ಎರಡು ಕುಟುಂಬದವರಿಗೆ ಪರಿಹಾರದ ಚೆಕ್ ವಿತರಿಸಿದ್ದಾರೆ.

ಬಜಪೆ ಮಕ್ಕಳ ಗ್ರಾಮ ಸಭೆ

Monday, December 25th, 2017
bajpe-village

ಬಜಪೆ: ಸರಕಾರ ಕೇವಲ ಸರಕಾರಿ ಶಾಲೆ ವಿದ್ಯಾರ್ಥಿಗಳಿಗೆ ಮಾತ್ರ ಸಮವಸ್ತ್ರ ನೀಡುತ್ತಿದೆ.ಅನುದಾನಿತ ಶಾಲೆಯಲ್ಲಿಯೂ ಬಡ ವಿದ್ಯಾರ್ಥಿಗಳು ಇದ್ದಾರೆ. ಶಿಕ್ಷಣ ಇಲಾಖೆ ಈ ಬಗ್ಗೆ ಗಮನಿಸಿ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೂ ಸಮವಸ್ತ್ರಗಳನ್ನು ಉಚಿತವಾಗಿ ನೀಡಬೇಕು. ಗ್ರಾಮ ಪಂಚಾಯತ್‌ ಈ ಬಗ್ಗೆ ನಿರ್ಣಯ ಕೈಗೊಂಡು ಸರಕಾರಕ್ಕೆ ಮನವಿ ಮಾಡಬೇಕು ಎಂದು ಬಜಪೆ ಗ್ರಾಮ ಪಂಚಾಯತ್‌ ಮಕ್ಕಳ ಗ್ರಾಮ ಸಭೆಯಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು. ಬಜಪೆ ಗ್ರಾಮ ಪಂಚಾಯತ್‌ ವ್ಯಾಪ್ತಿಯ 2017- 18ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಡಿ. 23ರಂದು ಗ್ರಾಮ […]