ಕರ್ನಾಟಕದಲ್ಲಿ ಒಂದೇ ದಿನ 216 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

Saturday, May 23rd, 2020
karnataka-corona

ಬೆಂಗಳೂರು: ಕರ್ನಾಟಕದಲ್ಲಿ ಮಾರಕ ಕೊರೋನಾ ವೈರಸ್ ಗೆ  ಒಂದೇ ದಿನ 216 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. ಇಂದು ಮಧ್ಯಾಹ್ನದ ವರದಿಯಲ್ಲಿ 196 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿತ್ತು. ಆದರೆ ಸಂಜೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ವರದಿಯಲ್ಲಿ ಮತ್ತೆ 20 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಆ ಮೂಲಕ ಇಂದು ಒಂದೇ ದಿನ 216 ಮಂದಿಯಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1959ಕ್ಕೆ ಏರಿಕೆಯಾಗಿದೆ. […]

ಟ್ರ್ಯಾಕ್ಟರ್​​ಗೆ ಬೈಕ್​ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

Tuesday, November 20th, 2018
accident

ಕಲಬುರಗಿ: ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಹತ್ತಿರ ನಡೆದಿದೆ. ಯಾದಗಿರಿ ತಾಲೂಕು ಯರಗೋಳ ಗ್ರಾಮದ ನಿವಾಸಿ ಹಳ್ಳೆಪ್ಪ (25) ಮೃತಪಟ್ಟ ಬೈಕ್ ಸವಾರನೆಂದು ಗುರುತಿಸಲಾಗಿದೆ. ಯರಗೋಳದಿಂದ ನಾಲವಾರ ಕಡೆ ಹಳ್ಳೆಪ್ಪ ಬೈಕ್ನಲ್ಲಿ ಹೊರಟ್ಟಿದ್ದ. ಈ ವೇಳೆ ರಸ್ತೆ ಬದಿ ನಿಲ್ಲಿಸಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

SSLC ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ, ಯಾದಗಿರಿಗೆ ಮತ್ತೆ ಕೊನೆಯ ಸ್ಥಾನ

Monday, May 7th, 2018
SSLC-result

ಉಡುಪಿ: 2018 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸೋಮವಾರ (ಮೇ7) ಹೊರಬಿದ್ದಿದೆ. ಈ ಬಾರಿ ಒಟ್ಟಾರೆ ಶೇ.71.93 ಫಲಿತಾಂಶ ಬಂದಿದೆ. ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿಗೆ ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಶೇಕಡಾ 4ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ, ಬಾಲಕಿಯರೇ ಮೇಲುಗೈ, ಶೇ. 78.01ವಿದ್ಯಾರ್ಥಿನಿಯರು ತೇರ್ಗಡೆ, ಶೇ.66.56 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಳೆದ ಬಾರಿ 67.87ಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ ಟಾಪರ್, 625ಕ್ಕೆ 625 ಅಂಕವನ್ನು ಇಬ್ಬರು ವಿದ್ಯಾರ್ಥಿಗಳು ಪಡೆದಿದ್ದು, 624 ಅಂಕಗಳನ್ನು […]